ವಿಧಾನಪರಿಷತ್ ಚುನಾವಣೆ; ಅನ್ಯ ಪಕ್ಷಗಳಿಂದ ಬಂದವರಿಗೆ ಟಿಕೆಟ್ ಇಲ್ಲ: ಕುಮಾರಸ್ವಾಮಿ
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಅನ್ಯ ಪಕ್ಷಗಳಿಂದ ಬಂದವರಿಗೆ ಜೆಡಿಎಸ್ ನಿಂದ ಟಿಕೆಟ್ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿರುವ ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ವಿಧಾನಪರಿಷತ್ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಸೋಮವಾರ ಪ್ರಕಟಿಸಲಾಗುವುದು. ನಮ್ಮಲ್ಲಿ ಸಮರ್ಥ ಅಭ್ಯರ್ಥಿಗಳಿಗೆ ಬರವಿಲ್ಲ. ಗೆಲ್ಲುವ ಶಕ್ತಿ ಇರುವವರು ಇದ್ದಾರೆ ಎಂದು ತಿಳಿಸಿದ್ದಾರೆ.
'ಆರರಿಂದ ಎಂಟು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಕಾಂಗ್ರೆಸ್, ಬಿಜೆಪಿಯ ಅಸಮಾಧಾನಿತರಿಗೆ ಕಾದು ಕುಳಿತಿಲ್ಲ. ಈಗ ನಿರ್ಧಾರ ಮಾಡಿರುವ ಕ್ಷೇತ್ರಗಳಲ್ಲಿ ಬದಲಾವಣೆ ಇಲ್ಲ' ಎಂದು ಅವರು ತಿಳಿಸಿದರು.
Next Story