Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಜನಸ್ನೇಹಿ ಸಭಾಂಗಣ ಮುಚ್ಚಬೇಡಿ

ಜನಸ್ನೇಹಿ ಸಭಾಂಗಣ ಮುಚ್ಚಬೇಡಿ

ವಾರ್ತಾಭಾರತಿವಾರ್ತಾಭಾರತಿ19 Nov 2021 11:34 PM IST
share

ಮಾನ್ಯರೆ,

ಮೈಸೂರಿನ ರಂಗಾಯಣದ ಆವರಣದಲ್ಲಿ, ಕಲಾಮಂದಿರಕ್ಕೆ ಹೊಂದಿಕೊಂಡಂತಿರುವ ಮನೆ ಅಂಗಳ ಸಭಾಂಗಣ ಮುಚ್ಚಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಕಚೇರಿಯಾಗಿ ಮಾರ್ಪಡಿಸುವ ಸರಕಾರದ ನಿರ್ಧಾರ ಅಕ್ಷಮ್ಯ ಮತ್ತು ಕಲಾಭಂಜಕ, ಸಾಹಿತ್ಯ ವಿರೋಧಿ ಕ್ರಮ. ಮನೆ ಅಂಗಳ ಸಣ್ಣ ಪ್ರಮಾಣದ ಸಭೆಗಳಿಗೆ ಸೂಕ್ತವಾದ ಒಂದು ಅಂಗಳ. ಕಳೆದ ಹಲವು ವರ್ಷಗಳಲ್ಲಿ ಮನೆ ಅಂಗಳ ನೂರಾರು ಸಾಹಿತ್ಯ ಕೃತಿಗಳ ಬಿಡುಗಡೆಗೆ, ನೂರಾರು ಖ್ಯಾತನಾಮರ ಸನ್ಮಾನಕ್ಕೆ, ಹಲವಾರು ಕಲಾವಿದರ ಕಲಾ ಪ್ರದರ್ಶನಕ್ಕೆ ಮತ್ತು ಕೆಲವೇ ಜನರು ಸೇರುವಂತಹ ಚರ್ಚಾಕೂಟಗಳಿಗೆ, ಸಂವಾದಗಳಿಗೆ ಸಾಕ್ಷಿಯಾಗಿದೆ. ಸಣ್ಣ ಪುಟ್ಟ ಸಂಘ ಸಂಸ್ಥೆಗಳಿಗೆ, ಸಂಘಟನೆಗಳಿಗೆ ಕೈಗೆಟುಕುವ ದರದಲ್ಲಿ ಈ ಸಭಾಂಗಣ ಲಭ್ಯವಾಗುತ್ತಿದೆ. ಕಲಾಮಂದಿರದಲ್ಲಿ ಯಾವುದಾದರೂ ಕಾರ್ಯಕ್ರಮ ನಡೆಯುತ್ತಿದ್ದರೆ ಅಲ್ಲಿನ ಸದ್ದು ಈ ಸಭಾಂಗಣದ ಕಾರ್ಯಕ್ರಮಗಳಿಗೆ ಅಡಚಣೆ ಉಂಟುಮಾಡುತ್ತಿತ್ತು ಎಂಬುದರ ಹೊರತಾಗಿ, ಮನೆ ಅಂಗಳ ಒಂದು ಜನಸ್ನೇಹಿ ಸಭಾಂಗಣವಾಗಿದೆ.
ಈ ಸಭಾಂಗಣ ನೂರಾರು ಸಾಹಿತ್ಯ ಕೃತಿಗಳ, ಪುಸ್ತಕಗಳ ಲೋಕಾರ್ಪಣೆಗೆ ಸಾಕ್ಷಿಯಾಗಿದೆ. (ನನ್ನ ಮೊದಲ ಪುಸ್ತಕ 'ಒಳದನಿ' ಸಹ ಇಲ್ಲೇ ಬಿಡುಗಡೆಯಾಗಿತ್ತು). ಈ ನೆನಪುಗಳಷ್ಟೇ ಅಲ್ಲದೆ, ಈ ಸಭಾಂಗಣದಲ್ಲಿ ಕನ್ನಡದ ಪ್ರಖ್ಯಾತ ಸಾಹಿತಿ ಕಲಾವಿದರ ಹೆಜ್ಜೆ ಗುರುತುಗಳಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಕಚೇರಿಗೆ ಕಲಾಮಂದಿರ ಅಥವಾ ರಂಗಾಯಣದ ಆವರಣದಲ್ಲೇ ಸಾಕಷ್ಟು ಜಾಗ ಲಭ್ಯವಿರುವಾಗ, ಈ ಉದ್ದೇಶಕ್ಕಾಗಿ ಮನೆ ಅಂಗಳಕ್ಕೆ ಕೊಡಲಿಪೆಟ್ಟು ಹಾಕುವುದು ಅಕ್ಷಮ್ಯ. ಕಲೆ, ಸಾಹಿತ್ಯ, ಸಂಗೀತ ಮುಂತಾದ ಸಾಂಸ್ಕೃತಿಕ ಸಾರ್ವಜನಿಕ ಅಭಿವ್ಯಕ್ತಿಗೆ ಕೇಂದ್ರವಾಗಿರುವ ಒಂದು ಸಭಾಂಗಣವನ್ನು ಮತ್ತಷ್ಟು ಆಧುನೀಕರಣಗೊಳಿಸಿ, ಕಲಾಮಂದಿರದ ಸದ್ದು ಅಡಚಣೆ ಮಾಡದಂತೆ ಸೌಂಡ್ ಪ್ರೂಫ್ ಮಾಡುವ ನಿರ್ಧಾರ ಕೈಗೊಂಡಿದ್ದರೆ ಸಂಸ್ಕೃತಿ ಇಲಾಖೆಯ ಅಸ್ತಿತ್ವವೂ ಸಾರ್ಥಕವಾಗುತ್ತಿತ್ತು.

ಆದರೆ ಸಾಂಸ್ಕೃತಿಕ ವಲಯವನ್ನೂ ವಾಣಿಜ್ಯೀಕರಣಗೊಳಿಸಿ, ಕೇಸರೀಕರಣಕ್ಕೆ ಸಿದ್ಧಪಡಿಸುತ್ತಿರುವ ಬಿಜೆಪಿ ಆಡಳಿತ, ಮನೆ ಅಂಗಳದಂತಹ ಒಂದು ಸಾಹಿತ್ಯ ಪ್ರಜ್ಞೆಯ ಕುರುಹನ್ನೇ ಅಳಿಸಿಹಾಕಲು ಮುಂದಾಗಿರು ವುದು ದುರಂತ. ಇದರ ವಿರುದ್ಧ ಮೈಸೂರಿನ ಕನ್ನಡದ ಮನಸುಗಳು, ಸಾಹಿತ್ಯಕ ಹೃದಯಗಳು, ಕಲಾರಾಧಕರು ದನಿ ಎತ್ತಲೇಬೇಕಿದೆ. ಸರಕಾರದ ಈ ಖಂಡನಾರ್ಹ ಕ್ರಮದ ವಿರುದ್ಧ ಹೋರಾಡಬೇಕಿದೆ.
-ನಾ. ದಿವಾಕರ, ಮೈಸೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X