Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಪಿಎಂಸಿ, ಭೂ ಸುಧಾರಣೆ ತಿದ್ದುಪಡಿ...

ಎಪಿಎಂಸಿ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ತಕ್ಷಣ ವಾಪಸ್‍ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 Nov 2021 7:02 PM IST
share
ಎಪಿಎಂಸಿ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ತಕ್ಷಣ ವಾಪಸ್‍ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ನ. 20: `ಕರಾಳ ಕೃಷಿ ಕಾಯ್ದೆಗಳನ್ನು ಪ್ರಧಾನಿ ಮೋದಿ ಸರಕಾರ ವಾಪಸು ಪಡೆದಂತೆ ರಾಜ್ಯ ಬಿಜೆಪಿ ಸರಕಾರವೂ ರೈತ ವಿರೋಧಿಯಾಗಿರುವ ಎಪಿಎಂಸಿ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ ಮತ್ತು ಭೂ ಸುಧಾರಣಾ (ತಿದ್ದುಪಡಿ) ಕಾಯ್ದೆಯನ್ನು ತಕ್ಷಣ ವಾಪಾಸು ಪಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಶನಿವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು, `ಕರಾಳ ಕೃಷಿ ಕಾಯ್ದೆಗಳನ್ನು ರೈತರ ಮೇಲೆ ಹೇರಿದ ಮೋದಿ ಸರಕಾರದ ಅಪರಾಧದಲ್ಲಿ ರಾಜ್ಯ ಬಿಜೆಪಿ ಸರಕಾರದ ಸಮಾನ ಪಾಲಿದೆ. ಮೋದಿ ಅವರು ಕೊಂದ ಪಾಪವನ್ನು ತಿಂದು ಪರಿಹರಿಸಿಕೊಂಡರು, ಈಗ ರಾಜ್ಯ ಬಿಜೆಪಿ ಸರಕಾರದ ಸರದಿ. ಎಪಿಎಂಸಿಗಳ ನಿಯಂತ್ರಣವಿಲ್ಲದೆ ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶಕ್ಕಾಗಿ ಪ್ರಯತ್ನಿಸುತ್ತಲೇ ಬಂದಿರುವ ಖಾಸಗಿ ಕಂಪೆನಿಗಳಿಗೆ ಹೆಬ್ಬಾಗಿಲು ತೆರೆಯುವುದೇ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆಯ ದುರುದ್ದೇಶವಾಗಿದೆ' ಎಂದು ದೂರಿದ್ದಾರೆ.

`ಎಪಿಎಂಸಿಯ ಹೊಸ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ನಂತರ ರಾಜ್ಯ ಸರಕಾರಕ್ಕೆ ಎಂಪಿಎಂಸಿಯಿಂದ ಹೊರಗಿರುವ ವರ್ತಕರ ಮೇಲೆ ಯಾವ ನಿಯಂತ್ರಣವೂ ಇರುವುದಿಲ್ಲ. ಅವರ ವ್ಯವಹಾರದ ಮೇಲೆ ನಿಗಾ ಇಡುವಂತಿಲ್ಲ, ಶುಲ್ಕ, ಸೆಸ್, ಲೆವಿ ಸಂಗ್ರಹಿಸುವಂತಿಲ್ಲ. ಇದು ಸರಕಾರದ ಸಂಪೂರ್ಣ ಶರಣಾಗತಿ. ಪ್ರಸ್ತುತ ಶೇ.6ರಷ್ಟು ರೈತರು ಎಪಿಎಂಸಿಗಳಲ್ಲಿ ಬೆಳೆ ಮಾರಾಟ ಮಾಡುತ್ತಿದ್ದು ಶೇ.94ರಷ್ಟು ರೈತರಿಗೆ ಮಾರುಕಟ್ಟೆ ಸೌಲಭ್ಯಗಳಿಲ್ಲ. ರೈತರಿಗೆ ನೆರವಾಗುವ ಉದ್ದೇಶ ಸರಕಾರಕ್ಕಿದ್ದರೆ ಮಾರುಕಟ್ಟೆಗಳಿಲ್ಲದ ಕಡೆಗಳಲ್ಲಿ ಎಪಿಎಂಸಿಯಿಂದ ಪರವಾನಿಗೆ ಪಡೆದು ಮಾರುಕಟ್ಟೆಗಳನ್ನು ಸ್ಥಾಪಿಸಲು ಸರಕಾರ ಉತ್ತೇಜನ ನೀಡಬಹುದಾಗಿದೆ' ಎಂದು ಅವರು ಸಲಹೆ ನೀಡಿದ್ದಾರೆ.

`ರೈತರ ಭೂಮಿಗಿದ್ದ ರಕ್ಷಣೆಯನ್ನು ಕಿತ್ತು ಹಾಕಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಭೂಗಳ್ಳರಿಗೆ ನೆರವಾಗುವ ದುರುದ್ದೇಶದ್ದು. ನಮ್ಮ ವಿರೋಧವನ್ನು ಧಿಕ್ಕರಿಸಿ ರಾಜ್ಯ ಸರಕಾರ ಅನುಷ್ಠಾನಗೊಳಿಸಲು ಹೊರಟಿದೆ. ಕೇಂದ್ರ ಸರಕಾರದಂತೆ ರಾಜ್ಯ ಸರಕಾರವೂ ತನ್ನ ತಪ್ಪನ್ನು ತಿದ್ದಿಕೊಳ್ಳಬೇಕು. ಕೃಷಿ ಭೂಮಿ ಖರೀದಿಗೆ ಇದ್ದ 25 ಲಕ್ಷ ರೂ.ಆದಾಯದ ಮಿತಿಯನ್ನು ರದ್ದುಗೊಳಿಸಿ, ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಲು, ಭೂ ಸುಧಾರಣಾ ಕಾಯ್ದೆ 1961ರ ಸಕ್ಷನ್ 80 ಮತ್ತು 79 ಎ, ಬಿ, ಸಿ ಗಳನ್ನು ರದ್ದು ಮಾಡಿರುವ ಬಿಜೆಪಿ ಸರಕಾರ, ರೈತರನ್ನು ಬೀದಿಪಾಲು ಮಾಡಲು ಹೊರಟಿದೆ. ಭೂ ಸುಧಾರಣಾ ಕಾಯ್ದೆ 1961ರ ಸೆಕ್ಷನ್ 79, ಅ ಯಡಿಯಲ್ಲಿ ಸುಮಾರು 1.7 ಲಕ್ಷ ಎಕರೆ ಜಮೀನಿಗೆ ಸಂಬಂಧಿಸಿದ 13,814 ಪ್ರಕರಣಗಳು ದಾಖಲಾಗಿತ್ತು. ಭೂ ಸುಧಾರಣೆ ತಿದ್ದುಪಡಿ ಮಸೂದೆಯಿಂದ ಈ ಪ್ರಕರಣಗಳು ರದ್ದಾಗಿ ಸರಕಾರದ ಖಜಾನೆಗೆ ಸಾವಿರಾರು ಕೋಟಿ ರೂ.ನಷ್ಟವಾಗಲಿದೆ. ಸದನದ ಒಳಗೆ ಮತ್ತು ಹೊರಗೆ ಈ ಎರಡು ಕರಾಳ ಕಾಯ್ದೆಗಳನ್ನು  ಕಾಂಗ್ರೆಸ್ ಪಕ್ಷ ವಿರೋಧಿಸಿದೆ. ಇಂತಹ ಕಾಯ್ದೆಗಳನ್ನು ರೂಪಿಸುವ ಹಂತದಲ್ಲಿ ರೈತ ನಾಯಕರು ಮತ್ತು ವಿರೋಧಪಕ್ಷಗಳ ಜೊತೆ ಚರ್ಚೆ ನಡೆಸುವುದು ಪ್ರಜಾಪ್ರಭುತ್ವದ ನಡವಳಿಕೆ' ಎಂದು ಅವರು ತಿಳಿಸಿದ್ದಾರೆ.

`ಬಿಜೆಪಿ ಸರಕಾರ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದೆ. ಎಪಿಎಂಸಿ(ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ ಮತ್ತು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ವಾಪಸು ಪಡೆಯಲು ರಾಜ್ಯ ಕಾಂಗ್ರೆಸ್ ಪಕ್ಷ ಹೋರಾಟ ನಡೆಸುವುದರ ಜೊತೆಗೆ ರಾಜ್ಯದ ರೈತ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಹೋರಾಟಕ್ಕೂ ಬೆಂಬಲ ನೀಡಲಿದೆ' ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X