ನ. 24ರಂದು ಟೇಬಲ್ ಟೆನ್ನಿಸ್ ಪಂದ್ಯಾವಳಿ
ಉಡುಪಿ, ನ.20: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದಲ್ಲಿ ವಿಶ್ವೇಶ್ವರಯ್ಯನ ತಾಂತ್ರಿಕ ವಿಶ್ವದ್ಯಾನಿಲಯದ ಅಧೀನದಲ್ಲಿರುವ ಮಂಗಳೂರು ವಲಯ ಕಾಲೇಜುಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ನ.24ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾಲಯದ ಆವರಣದಲ್ಲಿ ಜರಗಲಿದೆ.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್, ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ಭಾಗವಸಲಿರುವರು. ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story