Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಊರಿನಲ್ಲಿ ಕಾಲೇಜು ಆರಂಭಿಸುವ ಕನಸಿದೆ:...

ಊರಿನಲ್ಲಿ ಕಾಲೇಜು ಆರಂಭಿಸುವ ಕನಸಿದೆ: ಹರೇಕಳ ಹಾಜಬ್ಬ

ವಾರ್ತಾಭಾರತಿವಾರ್ತಾಭಾರತಿ20 Nov 2021 9:45 PM IST
share
ಊರಿನಲ್ಲಿ ಕಾಲೇಜು ಆರಂಭಿಸುವ ಕನಸಿದೆ: ಹರೇಕಳ ಹಾಜಬ್ಬ

ಬೆಂಗಳೂರು, ನ.20: ಬಡಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಊರಿನಲ್ಲಿಯೇ ಪಬ್ಲಿಕ್ ಶಾಲೆ ಮತ್ತು ಪಿಯು ಕಾಲೇಜು ಆರಂಭಿಸುವ ಕನಸು ಇದೆ ಎಂದು ಪದ್ಮಶ್ರೀ ಪುರಸ್ಕೃತ, ಸಮಾಜ ಸೇವಕ ಹರೇಕಳ ಹಾಜಬ್ಬ ನುಡಿದರು.

ಶನಿವಾರ ನಗರದ ಕನ್ನಡ ಭವನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದಲ್ಲಿ 217ನೆ ತಿಂಗಳ ಅತಿಥಿಯಾಗಿ ಪಾಲ್ಗೊಂಡು ತಾವು ಸಾಗಿ ಬಂದ ಹಾದಿಯನ್ನು ಮೆಲಕು ಹಾಕಿದರು.

ಊರಿನಲ್ಲಿಯೇ ಬಡಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು.ಇದಕ್ಕಾಗಿ ಪಬ್ಲಿಕ್ ಶಾಲೆ ಮತ್ತು ಪಿಯು ಕಾಲೇಜು ಆರಂಭಿಸಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರಕಾರ ಹೆಜ್ಜೆಯಿರಿಸಲಿ ಎಂದು ಹೇಳಿದರು.

ಕಿತ್ತಲೆ ಹಣ್ಣು ಮಾರಾಟ ಮಾಡಿ ದಿನಕಳೆಯುತ್ತಿದ್ದ ನನ್ನನು ಗಡಿಮೀರಿ ಜನರು ಪ್ರೀತಿ ತೋರಿಸುತ್ತಿದ್ದಾರೆ.ಬಡತನದ ಜೀವನ ನನ್ನನ್ನು ಪದ್ಮಶ್ರೀ ವರೆಗೂ ಕೊಂಡೊಯ್ದಿದೆ. ಇದಕ್ಕಿಂತ ಇನ್ನೇನು ನನಗೆಬೇಕು ಎಂದು ಅವರು ತಿಳಿಸಿದರು. 

ಕಿತ್ತಲೆ ಹಣ್ಣು ಮಾರಿ ದಿನಕ್ಕೆ 300 ರೂ. ಸಂಪಾದಿಸುತ್ತಿದ್ದ ನನ್ನನ್ನು  ಕೇಂದ್ರ ಸರಕಾರ 20 ಸಾವಿರ ರೂ.ಒಂದು ದಿನಕ್ಕೆ ಖರ್ಚು ಮಾಡಿ ಭವ್ಯ ಹೋಟೆಲ್ ನಲ್ಲಿ ಇರಿಸಿತು.ಇದನ್ನು ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ ಎಂದ ಅವರು, ಅಕ್ಷರದ ಅರಿವಿಲ್ಲದ ಮುಜಗರದ ಬದುಕು ನನ್ನೂರಿನಲ್ಲಿ ನಾನು ಶಾಲೆ ತೆರೆಯುವಂತೆ ಮಾಡಿತು.ನನ್ನೂರ ನೂರಾರು ಬಡ ಮಕ್ಕಳ ಬದುಕಿಗೆ ಅದು ಅರಿವಿನ ಬೆಳಕಾಗಿತು ಎಂದು ತಿಳಿಸಿದರು.

ಬಡಮಕ್ಕಳಿಗಾಗಿ ಶಾಲೆ ನಿರ್ಮಿಸಬೇಕು ಎಂದಾಗ ಹಲವಾರು ಅಡೆತಡೆಗಳು ಉಂಟಾದವು. ಆ ವೇಳೆ ಶಾಸಕರಾಗಿದ್ದ ಯು.ಟಿ.ಫರೀದ್ ಅವರ ತೋರಿಸಿದ ಸಹಾಯವನ್ನು ಮರೆಯಲು ಸಾಧ್ಯವೇ ಇಲ್ಲ. ಈಗಾಗಲೇ ನಮ್ಮೂರ ಶಾಲೆಯಲ್ಲಿ ಕಲಿತ ಮಕ್ಕಳು ಇಂಜಿನಿಯರಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ನಮ್ಮೂರ ಶಾಲೆಯಲ್ಲಿ ಓದಿದ್ದಾರೆ ಎಂದಾಗ ಖುಷಿಯಾಗುತ್ತದೆ ಎಂದು ಹಾಜಬ್ಬ ನುಡಿದರು.

ಅಕ್ಷರ ಜ್ಞಾನವಿಲ್ಲದ ನನ್ನ ಬದುಕು ಈಗ ಕುವೆಂಪು ವಿವಿಯ ಬಿ.ಕಾಂ.ತರಗತಿಯ ಪಠ್ಯವಾಗಿದೆ. ಕೇರಳ ಶಾಲೆಯ ಪಠ್ಯದಲ್ಲಿ ನನ್ನ ಜೀವನ ಸಾಧನೆ ಕುರಿತು ಬಂದಿದೆ.ಇದಕ್ಕಿಂತ ಖುಷಿ ಇನ್ನೇನು ಬೇಕು.ನಾನೇನು ಹೇಳುಕೊಳ್ಳುವಷ್ಟು  ಸಾಧನೆ ಮಾಡಿಲ್ಲ.ಅದರೂ ಗಡಿ ಮೀರಿ ಜನರು ಪ್ರೀತಿ ತೋರಿ ಸನ್ಮಾನಿಸುತ್ತಿರುವುದಕ್ಕೆ ಚಿರಋಣಿಯಾಗಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಾಂಸ್ಕೃತಿ ಇಲಾಖೆ ನಿರ್ದೇಶಕ ಎಸ್.ರಂಗಪ್ಪ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ನಮ್ಮಪ್ಪ ಕೂಡ ಬಡನತನದಲ್ಲೇ ಬದುಕು ಸವೆಸಿದ.ಮಳೆಯಿಂದಾಗಿ ಮನೆ ಬಿದ್ದು ಹೋದಾಗ ಬೇರೆಯವರ ಮನೆಯಲ್ಲಿದ್ದೇ ಬದುಕು ಕಳೆದೆವು.ನನ್ನ ಹೋರಾಟದ ಜೀವನ ದುಃಖದಿಂದ ಕೂಡಿದೆ. ಆ ಜೀವನವೇ ಪದ್ಮಶ್ರೀ ಪ್ರಶಸ್ತಿ ವರೆಗೂ ತಂದಿಟ್ಟಿದೆ.

-ಹಾಜಬ್ಬ, ಪದ್ಮಶ್ರೀ ಪುರಸ್ಕೃತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X