Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್...

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಮಡ್ಡೀಕೆರೆ ಗೋಪಾಲ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ21 Nov 2021 9:35 PM IST
share
ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಮಡ್ಡೀಕೆರೆ ಗೋಪಾಲ್ ಆಯ್ಕೆ

ಮೈಸೂರು, ನ.21: ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೆ ಮಡ್ಡೀಕೆರೆ ಗೋಪಾಲ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಪ್ರತಿಸ್ಪರ್ಧಿ ಬನ್ನೂರು ಕೆ.ರಾಜು ಅವರಿಗಿಂತ 964 ಮತಗಳ ಅಂತರದೊಂದಿಗೆ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಾರತ್ಯ ವಹಿಸಿಕೊಂಡಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ರವಿವಾರ ಜಿಲ್ಲೆಯಲ್ಲಿ ನಡೆದ ಚುನಾವಣೆಯಲ್ಲಿ ಈ ಹಿಂದೆಯೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮಡ್ಡಿಕೆರೆ ಗೋಪಾಲ್ ಎರಡನೇ ಬಾರಿಗೆ ಆಯ್ಕೆಯಾದರು.

ಸಾಹಿತಿ ಬನ್ನೂರು ಕೆ. ರಾಜು ಅವರು ಮಡ್ಡಿಕೆರೆ ಗೋಪಾಲ್ ಅವರಿಗೆ ಮತ ಎಣಿಕೆಯ ಆರಂಭದಿಂದಲೂ ತೀವ್ರ ಪೈಪೋಟಿ ನೀಡಿದರು. ಅಂತಿಮವಾಗಿ ಮಡ್ಡಿಕೆರೆ ಗೋಪಾಲ್ 964 ಮತಗಳ ಅಂತರದಿಂದ ಜಯಭೇರಿ ಭಾರಿಸಿದರು.

ಮಡ್ಡಿಕೆರೆ ಗೋಪಾಲ್ 2565, ಬನ್ನೂರು ಕೆ.ರಾಜು 1601 ಹಾಗೂ ಕೆ ಎಸ್.ನಾಗರಾಜು 1485 ಮತಗಳನ್ನು ಪಡೆದರು. 71 ಮತಗಳು ತಿರಸ್ಕೃತಗೊಂಡವು. 

ಜಿಲ್ಲೆಯ 17 ಮತಗಟ್ಟೆಗಳಲ್ಲಿ ಸುಗಮವಾಗಿ ಮತದಾನ ನಡೆಯಿತಾದರೂ  ಮೈಸೂರು ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಇನ್ನು, ಜಿಲ್ಲೆಯಾದ್ಯಂತ ಒಟ್ಟು 13,378 ಮತದಾರರಲ್ಲಿ 974 ಮಹಿಳೆಯರು ಹಾಗೂ 4,748 ಪುರುಷರು ಸೇರಿ 5,722 ಮತದಾರರು ಮತ ಚಲಾಯಿಸಿದ್ದು ಶೇ.42.77 ರಷ್ಟು ಮಾತ್ರವೇ ಮತದಾನವಾಗಿದೆ. ಮೈಸೂರಿನಲ್ಲಿ ಒಟ್ಟು 7783 ಮತದಾರರಲ್ಲಿ  2618 ಮಂದಿ ಮಾತ್ರವೇ ಮತಚಲಾಯಿಸಿದ್ದಾರೆ. ಇನ್ನು, ತಾಲೂಕುವಾರು ಮತದಾನದಲ್ಲಿ ತಿ. ನರಸೀಪುರದಲ್ಲಿ 285 (ಶೇ.22.37), ಬನ್ನೂರಿನಲ್ಲಿ 474 (ಶೇ.73.37), ಹುಣಸೂರಿನಲ್ಲಿ 563 (ಶೇ.51.89), ನಂಜನಗೂಡು 181 (ಶೇ.44.25), ಎಚ್.ಡಿ.ಕೋಟೆ 368 (ಶೇ.55.09), ಕೆ.ಆರ್. ನಗರ 574 (ಶೇ.61), ಪಿರಿಯಾಪಟ್ಟಣ 387 (ಶೇ.44.43), ಸರಗೂರು 132 (ಶೇ.65.35) ಹಾಗೂ ಸಾಲಿಗ್ರಾಮದಲ್ಲಿ 140 (53.44) ರಷ್ಟು ಮತದಾನವಾಗಿದೆ. ಇವುಗಳಲ್ಲಿ ಬನ್ನೂರು ಕ್ಷೇತ್ರ ವ್ಯಾಪ್ತಿಯಲ್ಲೇ ಹೆಚ್ಚಿನ ಮತದಾನವಾಗಿರುವುದು ಗಮನ ಸೆಳೆದಿದೆ.

ಇನ್ನು, ಬಿ.ಎಲ್. ಭೈರಪ್ಪ, ಸಿಪಿಕೆ, ಭೈರವಮೂರ್ತಿ, ಪ್ರೊ. ಅರವಿಂದ ಮಾಲಗತ್ತಿ ಸೇರಿದಂತೆ ಹಲವರು ಹಿರಿಯ ಸಾಹಿತಿಗಳು ಮತ ಚಲಾಯಿಸಿದರು. ಮಾಜಿ ಅಧ್ಯಕ್ಷರಾದ ಡಾ.ವೈ.ಡಿ; ರಾಜಣ್ಣ, ಎಂ. ಚಂದ್ರಶೇಖರ್, ಕೆ.ಆರ್.ನಗರದಲ್ಲಿ ಶಾಸಕ ಸಾ.ರಾ.ಮಹೇಶ್ ಮತ ಹಕ್ಕು ಚಲಾಯಿಸಿದರು. 

ಮಾಜಿ ಶಾಸಕರಾದ ವಾಸ, ಎಂ.ಕೆ. ಸೋಮಶೇಖರ್, ಕೌಟಿಲ್ಯ, ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿದ್ದು ಕುತೂಹಲ ಕೆರಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X