Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆಲವು ಹೊಣೆಗೇಡಿ ದೇಶಗಳಿಂದ ಸಮುದ್ರ...

ಕೆಲವು ಹೊಣೆಗೇಡಿ ದೇಶಗಳಿಂದ ಸಮುದ್ರ ಕಾನೂನಿನ ತಪ್ಪು ವ್ಯಾಖ್ಯಾನ: ಚೀನಾ ವಿರುದ್ಧ ರಾಜನಾಥ್ ಪರೋಕ್ಷ ಟೀಕೆ

ವಾರ್ತಾಭಾರತಿವಾರ್ತಾಭಾರತಿ21 Nov 2021 9:49 PM IST
share
ಕೆಲವು ಹೊಣೆಗೇಡಿ ದೇಶಗಳಿಂದ ಸಮುದ್ರ ಕಾನೂನಿನ ತಪ್ಪು ವ್ಯಾಖ್ಯಾನ: ಚೀನಾ ವಿರುದ್ಧ ರಾಜನಾಥ್ ಪರೋಕ್ಷ ಟೀಕೆ

ಮುಂಬೈ, ನ.21: ಕೆಲವು ಹೊಣೆಗೇಡಿ ದೇಶಗಳು ತಮ್ಮ ಸಂಕುಚಿತ ಪಕ್ಷಪಾತಿ ಹಿತಾಸಕ್ತಿಗಳು ಮತ್ತು ಪ್ರಾಬಲ್ಯ ಮೆರೆಯುವ ಪ್ರವೃತ್ತಿಗಳೊಂದಿಗೆ ಸಮುದ್ರ ಕಾನೂನು ಕುರಿತು ವಿಶ್ವಸಂಸ್ಥೆಯ ನಿರ್ಣಯ (ಯುಎನ್ಸಿಎಲ್ಒಎಸ್)ವನ್ನು ತಪ್ಪಾಗಿ ವ್ಯಾಖ್ಯಾನಿಸುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರವಿವಾರ ಇಲ್ಲಿ ಚೀನಾವನ್ನು ಪರೋಕ್ಷವಾಗಿ ಟೀಕಿಸಿದರು.

ಬೆಳಿಗ್ಗೆ ಇಲ್ಲಿ ಭಾರತೀಯ ನೌಕಾಪಡೆಯ ಕ್ಷಿಪಣಿ ವಿಧ್ವಂಸಕ ನೌಕೆ ‘ಐಎನ್ಎಸ್ ವಿಶಾಖಪಟ್ಟಣಂ’ ಅನ್ನು ಕಾಯಾರಂಭಗೊಳಿಸಿ ಮಾತನಾಡುತ್ತಿದ್ದ ಸಿಂಗ್, ಕೆಲವು ದೇಶಗಳು ತಮ್ಮ ನಿರಂಕುಶ ತಪ್ಪು ವ್ಯಾಖ್ಯಾನಗಳಿಂದ ಯುಎನ್ಸಿಎಲ್ಒಎಸ್ ಅನ್ನು ಪದೇಪದೇ ದುರ್ಬಲಗೊಳಿಸುತ್ತಿರುವುದು ಕಳವಳದ ವಿಷಯವಾಗಿದೆ ಎಂದು ಹೇಳಿದರು.

ಚೀನಾ ತನ್ನ ಪ್ರಾದೇಶಿಕ ಜಲವಲಯ ಎಂದು ಹೇಳಿಕೊಳ್ಳುತ್ತಿರುವ ಸಮುದ್ರ ಪ್ರದೇಶದಲ್ಲಿ ವಿದೇಶಿ ಹಡಗುಗಳ ಪ್ರವೇಶವನ್ನು ನಿಯಂತ್ರಿಸಲು ಹೊಸ ಸಮುದ್ರ ನಿಯಮಗಳನ್ನು ತಂದಿದ್ದು,ಅವು ಈ ವರ್ಷದ ಸೆ.1ರಂದು ಜಾರಿಗೊಂಡಿವೆ. ಈ ನೂತನ ಕಾನೂನಿನಡಿ ವಿದೇಶಿ ಮಿಲಿಟರಿ ಮತ್ತು ವಾಣಿಜ್ಯ ಹಡಗುಗಳು ‘ಚೀನಿ ಪ್ರಾದೇಶಿಕ ಜಲವಲಯ’ದಲ್ಲಿ ತಮ್ಮನ್ನು ಚೀನಾದ ಮೇಲ್ವಿಚಾರಣೆಗೆ ಒಪ್ಪಿಸಿಕೊಳ್ಳುವುದು ಅಗತ್ಯವಾಗಿದೆ.

‘ಚೀನಾದ ಸಮುದ್ರ ಸಂಚಾರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ’ ಹಡಗುಗಳು ತಮ್ಮ ಹೆಸರು,ಕರೆ ಚಿಹ್ನೆ, ಹಾಲಿ ಇರುವ ಸ್ಥಳ ಮತ್ತು ಮತ್ತು ಮುಂದೆ ತಲುಪುವ ಬಂದರು ಹಾಗೂ ಆಗಮನದ ಅಂದಾಜು ಸಮಯದ ವಿವರಗಳನ್ನು ಸಲ್ಲಿಸುವುದನ್ನು ನೂತನ ಕಾನೂನು ಅಗತ್ಯವಾಗಿಸಿದೆ. ಅಪಾಯಕಾರಿ ಸರಕುಗಳು ಮತ್ತು ಅತಿಭಾರದ ಸರಕುಗಳನ್ನು ಸಾಗಿಸುವ ಹಡಗುಗಳೂ ಈ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

ವಿಶೇಷವಾಗಿ ವಿವಾದಿತ ದಕ್ಷಿಣ ಚೀನಾ ಸಮುದ್ರ, ಪೂರ್ವ ಚೀನಾ ಸಮುದ್ರ ಮತ್ತು ತೈವಾನ್ ಜಲಸಂಧಿಯಲ್ಲಿ ಸಂಚರಿಸುವ ಹಡಗುಗಳಿಗೆ ಈ ಕಾನೂನು ಮಹತ್ವದ್ದಾಗಿದ್ದು, ಇದು ಅಮೆರಿಕ ಮತ್ತು ಪ್ರದೇಶದಲ್ಲಿಯ ಅದರ ಪಾಲುದಾರ ದೇಶಗಳು ಹಾಗೂ ಚೀನಾ ನಡುವೆ ಉದ್ವಿಗ್ನತೆ ಹೆಚ್ಚಲು ಕಾರಣವಾಗಿದೆ.

ವಿದೇಶಿ ಹಡಗುಗಳು ದೇಶದ ಭದ್ರತೆಗೆ ಬೆದರಿಕೆಯೊಡ್ಡದಿದ್ದರೆ ಅವುಗಳ ಸಂಚಾರದ ಹಕ್ಕಿಗೆ ಕರಾವಳಿ ದೇಶಗಳು ಅಡ್ಡಿಯನ್ನುಂಟು ಮಾಡುವಂತಿಲ್ಲ ಎಂದು ಯುಎನ್ಸಿಎಲ್ಒಎಸ್ ಖಾತರಿ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X