ನ.22ರಂದು ಶಾದಿಮಹಲ್ ನಲ್ಲಿ ಸೀರತ್ ಸಮಾವೇಶ
ಮಂಗಳೂರು : ಯುನಿವೆಫ್ ಕರ್ನಾಟಕ "ಮಾನವೀಯ ಮೌಲ್ಯಗಳು, ಪರಧರ್ಮ ಸಹಿಷ್ಣುತೆ ಮತ್ತು ಪ್ರವಾದಿ ಮುಹಮ್ಮದ್ (ಸ)" ಎಂಬ ಕೇಂದ್ರೀಯ ವಿಷಯದಲ್ಲಿ 2021 ರ ನ.5 ರಿಂದ 2022 ರ ಜನವರಿ 7ರ ವರೆಗೆ ಹಮ್ಮಿಕೊಂಡಿರುವ "ಅರಿಯಿರಿ ಮನುಕುಲದ ಪ್ರವಾದಿಯನ್ನು" ಅಭಿಯಾನದ ಪ್ರಯುಕ್ತ ನ.22ರ ಸೋಮವಾರ ಸಂಜೆ 6.45ಕ್ಕೆ ಬೋಳಾರದ ಶಾದಿಮಹಲ್ ನಲ್ಲಿ ಸೀರತ್ ಸಮಾವೇಶ ಜರಗಲಿರುವುದು.
ಈ ಕಾರ್ಯಕ್ರಮದಲ್ಲಿ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿಯವರು "ಜಗತ್ತನ್ನು ಬದಲಿಸಿದ ವಿಶ್ವನಾಯಕ ಪ್ರವಾದಿ (ಸ)" ಎಂಬ ವಿಷಯದಲ್ಲಿ ಮುಖ್ಯ ಭಾಷಣ ಮಾಡಲಿದ್ದಾರೆ. ಸ್ತ್ರೀಯರಿಗೆ ಪ್ರತ್ಯೇಕ ಸ್ಥಳಾವಕಾಶ ಮಾಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆ ತಿಳಿಸಿರುತ್ತದೆ.
Next Story