Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋವಿಡ್ ಹೊಸ ನಿರ್ಬಂಧಗಳ ವಿರುದ್ಧ...

ಕೋವಿಡ್ ಹೊಸ ನಿರ್ಬಂಧಗಳ ವಿರುದ್ಧ ಯುರೋಪ್, ಆಸ್ಟ್ರೇಲಿಯದಲ್ಲಿ ಪ್ರತಿಭಟನೆ

ನೆದರ್ಲೆಂಡ್ ನಲ್ಲಿ ಹಿಂಸೆಗೆ ತಿರುಗಿದ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ21 Nov 2021 11:13 PM IST
share
ಕೋವಿಡ್ ಹೊಸ ನಿರ್ಬಂಧಗಳ ವಿರುದ್ಧ ಯುರೋಪ್, ಆಸ್ಟ್ರೇಲಿಯದಲ್ಲಿ ಪ್ರತಿಭಟನೆ

ವಿಯೆನ್ನಾ, ನ.21: ಕೋವಿಡ್19 ಸೋಂಕಿನ ಹಾವಳಿ ಮತ್ತೆ ಉಲ್ಬಣಿಸಿರುವ ಹಿನ್ನೆಲೆಯಲ್ಲಿ ಹೊಸತಾಗಿ ನಿರ್ಬಂಧಗಳನ್ನು ಹೇರಿರುವುದನ್ನು ವಿರೋಧಿಸಿ ಯುರೋಪ್ ಹಾಗೂ ಆಸ್ಟ್ರೇಲಿಯಗಳಲ್ಲಿ ಶನಿವಾರ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ದೈನಂದಿನ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಯುರೋಪ್ ರಾಷ್ಟ್ರವಾದ ಆಸ್ಟ್ರಿಯಾ ಶನಿವಾರದಿಂದ ಭಾಗಶಃ ಲಾಕ್ಡೌನ್ ಹೇರಿದೆ. ಇತರ ದೇಶಗಳು ಕೂಡಾ ಕೋವಿಡ್19ನ ಹೊಸ ಅಲೆ ವಿರುದ್ಧ ಹೋರಾಡಲು ರೆಸ್ಟೋರೆಂಟ್‌ ಗಳು ಹಾಗೂ ಬಾರ್ ಮತ್ತಿತರ ಸಾರ್ವಜನಿಕ ಸ್ಥಳಗಳನ್ನು ಲಸಿಕೆ ಪಡೆಯದವರಿಗೆ ನಿಷೇಧಿಸಿರುವುದು ಸೇರಿದಂತೆ ಹಲವಾರು ನಿರ್ಬಂಧಗಳನ್ನು ಪ್ರಕಟಿಸಿದೆ.

ನೆದರ್ಲ್ಯಾಂಡ್ ನ ನಗರ ರೊಟೆರ್ಡಾಮ್ನಲ್ಲಿ ಕೋವಿಡ್ ನಿರ್ಬಂಧ ವಿರೋಧಿಸಿ ರ‍್ಯಾಲಿ ನಡೆಸುತ್ತಿದ್ದವರ ಮೇಲೆ ಪೊಲೀಸರು ಗುಂಡು ಹಾರಿಸಿದ್ದರಿಂದ ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ ಹಾಗೂ 51 ಮಂದಿಯನ್ನು ಬಂಧಿಸಲಾಗಿದೆ. ನೆದರ್ಲ್ಯಾಂಡ್ ನ ಇನ್ನೊಂದು ನಗರವಾದ ಹೇಗ್ನಲ್ಲಿಯೂ ಪ್ರತಿಭಟನೆ ಭುಗಿಲೆದ್ದಿರುವುದಾಗಿ ವರದಿಯಾಗಿದೆ. ರಾಜಧಾನಿ ಆ್ಯಮ್ಸ್ಟರ್ ಡ್ಯಾಮ್ನಲ್ಲಿಯೂ ಕೋವಿಡ್ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದ್ದು, ಇದರಿಂದ ಉದ್ರಿಕ್ತರಾದ ಸಾವಿರಾರು ಮಂದಿ ಶನಿವಾರ ನಗರದ ಹೃದಯ ಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಆಸ್ಟ್ರಿಯ ರಾಜಧಾನಿ ವಿಯೆನ್ನಾದಲ್ಲಿ ಬಲಪಂಥೀಯ ಗುಂಪುಗಳ ಬೆಂಬಲಿಗರು ಸೇರಿದಂತೆ 35 ಸಾವಿರಕ್ಕೂ ಅಧಿಕ ಮಂದಿ ಕೋವಿಡ್19 ನಿರ್ಬಂಧಗಳ ವಿರುದ್ಧ ಬೃಹತ್ ರ‍್ಯಾಲಿ ನಡೆಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ 1300ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು. ಪ್ರತಿಭಟನಕಾರರಲ್ಲಿ ಹಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆಯೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಅದೇ ರೀತಿ ಉತ್ತರ ಐರ್ಲೆಂಡ್‌ ನಲ್ಲಿ ನೈಟ್ ಕ್ಲಬ್ ಗಳು, ಬಾರ್ ಗಳು ಹಾಗೂ ರೆಸ್ಟಾರೆಂಟ್ಗಳನ್ನು ಪ್ರವೇಶಿಸಲು ಲಸಿಕಾ ಪ್ರಮಾಣಪತ್ರಗಳನ್ನು ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಬೆಲ್ಫಾಸ್ಟ್ ನಗರದಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದರು.
ಕ್ರೊಯೇಶಿಯಾ, ಇಟಲಿ, ಡೆನ್ಮಾರ್ಕ್ನ ವಿವಿಧ ನಗರಗಳಲಿ ನೂತನ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಭಾರೀ ಪ್ರತಿಭಟನೆಗಳು ನಡೆದಿರುವುದಾಗಿ ವರದಿಯಾಗಿದೆ.

ಯುರೋಪ್ನ ವಿವಿಧ ದೇಶಗಳು ಮಾತ್ರವಲ್ಲದೆ ಅಸ್ಟೇಲಿಯದಲ್ಲಿಯೂ ಕೋವಿಡ್19 ನಿರ್ಬಂಧಗಳ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ. ಕೆಲವು ಉದ್ಯೋಗಗಳಿಗೆ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸುವ ಸರಕಾರದ ನಿರ್ಧಾರ ವಿರೋಧಿಸಿ ಸಿಡ್ನಿಯಲ್ಲಿ 10 ಸಾವಿರ ಮಂದಿ ಬೃಹತ್ ರ್ಯಾಲಿ ನಡೆಸಿದರು.

► ಮಿಂಚಿನ ವೇಗದಲ್ಲಿ ಕೋವಿಡ್ 5ನೇ ಅಲೆ ಹರಡುತ್ತಿದೆ: ಫ್ರಾನ್ಸ್ ಕಳವಳ

ಫ್ರಾನ್ಸ್ನಲ್ಲಿ ಕೊರೋನ ವೈರಸ್ ಸೋಂಕಿನ ಐದನೆ ಅಲೆಯು ಕಳವಳಕಾರಿ ಪ್ರಮಾಣದಲ್ಲಿ ಏರಿಕೆಯಾಗಿದೆಯೆಂದು ಸರಕಾರವು ರವಿವಾರ ತಿಳಿಸಿದೆ. ಈ ವಾರ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕಳೆದ ವಾರಕ್ಕಿಂತ ಎರಡು ಪಟ್ಟು ಹೆಚ್ಚಳವಾಗಿರುವುದು ಕಂಡುಬಂದಿದೆಯೆಂದು ಅದು ಹೇಳಿದೆ.

ಏಳು ದಿನಗಳ ಸರಾಸರಿ ಕೊರೋನ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆಯು ಶನಿವಾರ 17,153ಕ್ಕೆ ತಲುಪಿದ್ದು, ಹಿಂದಿನ ವಾರ ಅದು 9458 ಆಗಿದೆ ಎಂದು ಫ್ರಾನ್ಸ್ನ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಸೋಂಕಿನ ಪ್ರಕರಣಗಳಲ್ಲಿ ಶೇ.81ರಷ್ಟು ಹೆಚ್ಚಳವಾದಂತಾಗಿದೆ ಎಂದವರು ತಿಳಿಸಿದ್ದಾರೆ.
ಕೋವಿಡ್ ಐದನೇ ಅಲೆಯು ಮಿಂಚಿನ ವೇಗದಲ್ಲಿ ಆರಂಭಗೊಂಡಿದೆ ಎಂದು ಫ್ರೆಂಚ್ ಸರಕಾರದ ವಕ್ತಾರ ಗೇಬ್ರಿಯಲ್ ಅಟ್ಟಾಲ್ ತಿಳಿಸಿದ್ದಾರೆ.
ಶನಿವಾರ ಫ್ರಾನ್ಸ್ನ ವಿವಿಧ ಆಸ್ಪತ್ರೆಗಳಲ್ಲಿ 7974 ಕೋವಿಡ್ ಸೋಂಕಿತರು ದಾಖಲಾಗಿದ್ದು ಅವರಲ್ಲಿ 1333 ಮಂದಿಗೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X