Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಹವಾಮಾನ ವೈಪರೀತ್ಯ:...

ರಾಜ್ಯದಲ್ಲಿ ಹವಾಮಾನ ವೈಪರೀತ್ಯ: ಗಗನಕ್ಕೇರಿದ ತರಕಾರಿ ಬೆಲೆ

ವಾರ್ತಾಭಾರತಿವಾರ್ತಾಭಾರತಿ23 Nov 2021 9:30 PM IST
share
ರಾಜ್ಯದಲ್ಲಿ ಹವಾಮಾನ ವೈಪರೀತ್ಯ: ಗಗನಕ್ಕೇರಿದ ತರಕಾರಿ ಬೆಲೆ

ಬೆಂಗಳೂರು, ನ.23: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹವಾಮಾನ ವೈಪರೀತ್ಯದಿಂದಾಗಿ ಬಹುತೇಕ ಜಿಲ್ಲೆಗಳಲ್ಲಿ ಸತತವಾಗಿ ಮಳೆಯಾಗುತ್ತಿದೆ. ಮಳೆ, ಚಳಿ, ಗಾಳಿ ಪ್ರಮಾಣ ಹೆಚ್ಚಾದ ಪರಿಣಾಮ ಮಾರುಕಟ್ಟೆಗೆ ತರಕಾರಿ ಪೂರೈಕೆ ಕಡಿಮೆಯಾಗಿದೆ. ಆದುದರಿಂದ ತರಕಾರಿ ಬೆಲೆ ಗಗನಕ್ಕೇರಿ ಗ್ರಾಹಕರು ಕಂಗಾಲಾಗಿದ್ದಾರೆ.

ಅಕಾಲಿಕ ಮಳೆಯಿಂದಾಗಿ ಬಹುತೇಕ ಎಲ್ಲ ಕಡೆ ತರಕಾರಿ ಬಲೆ ಗಗನಕ್ಕೇರಿದೆ. ಟೊಮೇಟೊ ಕೆ.ಜಿ.ಗೆ 80-100 ರೂ.ಗೆ ಏರಿಕೆಯಾಗಿದೆ. ಬೀನ್ಸ್-ಕ್ಯಾರೆಟ್ ಕೆಜಿಗೆ ಬೆಲೆ 80 ರೂ.ದಾಟಿದೆ. ಬದನೆಕಾಯಿ 80 ರೂ. ಇದೆ. ಗೋರಿಕಾಯಿ-ಸೀಮೆ ಬದನೆಕಾಯಿ-ಚಪ್ಪರದವರೆಕಾಯಿ 80 ರೂ., ಹಿರೇಕಾಯಿ-ಕುಂಬಳಕಾಯಿ 80ರೂ., ಬೆಂಡೆಕಾಯಿ 60ರೂ., ಈರುಳ್ಳಿ 40-50ರೂ., ಸವತೆಕಾಯಿ-40ರೂ., ಕೊತ್ತಂಬರಿ ಸೊಪ್ಪು ಒಂದು ಕಟ್ 30ರೂ., ಪಾಲಕ್ 30ರೂ., ಮೆಂತ್ಯ 20 ರೂ. ಆಗಿದೆ. 10 ರೂ.ಗೆ 2 ನಿಂಬೇ ಹಣ್ಣು ಮಾರಾಟವಾಗುತ್ತಿದೆ. ಮಳೆ ಇನ್ನಷ್ಟು ದಿನ ಮುಂದುವರಿದರೆ ತರಕಾರಿ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂಬ ಆತಂಕ ಜನರಲ್ಲಿ ಮನೆ ಮಾಡಿದೆ.

ತರಕಾರಿ ಮಾರುಕಟ್ಟೆಗೆ ಹೋದರೆ ಹೆಚ್ಚಿನ ಹಣ ಕೊಟ್ಟರೂ ಗುಣಮಟ್ಟದ ತರಕಾರಿ ಸಿಗುತ್ತಿಲ್ಲ. ಕಳಪೆ ಗುಣಮಟ್ಟದ ತರಕಾರಿಯನ್ನು ಅತಿ ಹೆಚ್ಚು ಬೆಲೆ ಕೊಟ್ಟು ಖರೀದಿಸುವಂತಾಗಿದೆ. ಹೀಗಾಗಿ ಗ್ರಾಹಕರು ಅಳೆದು ತೂಗಿ ತರಕಾರಿ ಖರೀದಿಸುತ್ತಿದ್ದಾರೆ. ಇನ್ನು ಮಳೆ ನಡುವೆಯೂ ಬೆಳೆದ ತರಕಾರಿಯನ್ನು ಮಾರುಕಟ್ಟೆಗೆ ಸಾಗಿಸುತ್ತಿರುವ ರೈತರಿಗೂ ಹೆಚ್ಚಿನ ಲಾಭ ಸಿಗದೆ, ಮಧ್ಯವರ್ತಿಗಳ, ದಳ್ಳಾಳಿಗಳ ಪಾಲಾಗುತ್ತಿದೆ.

ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹೊಸದಾಗಿ ತರಕಾರಿ ಬೆಳೆ ನಾಟಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮಾರುಕಟ್ಟೆಗೆ ಅಗತ್ಯ ತರಕಾರಿ ಸರಬರಾಜಾಗುತ್ತಿಲ್ಲ. ಇದರಿಂದ ತರಕಾರಿ ಬೆಲೆ ಏರಿಕೆಯಾಗಿದೆ. ರೈತರು ತರಕಾರಿ ಬೆಳೆದರೂ ಹೆಚ್ಚಿನ ಪ್ರಯೋಜನವಾಗದೇ, ಬೆಳೆದ ಬೆಳೆಯೆಲ್ಲ ಮಳೆಯಿಂದ ಹಾಳಾಗುತ್ತಿದೆ. ಬೆಳೆಯನ್ನು ರಕ್ಷಿಸಿಕೊಳ್ಳಲು ಇನ್ನಷ್ಟು ಶ್ರಮ ಹಾಗೂ ಹಣ ಖರ್ಚು ಮಾಡುವಂತಾಗಿದೆ. ಇದು ಪರೋಕ್ಷವಾಗಿ ಗ್ರಾಹಕರಿಗೆ ಹೊರೆಯಾಗುತ್ತಿದೆ.

ಇನ್ನು ಎಲ್ಲರೂ ಅತಿ ಹೆಚ್ಚು ಬಳಸುವ ಈರುಳ್ಳಿ, ಮಳೆಯಿಂದ ತೇವಾಂಶ ಹೆಚ್ಚಿ ಕೆಡುತ್ತಿದೆ.  ಸಂಗ್ರಹಿಸಿಡಲಾದ ಕಡೆಯೇ ಗಾಳಿ ಆಡದೆ ದುರ್ನಾತ ಬೀರುತ್ತಿದೆ. ಈರುಳ್ಳಿ ಸಂಗ್ರಹಿಸಿದ ಕೂಡಲೇ ಅವುಗಳನ್ನು ಬೇರ್ಪಡಿಸಿ, ಮಾರುಕಟ್ಟೆಗೆ ಸಾಗಿಸಬೇಕು. ಆದರೆ ವಾರದಿಂದ ಸುರಿಯುತ್ತಿರುವ ಮಳೆ ಈಗ ಸ್ವಲ್ಪ ಬಿಡುವು ಕೊಟ್ಟರೂ, ಈರುಳ್ಳಿ ಕೆಟ್ಟು ಕಸಕ್ಕೆ ಸುರಿಯಬೇಕಾಗಿದೆ ಎಂದು ಈರುಳ್ಳಿ ಬೆಳೆದವರು ಹಾಗೂ ಸಂಗ್ರಹಿಸಿದವರು ಚಿಂತೆಗೀಡಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X