Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ನ.28ರಂದು ‘ಕ್ರಾಂತಿ ಸೂರ್ಯ ಭಗತ್‌ಸಿಂಹ’...

​ನ.28ರಂದು ‘ಕ್ರಾಂತಿ ಸೂರ್ಯ ಭಗತ್‌ಸಿಂಹ’ ಎಂಬ ಯಕ್ಷಗಾನ ಪ್ರಸಂಗ

ವಾರ್ತಾಭಾರತಿವಾರ್ತಾಭಾರತಿ23 Nov 2021 11:16 PM IST
share

ಮಂಗಳೂರು, ನ. 23: ಭಾರತದ ಸ್ವಾತಂತ್ರ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಂಸ್ಕಾರ ಭಾರತಿಯು ದೇಶಭಕ್ತಿಗೆ ಸಂಬಂಧಿಸಿದ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ‘ಕ್ರಾಂತಿ ಸೂರ್ಯ ಭಗತ್‌ಸಿಂಹ’ ಎಂಬ ಯಕ್ಷಗಾನ ಪ್ರಸಂಗವನ್ನು ನ.28ರಂದು ಬೆಳಗ್ಗೆ 9 ಗಂಟೆಗೆ ನಗರದ ಪುರಭವನದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಮಂಗಳೂರು ಸಂಸ್ಕಾರ ಭಾರತಿ ಅಧ್ಯಕ್ಷ ಪುರುಷೋತ್ತಮ ಕೆ.ಭಂಡಾರಿ ಅಡ್ಯಾರು ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲೆ ಮತ್ತು ಸಾಹಿತ್ಯಕ್ಕಾಗಿ ಕೆಲಸ ಮಾಡುತ್ತಿರುವ ಸಂಸ್ಕಾರ ಭಾರತಿಯ ಮಂಗಳೂರು ಘಟಕದ ವತಿಯಿಂದ ನಡೆಯುವ ಈ ಯಕ್ಷಗಾನದಲ್ಲಿ ತೆಂಕು ತಿಟ್ಟುವಿನ ಯಕ್ಷಗಾನ ಕಲಾವಿದರು ಭಾಗವಹಿಸುವರು. ಪ್ರಸಿದ್ಧ ಪ್ರಸಂಗ ರಚನಾಕಾರರಾದ ಪ್ರಸಾದ್ ಮೊಗೆಬೆಟ್ಟು ಅವರು ಭಗತ್‌ಸಿಂಹ ಅವರ ಜೀವನ ಚರಿತ್ರೆಯನ್ನು ಪ್ರಸಂಗ ರೂಪದಲ್ಲಿ ರಚಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ಇದು ಮೊದಲ ಪ್ರಯೋಗವಾಗಿದ್ದು, ಪ್ರಥಮ ಪ್ರಯೋಗ ಬಡಗುತಿಟ್ಟಿನಲ್ಲಿ ನಡೆದಿದೆ. ಈ ಪ್ರಸಂಗ ಸುಮಾರು ಮೂರೂವರೆ ಗಂಟೆ ಕಾಲ ಪ್ರದರ್ಶನಗೊಳ್ಳಲಿದೆ. 23ರ ಹರೆಯದಲ್ಲಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸ್ವಾತಂತ್ರ್ಯ ಹೋರಾಟಗಾರನ ಜೀವನ ಕತೆ ಇದಾಗಿದೆ ಎಂದರು.

ಈ ಸಂದರ್ಭ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತಿ ದಕ್ಷಿಣ ಭಾರತದ ಅಧ್ಯಕ್ಷ ಸುಚೇಂದ್ರ ಪ್ರಸಾದ್ ವಹಿಸುವರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮ ಉದ್ಘಾಟಿಸುವರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಕೋಶಾಧಿಕಾರಿ ಸಿ.ಎ. ಸುದೇಶ್ ಕುಮಾರ್ ರೈ ಭಾಗವಹಿಸುವರು ಎಂದರು.

ಸಂಸ್ಕಾರ ಭಾರತಿ ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮಾಧವ ಭಂಡಾರಿ, ಸಂಘಟನಾ ಕಾರ್ಯದರ್ಶಿ ಆರ್.ಗಣೇಶ್, ಪ್ರಚಾರ ಪ್ರಮುಖ್ ಸುಜೀರ್ ವಿನೋದ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X