Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಳಿವಯಸ್ಸಿನಲ್ಲಿ ಹೆತ್ತವರ ಜೀವನ...

ಇಳಿವಯಸ್ಸಿನಲ್ಲಿ ಹೆತ್ತವರ ಜೀವನ ನಿರ್ವಹಣೆಗೆ ನೆರವು ನೀಡುವುದು ಪುತ್ರನ ನೈತಿಕ, ಕಾನೂನಾತ್ಮಕ ಕರ್ತವ್ಯ: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ24 Nov 2021 7:43 PM IST
share
ಇಳಿವಯಸ್ಸಿನಲ್ಲಿ ಹೆತ್ತವರ ಜೀವನ ನಿರ್ವಹಣೆಗೆ ನೆರವು ನೀಡುವುದು ಪುತ್ರನ ನೈತಿಕ, ಕಾನೂನಾತ್ಮಕ ಕರ್ತವ್ಯ: ಸುಪ್ರೀಂ

ಹೊಸದಿಲ್ಲಿ: ತನ್ನ 72 ವರ್ಷದ ಅನಾರೋಗ್ಯ ಪೀಡಿತ ತಂದೆಗೆ ಮಾಸಿಕ ಜೀವನಾಂಶವಾದ ರೂ. 10,000 ಪಾವತಿಸಲು ಸಾಧ್ಯವಿರುವ ಎಲ್ಲಾ ನೆಪಗಳನ್ನು ಮುಂದೊಡ್ಡಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಮಂಗಳವಾರ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆಯಲ್ಲದೆ ಹೆತ್ತವರಿಗೆ ಅವರ ಇಳಿವಯಸ್ಸಿನಲ್ಲಿ ಜೀವನ ನಿರ್ವಹಣೆಗೆ ಸಹಾಯ ಮಾಡುವುದು ಪುತ್ರನೊಬ್ಬನ ನೈತಿಕ ಮತ್ತು ಕಾನೂನಾತ್ಮಕ ಕರ್ತವ್ಯವಾಗಿದೆ ಎಂದು ಹೇಳಿದೆ.

ರಾಜಧಾನಿಯ ನಿವಾಸಿಯಾಗಿರುವ 72 ವರ್ಷದ ವ್ಯಕ್ತಿಗೆ ಇಬ್ಬರು ಪುತ್ರರು ಹಾಗೂ ಆರು ಪುತ್ರಿಯರಿದ್ದು ಕೃಷ್ಣನಗರದಲ್ಲಿ 30 ಚದರ ಯಾರ್ಡ್ ಮನೆಯಲ್ಲಿ ತನ್ನ ಹಿರಿಯ ಪುತ್ರನೊಂದಿಗೆ ವಾಸಿಸುತ್ತಿದ್ದಾರೆ. ಮನೆ ಈಗಾಗಲೇ ಕುಟುಂಬ ಸದಸ್ಯರ ನಡುವೆ ಹಂಚಿಕೆಯಾಗಿದ್ದರೂ ವಿವಾಹಿತ ಪುತ್ರಿಯರು ತಮ್ಮ ಪಾಲನ್ನು ಬಿಟ್ಟುಕೊಟ್ಟಿದ್ದರಿಂದ ವೃದ್ಧರಿಗೆ ತಮ್ಮದೆಂದು ಹೇಳಬಹುದಾದ ಸಣ್ಣ ಸ್ಥಳವಿತ್ತು. ಆದರೆ ಜೀವನ ನಿರ್ವಹಣೆಗೆ ಇಬ್ಬರು ಪುತ್ರರಿಂದಲೂ ಈ ಹಿರಿಯ ನಾಗರಿಕನಿಗೆ ಯಾವುದೇ ಸಹಾಯ ಒದಗಿ ಬಂದಿರಲಿಲ್ಲ. ಹಿಂದೆ ಬಡಗಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರಿಗೆ ಈಗ ಯಾವುದೇ ಕೆಲಸ ಮಾಡಲು ಸಾಧ್ಯವಿಲ್ಲ.

ಪುತ್ರರಿಂದ ಸಹಾಯ ಬಾರದೇ ಇದ್ದುದರಿಂದ ಅವರು 2015ರಲ್ಲಿ ಕುಟುಂಬ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು ಹಾಗೂ ಗುತ್ತಿಗೆದಾರ ಹಾಗೂ ರಿಯಲ್ ಎಸ್ಟೇಟ್ ವೃತ್ತಿಯ ಪುತ್ರನಿಂದ ಜೀವನಾಂಶ ಕೋರಿದ್ದರು. ನ್ಯಾಯಾಲಯ ಆರಂಭದಲ್ಲಿ ಅವರಿಗೆ ರೂ. 6000 ಮಾಸಿಕ ಜೀವನಾಂಶ ನೀಡಬೇಕೆಂದು ಆದೇಶಿಸಿತ್ತು ಹಾಗೂ 2015ರಿಂದ ಬಾಕಿ ಮೊತ್ತ ರೂ 1.68 ಲಕ್ಷ ಪಾವತಿಸುವಂತೆ ಹೇಳಿದ್ದರೂ ಆತ ಕೇವಲ ರೂ 50,000 ಪಾವತಿಸಿದ್ದ. ನಂತರ ನ್ಯಾಯಾಲಯ ಜೀವನಾಂಶವನ್ನು ರೂ. 10,000ಕ್ಕೆ ಏರಿಸಿತ್ತು.

ಆದರೆ ಪುತ್ರ ನ್ಯಾಯಾಲಯದ ಮೊರೆ ಹೋಗಿ ನಂತರ ಸುಪ್ರೀಂ ಕೋರ್ಟ್ ತನಕವೂ ಹೋಗಿದ್ದ ಹಾಗೂ ತನ್ನ ಪತ್ನಿಯ ಆಸ್ತಿ ತನ್ನ ಸಂಪತ್ತೆಂದು ವಿಚಾರಣಾ ನ್ಯಾಯಾಲಯ ತಪ್ಪಾಗಿ ತಿಳಿದುಕೊಂಡಿತ್ತು ಎಂದು ವಾದಿಸಿದ್ದ.

ಆದರೆ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠ ಹಿರಿಯ ನಾಗರಿಕರ ಪರ ತೀರ್ಪು ನೀಡಿ “ನಿಮ್ಮ ತಂದೆಗೆ 72 ವರ್ಷ ಹಾಗೂ ರೂ. 10,000 ಜೀವನಾಂಶ ವಿಚಾರದಲ್ಲಿ ಅವರನ್ನು ಕೋರ್ಟಿಗೆ ನೀವು ಎಳೆದಿದ್ದೀರಿ? ನಿಮಗೇನಾಗಿದೆ? ಯಾರು ಕೂಡ ತಮ್ಮ ಹೆತ್ತವರನ್ನು ಕೋರ್ಟಿಗೆಳೆಯಬಾರದು. ಯಾವ ಹಿರಿಯ ನಾಗರಿಕರೂ ಈ ಪರಿಸ್ಥಿತಿ ಎದುರಿಸಬಾರದು,'' ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X