Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಪರಿಷತ್ ಚುನಾವಣೆ: ಬಿಜೆಪಿ ಜೊತೆ...

ವಿಧಾನಪರಿಷತ್ ಚುನಾವಣೆ: ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ: ಝಮೀರ್ ಅಹ್ಮದ್ ಖಾನ್ ಆರೋಪ

ವಾರ್ತಾಭಾರತಿವಾರ್ತಾಭಾರತಿ24 Nov 2021 9:53 PM IST
share
ವಿಧಾನಪರಿಷತ್ ಚುನಾವಣೆ: ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ: ಝಮೀರ್ ಅಹ್ಮದ್ ಖಾನ್ ಆರೋಪ

ಮೈಸೂರು,ನ.24: ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಪಕ್ಷ ಕೇವಲ 7 ಸ್ಥಾನಗಳಿಗೆ ಸ್ಪರ್ಧೆ ಮಾಡಿರುವುದು ಅನುಮಾನ ಹುಟ್ಟಿಸಿದ್ದು, ಬಿಜೆಪಿ ಜೊತೆ ಜೆಡಿಎಸ್ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಶಾಸಕ  ಝಮೀರ್ ಅಹ್ಮದ್ ಖಾನ್ ಆರೋಪಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನವರು ಕೇವಲ 7 ಸ್ಥಾನಗಳಿಗಷ್ಟೇ ಸ್ಪರ್ಧೆ ಮಾಡಿರುವುದನ್ನು ನೋಡಿದರೆ ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿರುವುಂತೆ ಕಾಣುತ್ತದೆ. ಜೆಡಿಎಸ್ ಎಲ್ಲಾ 25 ಸ್ಥಾನಗಳಿಗೂ ಸ್ಪರ್ಧೆ ಮಾಡಬೇಕಿತ್ತು, ಇವರಿಗೆ ಅಭ್ಯರ್ಥಿಗಳು ಇಲ್ವಾ? ಇದ್ದರೂ ಹಾಕಿಲ್ವಾ? ಇದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಜೆಡಿಎಸ್ ನವರನ್ನು ಅಷ್ಟು ಸುಲಭವಾಗಿ ನಂಬಲು ಸಾಧ್ಯವಿಲ್ಲ, ಬಿಜೆಪಿಗೆ ಲಾಭ ಮಾಡಿಕೊಡಲು ಜೆಡಿಎಸ್ ಮಾಡಿರುವ ತಂತ್ರ ಅಂತ ಅನಿಸುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸಿಂಗಲ್ ಡಿಜಿಟ್ ಪಡೆಯುತ್ತೆ ಎಂದು ವ್ಯಂಗ್ಯವಾಡಿದ ಶಾಸಕ ಝಮೀರ್ ಅಹ್ಮದ್ ಖಾನ್, ಜೆಡಿಎಸ್‌ ಗೆ ಯಾವಾಗಲೂ ಕಾಂಗ್ರಸ್ಸೇ ಟಾರ್ಗೆಟ್, ಆದರೆ ಹಳೆ ಮೈಸೂರು ಭಾಗದಲ್ಲೂ ಕಾಂಗ್ರೆಸ್ ಗೆ ಒಳ್ಳೆಯ ವಾತಾವರಣ ಇದೆ ಎಂದರು.

ಇತ್ತೀಚೆಗೆ ಸಿದ್ದರಾಮಯ್ಯ ಭಾಷಣಕ್ಕೆ ತಮ್ಮ ಬೆಂಬಲಿಗರು ಅಡ್ಡಿಯುಂಟು ಮಾಡಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾಸಕ  ಝಮೀರ್ ಅಹ್ಮದ್ ಖಾನ್,  ನನ್ನ ಸಿದ್ದರಾಮಯ್ಯ ಸಂಬಂಧ ಸಾಯುವವರೆಗೂ ಕೆಡುವುದಿಲ್ಲ. ಕೆಡಲು ಸಾಧ್ಯವೂ ಇಲ್ಲ. ಅಂದು ಸಿದ್ದರಾಮಯ್ಯ ಭಾಷಣಕ್ಕೆ ನಮ್ಮ ಬೆಂಬಲಿಗರು ಅಡ್ಡಿ ಮಾಡಿಲ್ಲ. ಸಿದ್ದರಾಮಯ್ಯ ಭಾಷಣ ಮೊಟಕುಗೊಳಿಸಿಲ್ಲ. ಪುನೀತ್ ರಾಜ್‌ ಕುಮಾರ್ ಕಾರ್ಯಕ್ರಮಕ್ಕೆ ಹೋಗಬೇಕಿದ್ದ ಕಾರಣ 5 ನಿಮಿಷ ಮಾತನಾಡಿ ಹೋಗಿದ್ದಾರೆ. ನನ್ನ ಅನುಪಸ್ಥಿತಿಯಲ್ಲಿ ನನ್ನ ಅಭಿಮಾನಿಗಳು ಜೈಕಾರ ಕೂಗಿದ್ದು ಕಂಡು ಸಿದ್ದರಾಮಯ್ಯ ಖುಷಿಯಾಗಿದ್ದಾರೆ. ಈ ಬಗ್ಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಸಿದ್ದರಾಮಯ್ಯ ಈ ರೀತಿ ಹೊಟ್ಟೆಕಿಚ್ವು ಪಟ್ಟುಕೊಳ್ಳುವ ಮನುಷ್ಯ ಅಲ್ಲ. ಅವರಿಗೆ ಜೊತೆಗಾರರು ಬೆಳೆದರೆ ಸಂತೋಷ ಇದೆ ಎಂದು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X