ಗಡಿನಾಡ ಕನ್ನಡ ರಾಜ್ತೋತ್ಸವ ಪ್ರಶಸ್ತಿಗೆ ಫಾರೂಕ್ ಚಂದ್ರನಗರ ಆಯ್ಕೆ
ಕಾಪು: ಕಾಸರಗೋಡಿನ ಬದಿಯಡ್ಕದ ಕೇರಳದ ಸಮಗ್ರ ಕನ್ನಡ ಪರ ಸಂಘಟನೆಗಳ ಒಕ್ಕೂಟ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿಯು ನೀಡುವ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಕಾಪುವಿನ ಸಮಾಜ ಸೇವಕ ಮುಹಮ್ಮದ್ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ.
ಫಾರೂಕ್ ಚಂದ್ರನಗರ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿದ್ದು, ಕೋವಿಡ್ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ನೀಡುವ ಮೂಲಕ ಗುರುತಿಸಿಕೊಂಡಿದ್ದರು.
ಕನ್ನಡ ಭಾಷೆ, ಸಂಸ್ಕೃತಿ, ಕಲೆ ಮುಂತಾದವುಗಳ ಅಭಿವೃದ್ಧಿಗಾಗಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯು ಡಿಸೆಂಬರ್ 5ರಂದು ಬೆಳಗ್ಗೆ 11 ಗಂಟೆಗೆ ಕಾಸರಗೋಡಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.
Next Story