Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಾಬೂಲ್ ವಿಮಾನನಿಲ್ದಾಣದ ನಿರ್ವಹಣೆ:...

ಕಾಬೂಲ್ ವಿಮಾನನಿಲ್ದಾಣದ ನಿರ್ವಹಣೆ: ಯುಇಎ-ತಾಲಿಬಾನ್ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ24 Nov 2021 11:51 PM IST
share
ಕಾಬೂಲ್ ವಿಮಾನನಿಲ್ದಾಣದ ನಿರ್ವಹಣೆ: ಯುಇಎ-ತಾಲಿಬಾನ್ ಮಾತುಕತೆ

ದುಬೈ, ನ.24: ಕಾಬೂಲ್ ವಿಮಾನ ನಿಲ್ದಾಣದ ನಿರ್ವಹಣೆಯ ಬಗ್ಗೆ ಆಸಕ್ತಿ ಹೊಂದಿರುವ ಯುಎಇ ಈ ವಿಷಯದಲ್ಲಿ ತಾಲಿಬಾನ್‌ನೊಂದಿಗೆ ಮಾತುಕತೆ ನಡೆಸಿದೆ. ಅಫ್ಘಾನಿಸ್ತಾನದ ನೂತನ ಆಡಳಿತದ ಮೇಲೆ ಖತರ್ ಹೊಂದಿರುವ ರಾಜತಾಂತ್ರಿಕ ಪ್ರಭಾವವನ್ನು ಕಡಿಮೆಗೊಳಿಸುವ ಉದ್ದೇಶ ಇದರ ಹಿಂದಿದೆ ಎಂದು ಮೂಲಗಳು ಹೇಳಿವೆ. ಅಫ್ಘಾನ್‌ನ ಪ್ರಮುಖ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿರುವ ಕಾಬೂಲ್ ವಿಮಾನ ನಿಲ್ದಾಣದ ನಿರ್ವಹಣೆಯ ವಿಷಯದಲ್ಲಿ ಯುಎಇ ಅಧಿಕಾರಿಗಳು ಹಾಗೂ ತಾಲಿಬಾನ್ ನಡುವೆ ಸರಣಿ ಸಭೆ ನಡೆದಿದೆ .

ಈ ಸಂದರ್ಭ ತಾಲಿಬಾನ್ ಯುಎಇಯಿಂದ ಆರ್ಥಿಕ ನೆರವು ಕೋರಿದೆ ಎಂದು ಕೊಲ್ಲಿ ಮೂಲದ ವಿದೇಶಿ ರಾಜತಂತ್ರಜ್ಞರನ್ನು ಉಲ್ಲೇಖಿಸಿ ‘ ರಾಯ್ಟರ್ಸ್’   ವರದಿ ಮಾಡಿದೆ. ತಾಲಿಬಾನ್ ನೇತೃತ್ವದ ಸರಕಾರಕ್ಕೆ ಇದುವರೆಗೆ ಯಾವುದೇ ರಾಷ್ಟ್ರಗಳೂ ಅಧಿಕೃತವಾಗಿ ಮಾನ್ಯತೆ ನೀಡದಿದ್ದರೂ, ಇತರ ದೇಶಗಳು ಅಫ್ಘಾನ್ ಆಡಳಿತದ ಮೇಲೆ ತಮ್ಮ ಪ್ರಭಾವ ಬೀರಲು ಪ್ರಯತ್ನಿಸುತ್ತಿರುವುದಕ್ಕೆ ಇಂತಹ ಮಾತುಕತೆಗಳು ಉತ್ತಮ ನಿದರ್ಶನವಾಗಿದೆ. ಅಫ್ಘಾನ್‌ನಲ್ಲಿ ಖತರ್ ಹೊಂದಿರುವ ರಾಜತಾಂತ್ರಿಕ ಪ್ರಭಾವಕ್ಕೆ ಟಕ್ಕರ್ ನೀಡಲು ಯುಎಇ ಬಯಸಿದೆ ಎಂದು ಪತ್ರಿಕೆಯ ವರದಿ ಹೇಳಿದೆ.

ಈ ಹಿಂದೆ ಅಫ್ಘಾನ್‌ನಲ್ಲಿ ಅಮೆರಿಕ ಬೆಂಬಲಿತ ಸರಕಾರವಿದ್ದಾಗ ಕಾಬೂಲ್ ನಿಲ್ದಾಣದ ಕಾರ್ಯನಿರ್ವಹಣೆಯ ಹೊಣೆ ನಿರ್ವಹಿಸಿದ್ದ ಯುಇಎ, ಈಗಲೂ ಮಾನವೀಯ ನೆರವಿನ ಪ್ರಕ್ರಿಯೆಗೆ ನೆರವಾಗಲು ಹಾಗೂ ಕಾಬೂಲ್ ವಿಮಾನ ನಿಲ್ದಾಣದ ಕಾರ್ಯನಿರ್ವಹಣೆ ಸುಗಮವಾಗಿ ಸಾಗುವ ನಿಟ್ಟಿನಲ್ಲಿ ನೆರವಾಗಲು ಸಿದ್ಧವಿದೆ ಎಂದು ಯುಎಇ ವಿದೇಶ ವ್ಯವಹಾರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಗಸ್ಟ್‌ನಲ್ಲಿ ಅಫ್ಘಾನಿಸ್ತಾನದಿಂದ ಅಮೆರಿಕದ ಪಡೆಗಳು ಹಾಗೂ ವಿದೇಶೀಯರ ತೆರವು ಕಾರ್ಯಾಚರಣೆ ಅವ್ಯವಸ್ಥೆಯಿಂದ ಗೊಂದಲದ ಗೂಡಾಗಿ ಪರಿಣಮಿಸಿದಾಗ, ತೆರವು ಕಾರ್ಯಾಚರಣೆ ಸುಸೂತ್ರವಾಗಿ ಮುಂದುವರಿಯಲು ಖತರ್ ಪ್ರಮುಖ ಪಾತ್ರ ವಹಿಸಿತ್ತು.

ಅಲ್ಲದೆ ಅಫ್ಘಾನ್‌ನ ಹಮೀದ್ ಕರ್ಝಾಯಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಟರ್ಕಿ ದೇಶದ ನೆರವಿನೊಂದಿಗೆ ನಿರ್ವಹಿಸುತ್ತಿದೆ. ಆದರೆ, ಇದುವರೆಗೂ ಖತರ್‌ನೊಂದಿಗೆ ತಾಲಿಬಾನ್‌ಗಳು ಯಾವುದೇ ಅಧಿಕೃತ ಒಪ್ಪಂದ ಮಾಡಿಕೊಂಡಿಲ್ಲ ಎಂದು ರಾಜತಾಂತ್ರಿಕ ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X