Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಹಲ್ಲೆ...

ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಹಲ್ಲೆ ಪ್ರಕರಣ: ಪುತ್ತೂರು ತಾಲೂಕು ಮುಸ್ಲಿಂ ಒಕ್ಕೂಟ ತುರ್ತು ಸಭೆ

ಹಲ್ಲೆ, ಬೆದರಿಕೆ ತಡೆಯುವಂತೆ ಪೊಲೀಸರಿಗೆ ಮೌಖಿಕ ಮನವಿ

ವಾರ್ತಾಭಾರತಿವಾರ್ತಾಭಾರತಿ25 Nov 2021 1:51 PM IST
share
ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಹಲ್ಲೆ ಪ್ರಕರಣ: ಪುತ್ತೂರು ತಾಲೂಕು ಮುಸ್ಲಿಂ ಒಕ್ಕೂಟ ತುರ್ತು  ಸಭೆ

ಪುತ್ತೂರು, ನ.25: ಶಾಲಾ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳನ್ನು ಗುರಿಯಾಗಿರಿಸಿ ಹಲ್ಲೆ ಪ್ರಕರಣಗಳು ನಡೆಯುತ್ತಿದ್ದು, ಅವರಿಗೆ ಸುರಕ್ಷೆ ಹಾಗೂ ಭಯಮುಕ್ತವಾಗಿ ವಿದ್ಯಾರ್ಜನೆಗೆ ಅವಕಾಶ ಒದಗಿಸುವ ಕುರಿತು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಮನವಿ ನೀಡಿ ಆಗ್ರಹಿಸಲು ಪುತ್ತೂರು ತಾಲೂಕು ಮುಸ್ಲಿಂ ನಿರ್ಧರಿಸಿದೆ.

ಈ ಬಗ್ಗೆ ಪುತ್ತೂರು ಮುಹಿಯುದ್ದೀನ್ ಜುಮಾ ಮಸೀದಿಯ ಮದ್ರಸ ಸಭಾಂಗಣದಲ್ಲಿ ಗುರುವಾರ ನಡೆದ ಒಕ್ಕೂಟದ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ಅಧ್ಯಕ್ಷ ಕೆ.ಪಿ.ಮುಹಮ್ಮದ್ ಹಾಜಿ ಕಲ್ಲೇಗ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳನ್ನು ಗುರಿಯಾಗಿರಿಸಿ ನಡೆದ ಹಲ್ಲೆ ಮತ್ತು ಕೊಲೆಯತ್ನ ಪ್ರಕರಣವನ್ನು ಖಂಡಿಸಲಾಯಿತು. ಇಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಮಾಡುವುದೆಂದು ತೀರ್ಮಾನಿಸಲಾಯಿತು.

ತಾಲೂಕಿನ ವಿವಿಧ ಮೊಹಲ್ಲಾಗಳಿಂದ ಆಗಮಿಸಿದ್ದ ಮಸೀದಿ ಕಮಿಟಿಯ ಪದಾಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿ, ಅಮಾಯಕ ಮಕ್ಕಳನ್ನು ಗುರಿಯಾಗಿರಿಸಿ ಹಲ್ಲೆ ನಡೆಸಲಾಗುತ್ತಿದೆ. ಇದರಿಂದಾಗಿ ಮಕ್ಕಳು ಶಾಲಾ ಕಾಲೇಜಿಗೆ ಹೋಗಲು ಹೆದರುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಮಕ್ಕಳ ಶಿಕ್ಷಣಕ್ಕೆ ತೊಡಕಾಗುವ ಅಪಾಯ ಎದುರಾಗುತ್ತಿದೆ. ಇದನ್ನು ತಡೆಯಲು ಕಾನೂನು ಸುರಕ್ಷತೆಯ ಅಗತ್ಯವಿದೆ ಎಂದು ಹೇಳಿದರು.

ಸಮುದಾಯದ ಮುಖಂಡರಾದ ಇಬ್ರಾಹೀಂ ಹಾಜಿ ಸಾಗರ್, ಕೆ.ಎ.ಸಿದ್ದೀಕ್, ಅಶ್ರಫ್ ಹಾಜಿ ಕಲ್ಲೇಗ, ನ್ಯಾಯವಾದಿ ಅಶ್ರಫ್ ಅಗ್ನಾಡಿ, ಜಾಬಿರ್ ಅರಿಯಡ್ಕ, ಇಬ್ರಾಹೀಂ ಗೋಳಿಕಟ್ಟೆ, ಅಬೂಬಕರ್ ಮಲಾರ್, ಅಬ್ದುಲ್ ಖಾದರ್ ಹಾಜಿ ಸುರಯ್ಯೆ, ಬಿ.ಎ.ಶಕೂರ್ ಹಾಜಿ, ಎಲ್.ಟಿ.ಅಬ್ದುರ್ರಝಾಕ್ ಹಾಜಿ, ಕೆ.ಎ.ಅಬ್ದುರ್ರಝಾಕ್ ಹಾಜಿ ಕೂರ್ನಡ್ಕ ಮತ್ತಿತರರು ಮಾತನಾಡಿದರು.

ಪೊಲೀಸ್ ಅಧಿಕಾರಿಗಳಿಗೆ ಮನವಿ

ಸಭೆಯ ಬಳಿಕ ಮುಖಂಡರ ನಿಯೋಗ ಪುತ್ತೂರು ನಗರ ಠಾಣೆಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಈ ಸಂದರ್ಭದಲ್ಲಿ ಮೌಖಿಕ ಮನವಿ ಮಾಡಿದರು. ಶಾಲಾ ಕಾಲೇಜುಗಳಲ್ಲಿ ಮಕ್ಕಳ ನಡುವೆ ವಿಂಗಡಣೆ ಮಾಡಬಾರದು, ಕೋಮು ಭಾವನೆಗಳನ್ನು ಬಾರದಂತೆ ಎಲ್ಲರೂ ಒಟ್ಟಾಗಿರುವಂತೆ ಯೋಜನೆ ರೂಪಿಸಬೇಕು. ಕೊಂಬೆಟ್ಟು ಕಾಲೇಜಿನಲ್ಲಿ ನಡೆದ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮತ್ತು ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಸೌಹಾರ್ದ ಮೂಡಿಸುವ ನಿಟ್ಟಿನಲ್ಲಿ ಕೌನ್ಸಿಲಿಂಗ್ ವ್ಯವಸ್ಥೆಗೊಳಿಸಬೇಕು. ಮಕ್ಕಳು ಕಾಲೇಜುಗಳಿಗೆ ಮಾರಕ ಅಸ್ತ್ರಗಳನ್ನು ತರದಂತೆ ಹಾಗೂ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡದಿರುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಮೌಖಿಕ ಮನವಿ ಮಾಡಲಾಯಿತು.

ಮನವಿಗೆ ಸ್ಪಂದಿಸಿದ ಪುತ್ತೂರು ಉಪವಿಭಾಗದ ಪೊಲೀಸ್ ವರಿಷ್ಠಾಧಿಕಾರಿ, ಈ ಬಗ್ಗೆ ಎಲ್ಲಾ ರೂಪದಲ್ಲಿ ತನಿಖೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಅಪ್ರಾಪ್ತ ವಯಸ್ಕರಾಗಿರುವ ಕಾರಣ ಕೆಲವೊಂದು ಕಾನೂನು ನಿಯಮಾವಳಿಯಂತೆ ತನಿಖೆ ಮಾಡಬೇಕಾಗಿದೆ. ಕಾನೂನಿನ ಅಡಿಯಲ್ಲಿ ಯಾವುದೇ ಅಪರಾದಿ ತಪ್ಪಿಸಲು ಸಾಧ್ಯವಿಲ್ಲ. ತಪ್ಪು ಮಾಡಿದವರಿಗೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X