Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುಂಜಾಲಕಟ್ಟೆ ಠಾಣೆಯ ಎಸ್ಸೈ ಕಾಲು...

ಪುಂಜಾಲಕಟ್ಟೆ ಠಾಣೆಯ ಎಸ್ಸೈ ಕಾಲು ಮುರಿಯುತ್ತೇವೆ ಎಂದ ಹಿಂಜಾವೇ ಮುಖಂಡ ರಾಧಾಕೃಷ್ಣ ಅಡ್ಯಂತಾಯ

ಪತ್ರಕರ್ತರ ತರಾಟೆಯ ಬಳಿಕ ನಾನು ಹಾಗೇ ಹೇಳಲಿಲ್ಲ ಎಂದು ಸಮಜಾಯಿಷಿ

ವಾರ್ತಾಭಾರತಿವಾರ್ತಾಭಾರತಿ25 Nov 2021 5:21 PM IST
share
ಪುಂಜಾಲಕಟ್ಟೆ ಠಾಣೆಯ ಎಸ್ಸೈ ಕಾಲು ಮುರಿಯುತ್ತೇವೆ ಎಂದ ಹಿಂಜಾವೇ ಮುಖಂಡ ರಾಧಾಕೃಷ್ಣ ಅಡ್ಯಂತಾಯ

ಮಂಗಳೂರು : ಕಾರಿಂಜ ಕ್ಷೇತ್ರದಲ್ಲಿ ಹಾಕಲಾದ ಭಗವಧ್ವಜವನ್ನು ತೆಗೆಯಬೇಕು ಎಂದು ಪುಂಜಾಲಕಟ್ಟೆ ಠಾಣೆಯ ಎಸ್ಸೈ ಸೌಮ್ಯ ಸೂಚಿಸಿದ್ದಾರೆ. ನಾವು ಆ ಧ್ವಜವನ್ನು ತೆಗೆಯುವುದಿಲ್ಲ. ಇನ್ನೊಂದು ವಾರದೊಳಗೆ ಅಂತಹ ಸಾವಿರ ಧ್ವಜ ಹಾಕಿಸುತ್ತೇವೆ. ತಾಕತ್ತಿದ್ದರೆ ಅದನ್ನು ತೆಗೆಸಬೇಕು. ಏನಿದು, ಘೋರಿ ಮುಹಮ್ಮದನ ಕಾಲವಾ, ಟಿಪ್ಪು ಸುಲ್ತಾನ್ ಕಾಲವಾ ? ಹಿಂದೂ ಸಮಾಜ ಫುಟ್ಬಾಲ್ ಅಲ್ಲ. ಕಲ್ಲುಗುಂಡು ಇದ್ದ ಹಾಗೆ. ನಿಮ್ಮ ಕೆಲಸ ಮಾಡಿ. ಇಲ್ಲದಿದ್ದರೆ ನಿಮ್ಮ ಕಾಲು ಮುರಿಯುತ್ತೇವೆ ಎಂದು ಎಚ್ಚರಿಕೆ ನೀಡಿದ ಹಿಂಜಾವೇ ಪ್ರಾಂತೀಯ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ, ಪತ್ರಕರ್ತರ ತರಾಟೆಯ ಬಳಿಕ 'ನಾನು ಹಾಗೇ ಹೇಳಲೇ ಇಲ್ಲ' ಎಂದು ಸಮಜಾಯಿಷಿ ನೀಡಿದ ವಿದ್ಯಮಾನ ಗುರುವಾರ ನಡೆದಿದೆ.

ಕಾರಿಂಜ ಕ್ಷೇತ್ರದ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಆಪಾದಿಸಿ ನ.21ರಂದು ಕಾರಿಂಜ ರಥಬೀದಿಯಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ ದ.ಕ. ಜಿಲ್ಲಾಧಿಕಾರಿಗೆ ಅಗೌರವ ತರುವ ರೀತಿಯಲ್ಲಿ ಭಾಷಣ ಮಾಡಿದ್ದರು. ಇದರ ವಿರುದ್ಧ ದ.ಕ.ಜಿಲ್ಲಾಧಿಕಾರಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಧಾಕೃಷ್ಣ ಅಡ್ಯಂತಾಯ ಪುಂಜಾಲಕಟ್ಟೆ ಠಾಣೆಯ ಎಸ್ಸೈ ಸೌಮ್ಯರ ವಿರುದ್ಧ ಹರಿಹಾಯ್ದು ಅವರ ಕಾಲು ಮುರಿಯುತ್ತೇವೆ ಎಂದು ಎಚ್ಚರಿಸಿದರು. ಇದನ್ನು ಪತ್ರಕರ್ತರು ಪ್ರಶ್ನಿಸಿ ತೀವ್ರ ತರಾಟೆಗೆ ತೆಗೆದುಕೊಂಡ ಬಳಿಕ ನಾನು ಹಾಗೇ ಹೇಳಲಿಲ್ಲ. ಹಿಂದೂ ಸಮಾಜ ಚೆಂಡಲ್ಲ. ಕಲ್ಲುಗುಂಡು ಇದ್ದಂತೆ. ತಾಗಿದರೆ ಕಾಲು ಮುರಿಯುತ್ತದೆ ಎಂದು ಸಮಜಾಯಿಷಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X