Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭವಿಷ್ಯದಲ್ಲಿ ಬೆರಳೆಣಿಕೆಯಷ್ಟು...

ಭವಿಷ್ಯದಲ್ಲಿ ಬೆರಳೆಣಿಕೆಯಷ್ಟು ಕ್ರಿಪ್ಟೊಕರೆನ್ಸಿಗಳು ಮಾತ್ರ ಉಳಿದುಕೊಳ್ಳಲಿವೆ: ರಘುರಾಮ್ ರಾಜನ್

ವಾರ್ತಾಭಾರತಿವಾರ್ತಾಭಾರತಿ25 Nov 2021 6:25 PM IST
share
ಭವಿಷ್ಯದಲ್ಲಿ ಬೆರಳೆಣಿಕೆಯಷ್ಟು ಕ್ರಿಪ್ಟೊಕರೆನ್ಸಿಗಳು ಮಾತ್ರ ಉಳಿದುಕೊಳ್ಳಲಿವೆ: ರಘುರಾಮ್ ರಾಜನ್

ಹೊಸದಿಲ್ಲಿ: ಇಂದು ಅಸ್ತಿತ್ವದಲ್ಲಿರುವ 6,000ಕ್ಕೂ ಅಧಿಕ ಕ್ರಿಪ್ಟೊಕರೆನ್ಸಿಗಳ ಪೈಕಿ ಬೆರಳೆಣಿಕೆಯಷ್ಟು ಮಾತ್ರ ಭವಿಷ್ಯದಲ್ಲಿ ಉಳಿದುಕೊಳ್ಳಬಹುದು ಎಂದು ಮಾಜಿ ಆರ್ಬಿಐ ಗವರ್ನರ್ ರಘುರಾಮ ರಾಜನ್ ಅವರು ಹೇಳಿದ್ದಾರೆ. ಕ್ರಿಪ್ಟೊಕರೆನ್ಸಿಗಳ ಹುಚ್ಚನ್ನು 17ನೇ ಶತಮಾನದಲ್ಲಿ ನೆದರ್‌ಲ್ಯಾಂಡ್ಸ್‌ ನಲ್ಲಿಯ ಟುಲಿಪ್ ಉನ್ಮಾದಕ್ಕೆ ಹೋಲಿಸಿರುವ ಅವರು, ಮೌಲ್ಯದ ಸಂಗ್ರಹ ಮತ್ತು ಮೌಲ್ಯವರ್ಧನೆ ಆಗಬಹುದಾದ ಒಂದು ಆಸ್ತಿಯಾಗಿ ಹಾಗೂ ಪಾವತಿಗಳಲ್ಲಿ ಬಳಕೆಗಾಗಿ; ಈ ಎರಡು ಕಾರಣಗಳಿಂದಾಗಿ ಜನರು ಕ್ರಿಪ್ಟೊಕರೆನ್ಸಿಗಳನ್ನು ಹೊಂದಿದ್ದಾರೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಾವತಿಗಳನ್ನು ಮಾಡಲು ನಮಗೆ ನಿಜಕ್ಕೂ 6,000 ಕ್ರಿಪ್ಟೊಕರೆನ್ಸಿಗಳ ಅಗತ್ಯವಿದೆಯೇ? ನಗದು ಮತ್ತು ಕರೆನ್ಸಿಗೆ ಬದಲಿಯಾಗಿ ತಂತ್ರಜ್ಞಾನವು ಅಷ್ಟೊಂದು ಉಪಯೋಗಿಯಾಗಿದ್ದರೂ ಪಾವತಿಗಳಲ್ಲಿ ಬಳಕೆಗಾಗಿ ಒಂದೆರಡು, ಕೈಬೆರಳೆಣಿಕೆಯಷ್ಟು ಕ್ರಿಪ್ಟೊಕರೆನ್ಸಿಗಳು ಉಳಿದುಕೊಳ್ಳಬಹುದು. ಮುಂದೆ ಅಧಿಕ ಮೌಲ್ಯಗಳೊಂದಿಗೆ ಹೆಚ್ಚಿನ ಕ್ರಿಪ್ಟೊಗಳು ಬದುಕುಳಿಯುವ ಸಾಧ್ಯತೆಯಿಲ್ಲ ಎಂದು ಆಂಗ್ಲ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಜನ್ ಹೇಳಿದರು.

ಜನರಿಂದ ಹಣ ಸಂಗ್ರಹಿಸಿ ಪಂಗನಾಮ ಹಾಕುವ ಅನಿಯಂತ್ರಿತ ಚಿಟ್ ಫಂಡ್ ಗಳ ಸಮಸ್ಯೆಯನ್ನೇ ಕ್ರಿಪ್ಟೊಗಳು ಕೂಡ ಒಡ್ಡಬಹುದು ಎಂದು ಹೇಳಿದ ರಾಜನ್, “ಭವಿಷ್ಯದಲ್ಲಿ ಹೆಚ್ಚು ಮೌಲ್ಯವನ್ನು ಹೊಂದಲಿವೆ ಎಂಬ ಕಾರಣದಿಂದ ಮಾತ್ರ ವಸ್ತುಗಳು ಹೆಚ್ಚಿನ ಮೌಲ್ಯವನ್ನು ಹೊಂದಿದ್ದರೆ ಮತ್ತು ಅದೊಂದೇ ಕಾರಣವಾಗಿದ್ದರೆ ಅದನ್ನು ನಾವು ಗುಳ್ಳೆ ಎಂದು ಕರೆಯುತ್ತೇವೆ” ಎಂದು ಬೆಟ್ಟು ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X