ಇ-ಕೆವೈಸಿ ನೊಂದಣಿಗೆ ಅಂತಿಮ ಅವಕಾಶ
ಉಡುಪಿ, ನ. 25: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು, ನವೆಂಬರ್ 30 ರೊಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು ಕೊನೆಯ ಅವಕಾಶವನ್ನು ಕಲ್ಪಿಸಲಾಗಿದೆ.
5 ಹಾಗೂ 15 ವರ್ಷ ತುಂಬಿದ ಮಕ್ಕಳ ಬಯೋಮೆಟ್ರಿಕ್ ದಾಖಲೆಗಳನ್ನು ಆಧಾರ್ನಲ್ಲಿ ನಮೂದಿಸಿ, ನಂತರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಬೇಕು. ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಲಭ್ಯವಾಗದಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಕಾರಣಗಳೊಂದಿಗೆ ನ್ಯಾಯಬೆಲೆ ಅಂಗಡಿಗೆ ಒದಗಿಸಬೇಕು.
ನವೆಂಬರ್ 30ರೊಳಗೆ ಇ-ಕೆವೈಸಿ ಮಾಡದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರ ಬಗ್ಗೆ ಸರಕಾರದ ಸೂಕ್ತ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





