Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೀಮಾ ಕೋರೆಗಾಂವ್ ಪ್ರಕರಣ: ಸಾಮಾಜಿಕ...

ಭೀಮಾ ಕೋರೆಗಾಂವ್ ಪ್ರಕರಣ: ಸಾಮಾಜಿಕ ಹೋರಾಟಗಾರ ಮಹೇಶ್ ರಾವತ್‌ಗೆ ಜಾಮೀನು ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ25 Nov 2021 6:21 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭೀಮಾ ಕೋರೆಗಾಂವ್ ಪ್ರಕರಣ: ಸಾಮಾಜಿಕ ಹೋರಾಟಗಾರ ಮಹೇಶ್ ರಾವತ್‌ಗೆ ಜಾಮೀನು ನಿರಾಕರಣೆ

ಹೊಸದಿಲ್ಲಿ, ನ. 25: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಅರಣ್ಯ ಹಕ್ಕುಗಳ ಹೋರಾಟಗಾರ ಮಹೇಶ್‌ರಾವತ್ ಅವರಿಗೆ ವಿಶೇಷ ಎನ್‌ಐಎ ನ್ಯಾಯಾಲಯ ಗುರುವಾರ ಜಾಮೀನು ನೀಡಲು ನಿರಾಕರಿಸಿದೆ. ನಿಷೇಧಿತ ನಕ್ಸಲೀಯರ ಗುಂಪುಗಳು 2017 ಡಿಸೆಂಬರ್ 31ರಂದು ಪುಣೆಯಲ್ಲಿ ಎಲ್ಗಾರ್ ಪರಿಷತ್ ಸಮಾವೇಶ ಆಯೋಜಿಸಿದ್ದರು ಎಂದು ಆರೋಪಿಸಿದ್ದ ಎಫ್‌ಐಆರ್‌ಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಈ ಕಾರ್ಯಕ್ರಮದಲ್ಲಿ ಮಾಡಿದ ಭಾಷಣಗಳು ಮರು ದಿನ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭೀಮಾ ಕೋರೆಗಾಂವ್ ಗ್ರಾಮದಲ್ಲಿ ಹಿಂಸಾಚಾರ ನಡೆಯಲು ಕಾರಣವಾಯಿತು ಎಂದು ಪೊಲೀಸರು ಆರೋಪಿಸಿದ್ದರು.

ಮಾವೋವಾದಿ ಸಿದ್ಧಾಂತ ಪ್ರಸಾರ ಮಾಡಿದ ಹಾಗೂ ಅಕ್ರಮ ಚಟುವಟಿಕೆಗಳಿಗೆ ಉತ್ತೇಜನ ನೀಡಿದ ಆರೋಪಕ್ಕೆ ರಾವತ್ ಒಳಗಾಗಿದ್ದಾರೆ. ನಿಷೇಧಿತ ನಕ್ಸಲೀಯ ಸಂಘಟನೆಗಳಿಗೆ ರಾವತ್ ಅವರು ಹಣಕಾಸಿನ ನೆರವು ನೀಡಿದ್ದಾರೆ ಎಂದು ಕೂಡ ಎನ್‌ಐಎ ಆರೋಪಿಸಿದೆ. ಪರಾರಿಯಾಗಿ ಭೂಗತನಾಗಿದ್ದ ಮಾವೋವಾದಿ ನಾಯಕನನ್ನು ಭೇಟಿ ಮಾಡಿಸಲು ಟಾಟಾ ಇನ್‌ಸ್ಟಿಟ್ಯೂಟ್‌ನ ಸಾಮಾಜಿಕ ವಿಜ್ಞಾನದ ವಿದ್ಯಾರ್ಥಿಗಳನ್ನು 2017ರಲ್ಲಿ ಕರೆದೊಯ್ದ ಆರೋಪ ಕೂಡ ರಾವತ್ ಅವರು ಮೇಲಿದೆ ಎಂದು ಪ್ರಕರಣವನ್ನು ಆರಂಭದಲ್ಲಿ ತನಿಖೆ ನಡೆಸಿದ ಪುಣೆ ಪೊಲೀಸರು ತಿಳಿಸಿದ್ದಾರೆ.

ರಾವತ್ ಅವರು ಟಾಟಾ ಇನ್‌ಸ್ಟಿಟ್ಯೂಟ್‌ನ ಇಬ್ಬರು ಮಾಜಿ ವಿದ್ಯಾರ್ಥಿಗಳನ್ನು ಮಾವೋವಾದಿ ಸಂಘಟನೆಗೆ ನಿಯೋಜಿಸಿದ್ದರು. ಅಲ್ಲದೆ ಅವರಿಗೆ ಶಸ್ತ್ರಾಸ್ತ್ರ ತರಬೇತು ನೀಡಲಾಗಿದೆ ಎಂದು ಎನ್‌ಐಎ ಹೇಳಿದೆ. ಜಾಮೀನು ವಿಚಾರಣೆಯ ವೇಳೆ ರಾವತ್ ಅವರ ವಕೀಲ ವಿಜಯ್ ಹಿರೇಮಠ್, ಆರೋಪಗಳನ್ನು ಸಾಬೀತುಪಡಿಸಲು ಎನ್‌ಐಎ ವಿಫಲವಾಗಿದೆ ಎಂದು ಹೇಳಿದರು. ಮಾವೋವಾದಿಗಳಿಗೆ ಹಣಕಾಸಿನ ನೆರವು ನೀಡಿರುವುದರ ಬಗ್ಗೆ ಯಾವುದೇ ದಾಖಲೆ ಇಲ್ಲ ಎಂದು ಹಿರೇಮಠ್ ತಿಳಿಸಿದ್ದಾರೆ. ಇದಲ್ಲದೆ ನಕ್ಸಲೀಯ ಸಂಘಟನೆಗೆ ರಾವತ್ ನೇಮಕಾತಿ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಯಾವುದೇ ಅಂಶವನ್ನು ಆರೋಪ ಪಟ್ಟಿ ಒಳಗೊಂಡಿಲ್ಲ ಎಂದು ಅವರು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X