Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಆ್ಯಪ್ ಮೂಲಕ ಅಕ್ರಮ ಸಾಲ;...

ಬೆಂಗಳೂರು: ಆ್ಯಪ್ ಮೂಲಕ ಅಕ್ರಮ ಸಾಲ; ಇಬ್ಬರು ಆರೋಪಿಗಳ ಸೆರೆ, ಚೀನಾ ಪ್ರಜೆಗೆ ಶೋಧ

ವಾರ್ತಾಭಾರತಿವಾರ್ತಾಭಾರತಿ26 Nov 2021 8:27 PM IST
share
ಬೆಂಗಳೂರು: ಆ್ಯಪ್ ಮೂಲಕ ಅಕ್ರಮ ಸಾಲ; ಇಬ್ಬರು ಆರೋಪಿಗಳ ಸೆರೆ, ಚೀನಾ ಪ್ರಜೆಗೆ ಶೋಧ

ಬೆಂಗಳೂರು, ನ.26: ಆನ್‍ಲೈನ್ ಮೊಬೈಲ್ ಆ್ಯಪ್ ಮೂಲಕ ಸಾಲ ನೀಡಿ ದುಬಾರಿ ಬಡ್ಡಿ ವಸೂಲಿ ಮಾಡುವುದು ಹಾಗೂ ನಕಲಿ ಕಂಪೆನಿಗಳನ್ನು ತೆರೆದು ಹಣವನ್ನು ಹೂಡಿಕೆ ಮಾಡಿಕೊಂಡು ವಂಚಿಸುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿ, ಚೀನಾ ಪ್ರಜೆ ಪತ್ತೆಗಾಗಿ  ಸಿಸಿಬಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. 

ಬಂಧಿತರನ್ನು ಲೈಕೋರೈಸ್ ಟೆಕ್ನಾಲಜಿಯ ಮಾನವ ಸಂಪನ್ಮೂಲ ಅಧಿಕಾರಿ ಕಾಮರಾಜ್ ಮೋರೆ(25) ಹಾಗೂ ಟೀಂ ಲೀಡರ್ ದರ್ಶನ್ ಚೌಹಾಣ್(22) ಎಂದು ಗುರುತಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿ ಪರಾರಿಯಾಗಿರುವ ಚೀನಾ ದೇಶದ ಪ್ರಜೆಗಾಗಿ ತೀವ್ರ ಶೋಧ ನಡೆಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ತಿಳಿಸಿದ್ದಾರೆ. 

ನಗರದಲ್ಲಿ ನಕಲಿ ಕಂಪೆನಿಗಳನ್ನು ತೆರೆದು, ಆ್ಯಪ್‍ಗಳ ಮೂಲಕ ಸಾರ್ವಜನಿಕರಿಗೆ ವಾರದ ಬಡ್ಡಿಗೆ ಸಾಲ ನೀಡುತ್ತಿದ್ದರು. ಸಾಲಕ್ಕೆ ದುಬಾರಿ ವಾರದ ಬಡ್ಡಿಯನ್ನು ಸೇರಿಸಿ ವಾರ ವಾರ ಮರುಪಾವತಿ ಮಾಡುವಂತೆ ಮೊಬೈಲ್ ಹಾಗೂ ಇಂಟರ್‍ನೆಟ್ ಮೂಲಕ ಕರೆ ಮಾಡುತ್ತಿದ್ದರು. 

ಸಾಲ ಮರು ಪಾವತಿ ಮಾಡಲು ವಿಫಲರಾದ ಗ್ರಾಹಕರ ಖಾಸಗಿ ಮಾಹಿತಿಯನ್ನು ಆಕೆಯ ಹಾಗೂ ಆತನ ಸ್ನೇಹಿತರಿಗೆ ಕಳುಹಿಸಿ ಅವಮಾನ ಮಾಡಿ ಮಾನಸಿಕ ಹಿಂಸೆ ನೀಡಿ ಬೆದರಿಕೆ ಹಾಕುತ್ತಿದ್ದರು. ಮೊದಲು ಪರಾರಿಯಾಗಿರುವ ಚೀನಾ ದೇಶದ ಪ್ರಜೆಯೊಬ್ಬ ಅನಧಿಕೃತ ಕಂಪೆನಿಯನ್ನು ತೆರೆದಿದ್ದು, ಬಳಿಕ ಒಬ್ಬರ ಹೆಸರಿನಲ್ಲಿ ಐದಾರು ಕಂಪೆನಿಗಳನ್ನು ತೆರೆದಿದ್ದರು. 

ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂಬ ಆಮಿಷವೊಡ್ಡಿ ನಂಬಿಕೆ ಹುಟ್ಟಿಸಿ ಹಣ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ಒಬ್ಬರ ಹೆಸರಿನಲ್ಲಿ 5 ರಿಂದ 6ರಂತೆ ಕಂಪೆನಿಗಳನ್ನು ನೋಂದಾಯಿಸಿ ಒಟ್ಟು 52 ಕಂಪೆನಿಗಳನ್ನು ನೋಂದಾವಣಿ ಮಾಡಿ ಅವುಗಳ ಹೆಸರಿನಲ್ಲಿ ಕೋಟಾಕ್ ಮಹೀಂದ್ರ, ಐಡಿಎಫ್‍ಸಿ ಇನ್ನಿತರ ಬ್ಯಾಂಕ್‍ಗಳಲ್ಲಿ ಖಾತೆ ತೆರೆದು ದುಬಾರಿ ಬಡ್ಡಿಯ ಸಾಲದ ಹಣವನ್ನು ಖಾತೆಗೆ ಜಮಾಯಿಸಿ ಆನ್‍ಲೈನ್ ಮುಖಾಂತರ ಆ ಖಾತೆಗಳಿಂದ ಕೋಟ್ಯಂತರ ಹಣವನ್ನು ನಮ್ಮ ದೇಶಕ್ಕೆ ರವಾನಿಸಿಕೊಂಡಿದ್ದರು ಎಂದು ಸಂದೀಪ್ ಪಾಟೀಲ್ ತಿಳಿಸಿದರು. ಬಂಧಿತ ಆರೋಪಿಗಳಿಂದ 83 ಮೊಬೈಲ್‍ಗಳನ್ನು ವಶಪಡಿಸಿಕೊಂಡು ಮಾರತ್‍ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X