Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾಕ್: ಉಮಯ್ಯ ಯುಗದ ಮಣ್ಣಿನ ಮಸೀದಿ...

ಇರಾಕ್: ಉಮಯ್ಯ ಯುಗದ ಮಣ್ಣಿನ ಮಸೀದಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ26 Nov 2021 11:22 PM IST
share

ಬಗ್ದಾದ್, ನ.26: ಇರಾಕ್‌ನ ದಕ್ಷಿಣ ಭಾಗದ ಧಿ ಖಾರ್ ಗವರ್ನರ್ ಪ್ರಾಂತದಲ್ಲಿ ಹಿಜಿರ ಶಕದ 60ನೇ ವರ್ಷಕ್ಕೆ ಸೇರಿದ ಮಣ್ಣಿನ ಮಸೀದಿಯನ್ನು ಬ್ರಿಟನ್‌ನ ಮ್ಯೂಸಿಯಂ ಉತ್ಖನನ ತಂಡವು ಸ್ಥಳೀಯ ಇರಾಕಿ ತಂಡದ ನೆರವಿನಿಂದ ಪತ್ತೆಹಚ್ಚಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಲ್-ರಫಾಯಿ ನಗರದ ಮಧ್ಯಭಾಗದಲ್ಲಿ ಸುಮಾರು 16 ಅಡಿ ಎತ್ತರ, 26 ಅಡಿ ಅಗಲದ    ಈ ಮಸೀದಿ ಪತ್ತೆಯಾಗಿದೆ. ಮಸೀದಿಯ ಮಧ್ಯಭಾಗದಲ್ಲಿ ಸಣ್ಣ ಪ್ರಾರ್ಥನಾ ಕೊಠಡಿಯಿದ್ದು ಇದರಲ್ಲಿ 25 ಮಂದಿಗೆ ಸ್ಥಳಾವಕಾಶವಿದೆ ಎಂದು ಉತ್ಖನನ ತಂಡ ಹೇಳಿದೆ. ಇಸ್ಲಾಮ್‌ನ ಆರಂಭಿಕ ವರ್ಷಗಳಿಗೆ ಸಂಬಂಧಿಸಿದ, ಸಂಪೂರ್ಣ ಮಣ್ಣಿನಿಂದ ನಿರ್ಮಿಸಿರುವ ಈ ಮಸೀದಿಯ ಉತ್ಖನನ ಅತ್ಯಂತ ಮಹತ್ವದ ಮತ್ತು ಮಹೋನ್ನತ ಅನ್ವೇಷಣೆಯಾಗಿದೆ ಎಂದು ಗವರ್ನರ್ ಪ್ರಾಂತದ ಪರಿಶೋಧನೆ ಮತ್ತು ಉತ್ಖನನ ಇಲಾಖೆಯ ಮುಖ್ಯಸ್ಥ ಅಲಿ ಶಲ್ಘಾಮ್ ಹೇಳಿದ್ದಾರೆ.

ಈ ಪ್ರಾಂತದಲ್ಲಿ ಉಮಯ್ಯ ಯುಗಕ್ಕೆ ಸಂಬಂಧಿಸಿದ ಹಲವು ಪುರಾತತ್ವಶಾಸ್ತ್ರದ  ಧಾರ್ಮಿಕ ಕೇಂದ್ರಗಳನ್ನು ಅನ್ವೇಷಿಸಲಾಗಿದೆ. ಆದರೆ ಸವಕಳಿಯಿಂದಾಗಿ, ಇಸ್ಲಾಮಿನ ಈ ಯುಗಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಬೆಳಕಿಗೆ ಬಂದಿಲ್ಲ. ಮಣ್ಣಿನ ಮಸೀದಿಯು ಭೂಮಿಯ ಮೇಲ್ಪದರದಲ್ಲೇ ಪತ್ತೆಯಾಗಿರುವುದರಿಂದ ಮಸೀದಿ ಕಟ್ಟಡದ ಹೆಚ್ಚಿನ ಭಾಗಗಳು ನೀರು, ಗಾಳಿ ಮತ್ತು ಮಳೆಯಿಂದಾಗಿ ಸವೆದು ಹೋಗಿರಬಹುದು ಎಂದವರು ಹೇಳಿದ್ದಾರೆ.

ಪ್ರಾಚೀನಯುಗದ ಮೆಸೊಪೊಟೇಮಿಯಾದಲ್ಲಿ ಸುಮೇರಿಯನ್ ಸಮುದಾಯದವರು ವಾಸಿಸುತ್ತಿದ್ದ ಉರ್ ಎಂಬ ಪ್ರದೇಶ ಸಹಿತ ಧಿ ಖಾರ್ ಪ್ರಾಂತದಲ್ಲಿ ಹಲವು ಪುರಾತತ್ವ ಶಾಸ್ತ್ರಕ್ಕೆ ಸಂಬಂಧಿಸಿದ ಪ್ರದೇಶಗಳು ಬೆಳಕಿಗೆ ಬಂದಿದೆ. ಕಳೆದ ವರ್ಷ ಪೋಪ್ ಫ್ರಾನ್ಸಿಸ್ ಅವರೂ ಉರ್ ನಗರವನ್ನು ಸಂದರ್ಶಿಸಿದ್ದರು.

ಇದೇ ಪ್ರಾಂತದ ಲಾರ್ಸಾ ಎಂಬಲ್ಲಿ ಸಿನ್-ಇದ್ನಾಮ್ ದೊರೆಯ ಅರಮನೆಯನ್ನು ಫ್ರಾನ್ಸ್‌ನ ಉತ್ಖನನ ತಂಡದವರು ಅನ್ವೇಷಿಸಿದ್ದರು. ಇದೇ ಸ್ಥಳದಲ್ಲಿ ಸುಮಾರು 4,000 ವರ್ಷಗಳಷ್ಟು ಪುರಾತನ ಸಮುದಾಯದ ಕುರಿತ ಕುರುಹುಗಳನ್ನು ರಶ್ಯ-ಇರಾಕ್ ಜಂಟಿ ತಂಡದವರು ಅನ್ವೇಷಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X