Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ವೈರಸ್ ಪ್ರಬೇಧದ ಭೀತಿ : ಸೆನ್ಸೆಕ್ಸ್...

ಹೊಸ ವೈರಸ್ ಪ್ರಬೇಧದ ಭೀತಿ : ಸೆನ್ಸೆಕ್ಸ್ ಮಹಾಪತನ

ವಾರ್ತಾಭಾರತಿವಾರ್ತಾಭಾರತಿ27 Nov 2021 1:35 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೊಸ ವೈರಸ್ ಪ್ರಬೇಧದ ಭೀತಿ : ಸೆನ್ಸೆಕ್ಸ್ ಮಹಾಪತನ

ಮುಂಬೈ: ಹಾಲಿ ಇರುವ ಲಸಿಕೆಗಳಿಗೆ ಪ್ರತಿರೋಧ ಶಕ್ತಿ ಬೆಳೆಸಿಕೊಂಡಿರುವ ಕೋವಿಡ್-19 ವೈರಸ್‌ನ ಹೊಸ ರೂಪಾಂತರ ಮೊದಲ ಬಾರಿಗೆ ಬೋತ್ಸುವಾನಾದಲ್ಲಿ ಪತ್ತೆಯಾಗಿದ್ದು, ಜಾಗತಿಕ ಹೂಡಿಕೆದಾರರನ್ನು ಕಂಗೆಡಿಸಿದೆ. ಇದರ ಪರಿಣಾಮವಾಗಿ ಅಪಾಯ ಸಾಧ್ಯತೆಯ ಆಸ್ತಿಗಳನ್ನು ಮಾರಾಟ ಮಾಡುವ ಪ್ರವೃತ್ತಿ ಜಾಗತಿಕ ಮಾರುಕಟ್ಟೆಯಲ್ಲಿ ಕಂಡುಬಂದಿದೆ.

ದಲಾಲ್‌ ಸ್ಟ್ರೀಟ್ ಹೂಡಿಕೆದಾರರು ಕೂಡಾ ಅಪಾಯದ ಕರೆಗಂಟೆ ಒತ್ತಿದ್ದು, ಸೆನ್ಸೆಕ್ಸ್ 1688 ಅಂಕಗಳಷ್ಟು ಕುಸಿಯಲು ಇದು ಕಾರಣವಾಗಿದೆ.

ಕಳೆದ ಏಳು ತಿಂಗಳ ಅವಧಿಯಲ್ಲಿ ಒಂದೇ ಬಾರಿ ಸಂಭವಿಸಿದ ಅತಿದೊಡ್ಡ ಕುಸಿತ ಇದಾಗಿದ್ದು, 57107 ಅಂಕಗಳೊಂದಿಗೆ ಮುಕ್ತಾಯವಾಗಿದೆ. ಒಮ್ಮೆ ಅಲ್ಪಾವಧಿಗೆ 57 ಸಾವಿರದ ಮಟ್ಟಕ್ಕೂ ಕುಸಿದಿತ್ತು. ಮೂರು ತಿಂಗಳಲ್ಲಿ ಈ ಮಟ್ಟಕ್ಕೆ ಕುಸಿದಿರುವುದು ಇದೇ ಮೊದಲು.

ಶುಕ್ರವಾರ ಷೇರು ಪೇಟೆ ಸೂಚ್ಯಂಕ 2.9% ಕುಸಿದಿದ್ದು, ಜಾಗತಿಕ ಮಾರುಕಟ್ಟೆಗಳಲ್ಲಿ ಕಂಡುಬಂದಿರುವ ದುರ್ಬಲ ವಾತಾವರಣ ಇದಕ್ಕೆ ಮುಖ್ಯ ಕಾರಣ. ಕಳೆದ ಕೆಲ ದಿನಗಲಲ್ಲಿ, ವಿಶ್ವದ ಅತಿದೊಡ್ಡ ಆರ್ಥಿಕತೆ ಎನಿಸಿದ ಅಮೆರಿಕದಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣ 30 ವರ್ಷದಲ್ಳೇ ಗರಿಷ್ಠ ಮಟ್ಟಕ್ಕೆ ತಲುಪಿದೆ ಎಂದು ಅಮೆರಿಕ ಘೋಷಿಸಿದ ಬೆನ್ನಲ್ಲೇ ಜಾಗತಿಕವಾಗಿ ಹೊಸ ಆತಂಕ ಕವಿದಿದೆ. ಇದು ಅಮೆರಿಕದ ಫೆಡರಲ್ ರಿಸರ್ವ್ ಬಗ್ಗೆ, ಸೆಂಟ್ರಲ್ ಬ್ಯಾಂಕ್ ಬಗ್ಗೆ ಹೂಡಿಕೆದಾರರಲ್ಲಿ ಅನುಮಾನಕ್ಕೆ ಕಾರಣವಾಗಿದ್ದು, 2022ರ ಆರಂಭದಲ್ಲಿ ದರ ಹೆಚ್ಚಿಸುವ ನಿರೀಕ್ಷೆ ಇದೆ. ವರ್ಷದ ಉತ್ತರಾರ್ಧಕ್ಕಿಂತ ಮುನ್ನವೇ ಈ ಕ್ರಮಕ್ಕೆ ಮುಂದಾಗುವ ಸಾಧ್ಯತೆ ಇದೆ.

ಭಾರತದಲ್ಲಿ ಕೂಡಾ ಸಗಟು ಹಣದುಬ್ಬರ ಸತತ ಏಳು ತಿಂಗಳುಗಳಿಂದ ಎರಡಂಕಿಯಲ್ಲೇ ಇರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಎಚ್ಚರಿಕೆಯಿಂದ ಕಾದು ನೋಡುತ್ತಿದ್ದಾರೆ. ಕಚ್ಚಾ ತೈಲದ ದರ ಹೆಚ್ಚಳ ಕೂಡಾ ಹೂಡಿಕೆದಾರರ ಆತಂಕಕ್ಕೆ ಕಾರಣವಾಗಿದೆ.
ಶುಕ್ರವಾರ ಭಾರತೀಯ ಷೇರುಪೇಟೆಯ ಬೆಳವಣಿಗೆಗಳು ಇತರ ಏಷ್ಯನ್ ಮಾರುಕಟ್ಟೆಗಳ ನಡೆಗಳ ಜತೆ ಸಮನ್ವಯ ಹೊಂದಿದ್ದು, ಯೂರೋಪ್‌ನಲ್ಲಿ ಕೂಡಾ ಇದೇ ಪ್ರವೃತ್ತಿ ಕಂಡುಬಂದಿದೆ ಎಂದು ಎಮ್ಕೆ ವೆಲ್ತ್ ಮ್ಯಾನೇಜ್‌ಮೆಂಟ್‌ನ ಮುಖ್ಯ ಸಂಶೋಧಕ ಜೋಸೆಫ್ ಥಾಮಸ್ ವಿಶ್ಲೇಷಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X