Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಉಡುಪಿ ಶ್ರೀಕೃಷ್ಣ ಮಠಕ್ಕೆ ಶ್ರೀಗಂಧ;...

ಉಡುಪಿ ಶ್ರೀಕೃಷ್ಣ ಮಠಕ್ಕೆ ಶ್ರೀಗಂಧ; ಡಿಸಿ ಶಿಫಾರಸು 10 ಕೆ.ಜಿ., ಸರಕಾರ ಕೊಡಲು ಹೊರಟಿದ್ದು 6 ಕ್ವಿಂಟಾಲ್!

ಜಿ. ಮಹಾಂತೇಶ್ಜಿ. ಮಹಾಂತೇಶ್27 Nov 2021 7:47 AM IST
share
ಉಡುಪಿ ಶ್ರೀಕೃಷ್ಣ ಮಠಕ್ಕೆ ಶ್ರೀಗಂಧ; ಡಿಸಿ ಶಿಫಾರಸು 10 ಕೆ.ಜಿ., ಸರಕಾರ ಕೊಡಲು ಹೊರಟಿದ್ದು 6 ಕ್ವಿಂಟಾಲ್!

ಬೆಂಗಳೂರು, ನ.27: ಪ್ರವರ್ಗ ಎ ಮತ್ತು ಬಿ ಪಟ್ಟಿಯಲ್ಲಿಲ್ಲದ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ವಾರ್ಷಿಕ 10 ಕೆ.ಜಿ. ಶ್ರೀಗಂಧ ಮಂಜೂರು ಮಾಡಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಮಾಡಿದ್ದ ಶಿಫಾರಸನ್ನು ಬದಿಗಿರಿಸಿರುವ ರಾಜ್ಯ ಬಿಜೆಪಿ ಸರಕಾರವು ಪ್ರತಿ ತಿಂಗಳು 50 ಕೆ.ಜಿ.ಯಂತೆ ವಾರ್ಷಿಕ 6 ಕ್ವಿಂಟಾಲ್ ಶ್ರೀಗಂಧವನ್ನು ಪ್ರತಿ ವರ್ಷ ಒದಗಿಸಲು ಮುಂದಾಗಿದೆ. ಅಲ್ಲದೆ ಈ ಮಠಕ್ಕೆ ಶ್ರೀಗಂಧವನ್ನು ನೀಡುವುದನ್ನು ರದ್ದುಗೊಳಿಸಿದ್ದ ಹಿಂದಿನ ಕಾಂಗ್ರೆಸ್ ಸರಕಾರದ ಆದೇಶವನ್ನು ಮರು ಪರಿಶೀಲಿಸಲು ಒಲವು ತೋರಿದೆ.

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಶ್ರೀಗಂಧ ಮಂಜೂರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಆದೇಶ ಹೊರಡಿಸುವ ಸಂಬಂಧ ಮಾಹಿತಿ ಕೋರಿರುವ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು 2021ರ ನವೆಂಬರ್ 9ರಂದು ಅರಣ್ಯ ಪಡೆ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘the-file.in’ ವೆಬ್ ಸೈಟ್’ಗೆ ಲಭ್ಯವಾಗಿದೆ.

 ಶ್ರೀ ಕೃಷ್ಣಮಠಕ್ಕೆ ಶ್ರೀಗಂಧ ಒದಗಿಸುವ ಸಂಬಂಧ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಸಚಿವ ಉಮೇಶ್ ಕತ್ತಿ ಅವರಿಗೆ 2021ರ ಸೆಪ್ಟಂಬರ್ 22ರಂದು ಪತ್ರ ಬರೆದಿದ್ದರು. ‘ಉಡುಪಿ ಶ್ರೀ ಕೃಷ್ಣಮಠದಲ್ಲಿ ಶ್ರೀ ಕೃಷ್ಣ ದೇವರ ಪೂಜಾ ಕೈಂಕರ್ಯಗಳಿಗಾಗಿ ಉಪಯೋಗಿಸುತ್ತಿದ್ದ ಶ್ರೀಗಂಧ ಹಿಂದಿನ ಕಾಲದಲ್ಲಿ ರಾಜರಿಂದ ಬಳುವಳಿಯಾಗಿ ಬಂದ ಪ್ರದೇಶದಿಂದ ದೊರಕುತ್ತಿತ್ತು. ನಂತರ ಬ್ರಿಟಿಷರ ಕಾಲಘಟ್ಟದಲ್ಲೂ ಪ್ರತಿ ವರ್ಷ 1,090 ಕೆ.ಜಿ ಶ್ರೀಗಂಧವನ್ನು ಸರಕಾರವೇ ಒದಗಿಸುತ್ತಿತ್ತು. ಆದರೆ 2017ರಲ್ಲಿ ಸರಕಾರವು ರದ್ದುಗೊಳಿಸಲು ಆದೇಶಿಸಿದೆ. ಈ ಆದೇಶವನ್ನು ಮರು ಪರಿಶೀಲಿಸಿ ಕೃಷ್ಣ ಮಠಕ್ಕೆ ಶ್ರೀಗಂಧ ಒದಗಿಸಲು ಸೂಕ್ತ ಆದೇಶ ಹೊರಡಿಸಬೇಕು.’ ಎಂದು ರಘುಪತಿ ಭಟ್ ಅವರು ಪತ್ರದಲ್ಲಿ ತಿಳಿಸಿದ್ದರು.

ಈ ಪತ್ರವನ್ನಾಧರಿಸಿ ಕಾನೂನಾತ್ಮಕವಾಗಿ ಪರಿಶೀಲಿಸಿ ನಿಯಮಾನುಸಾರವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಉಮೇಶ್ ಕತ್ತಿ ಅವರು 2021ರ ಸೆಪ್ಟಂಬರ್ 28ರಂದು ಅರಣ್ಯ ಪರಿಸರ, ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಆದರೆ ಅರಣ್ಯ ಪಡೆಯ ಮುಖ್ಯಸ್ಥರು ಈ ಸಂಬಂಧ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಹೀಗಾಗಿ 2021ರ ನವೆಂಬರ್ 9ರಂದು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಪುನಃ ಪತ್ರ ಬರೆದಿದ್ದಾರೆ.

‘ಶ್ರೀಗಂಧವನ್ನು ಯಾವ ಆಧಾರ/ಮಾನದಂಡದ ಮೇಲೆ ದೇವಸ್ಥಾನಗಳಿಗೆ ಹಂಚಿಕೆ ಮಾಡಲಾಗುವುದು, ಕರ್ನಾಟಕ ಅರಣ್ಯ ನಿಯಮಗಳು 1979ರ ನಿಯಮ 98ರ ಅನ್ವಯ ದೇವಸ್ಥಾನಗಳು ಸಲ್ಲಿಸುವ ಬೇಡಿಕೆಗೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ದೃಢೀಕರಿಸಬೇಕಾಗಿದ್ದು ಈ ಪ್ರಕ್ರಿಯೆ ನಡೆದಿದೆಯೇ’ ಎಂಬ ಮಾಹಿತಿಯನ್ನು ಕೋರಿರುವುದು ಪತ್ರದಿಂದ ತಿಳಿದು ಬಂದಿದೆ.

ಅದೇ ರೀತಿ ಪ್ರಸ್ತಾಪಿತ ವರ್ಗದ ಒಟ್ಟು ಲಭ್ಯತೆಯ ಪ್ರಮಾಣವೆಷ್ಟು, ಈ ಉದ್ದೇಶಕ್ಕಾಗಿ ಮೀಸಲಿಡಬೇಕಿರುವ ಶ್ರೀಗಂಧ ಪ್ರಮಾಣ ಎಷ್ಟು ಎಂಬ ಮಾಹಿತಿಯನ್ನು ಕೋರಿರುವುದು ಪತ್ರದಿಂದ ಗೊತ್ತಾಗಿದೆ.

ಪ್ರವರ್ಗ ಎ ಮತ್ತು ಬಿ ಪಟ್ಟಿಯಲ್ಲಿ ನಮೂದಿಸಿದ ದೇವಸ್ಥಾನ ಹಾಗೂ ಸಂಸ್ಥೆಗಳಿಗೆ ಕ್ರಮವಾಗಿ 20 ಕೆಜಿ ಹಾಗೂ 10 ಕೆಜಿ ಶ್ರೀಗಂಧವನ್ನು ಮಂಜೂರು ಮಾಡಲು ಅವಕಾಶವಿದೆ. ಉಡುಪಿಯ ಶ್ರೀ ಕೃಷ್ಣ ಮಠವು ಈ ಎರಡೂ ಪಟ್ಟಿಯಲ್ಲಿ ಸೇರಿಲ್ಲ. ಒಂದು ವೇಳೆ ಇವೆರಡೂ ಪ್ರವರ್ಗಕ್ಕೆ ಒಳಗೊಂಡಿಲ್ಲದಿದ್ದಲ್ಲಿ ಜಿಲ್ಲಾಧಿಕಾರಿಗಳ ಶಿಫಾರಸಿನ ಆಧಾರದ ಮೇಲೆ ವಾರ್ಷಿಕವಾಗಿ 10 ಕೆಜಿ ಶ್ರೀಗಂಧವನ್ನು ದೇವಸ್ಥಾನ ಹಾಗೂ ಸಂಸ್ಥೆಗಳಿಗೆ ಬೇಡಿಕೆ ಇವುಗಳಲ್ಲಿ ಯಾವುದು ಪ್ರಮಾಣ ಕಡಿಮೆ ಇರುತ್ತದೆಯೋ ಅದನ್ನು ಪರಿಗಣಿಸಬಹುದು ಎಂದು ಸರಕಾರ ಆದೇಶಿಸಿತ್ತು. ಆದರೆ ಈ ಆದೇಶವನ್ನೇ ಅರಣ್ಯ, ಪರಿಸರ ಇಲಾಖೆಯು ಬದಿಗಿರಿಸಿ ಪ್ರತಿ ತಿಂಗಳು 10 ಕೆಜಿಯಂತೆ ವಾರ್ಷಿಕ 120 ಕೆಜಿ ಶ್ರೀಗಂಧವನ್ನು ಪ್ರತಿ ವರ್ಷ ಒದಗಿಸುವ ಹಾಗೂ ಶ್ರೀಗಂಧದ ಲಭ್ಯತೆ ಮೇರೆಗೆ ಈ ಪ್ರಮಾಣವನ್ನು ಹೆಚ್ಚಿಸಲು ಪತ್ರ ವ್ಯವಹಾರವನ್ನು ಮುಂದುವರಿಸಿದೆ.

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ದೇವರಿಗೆ ವಿಶೇಷವಾಗಿ ಗಂಧವನ್ನು ಸಮರ್ಪಿಸಿ ಭಕ್ತರಿಗೆ ಪ್ರಸಾದ ರೂಪವಾಗಿ ನೀಡಲು ತಿಂಗಳಿಗೆ 50 ಕೆಜಿಯಂತೆ ವಾರ್ಷಿಕವಾಗಿ 6 ಕ್ವಿಂಟಾಲ್ ಶ್ರೀಗಂಧ ಒದಗಿಸಬೇಕು ಎಂದು ಕೃಷ್ಣಮಠ ಪರ್ಯಾಯ ಆದಮಾರು ಮಠವು ಸರಕಾರಕ್ಕೆ ಕೋರಿತ್ತು. ಇದನ್ನು ಪರಿಶೀಲಿಸಿ ಪುನಃ ಶ್ರೀಗಂಧವನ್ನು ಒದಗಿಸಿ ಅದನ್ನು ಭಕ್ತರಿಗೆ ವಿನಿಯೋಗಿಸಲು ಅನುಕೂಲ ಮಾಡಿಕೊಟ್ಟು ಶ್ರೀಕೃಷ್ಣ ಮುಖ್ಯ ಪ್ರಾಣ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ಶ್ರೀಕೃಷ್ಣಮಠ ಪರ್ಯಾಯ ಶ್ರೀ ಆದಮಾರು ಮಠದ ವ್ಯವಸ್ಥಾಪಕರು ಮತ್ತು ಕೃಷ್ಣಾಪುರ ಮಠದ ದಿವಾನರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 2021ರ ಆಗಸ್ಟ್ 17 ಮತ್ತು 2021ರ ಅಕ್ಟೋಬರ್ 12ರಂದು ಪತ್ರ ಬರೆದಿದ್ದರು.

ಹಾಗೆಯೇ ಮಠವು 2021ರ ಎಪ್ರಿಲ್ 23ರಂದು ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಪತ್ರ ಬರೆದಿತ್ತು. ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರತಿ ವರ್ಷವೂ ಉಚಿತವಾಗಿ ಶ್ರೀಗಂಧವನ್ನು ಪೂರೈಕೆ ಮಾಡಬೇಕು ಎಂದು ಕೋರಿಕೊಂಡಿತ್ತು. ಶ್ರೀಗಂಧವನ್ನು ಪಡೆಯಲು ಮಠವು ಕಾನೂನುಬದ್ಧವಾಗಿ ಹಕ್ಕು ಹೊಂದಿತ್ತಾದರೂ ಅದನ್ನು 2017ರ ಡಿಸೆಂಬರ್ 4ರಂದು ಹಿಂದಿನ ಕಾಂಗ್ರೆಸ್ ಸರಕಾರವು ರದ್ದುಗೊಳಿಸಿತ್ತು.

‘ಉಚಿತವಾಗಿ ಶ್ರೀಗಂಧವನ್ನು ಪಡೆಯಲು ಮಠವು ಟೈಟಲ್ ಡೀಡ್ ಹೋಲ್ಡರ್ ಆಗಿದೆ. ಕರ್ನಾಟಕ ಅರಣ್ಯ ಸಂಹಿತೆ 97ರ ಪ್ರಕಾರ 29 ಧಾರ್ಮಿಕ ಸಂಸ್ಥೆಗಳಿಗೆ ಉಚಿತವಾಗಿ ಶ್ರೀಗಂಧವನ್ನು ಪೂರೈಕೆ ಮಾಡಬೇಕು. ಹೀಗಾಗಿ ಶ್ರೀಗಂಧವನ್ನು ಮಠಕ್ಕೆ ಪೂರೈಕೆ ಮಾಡುವುದು ಸರಕಾರದ ಹೊಣೆಗಾರಿಕೆಯಾಗಿದೆ’ ಎಂದು ಎಪ್ರಿಲ್ 2021ರಂದು ಬರೆದಿದ್ದ ಪತ್ರದಲ್ಲಿ ವಿವರಿಸಲಾಗಿತ್ತು.

share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X