Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್‌ಗೆ ಟ್ರಾಕ್ಟರ್ ರ್ಯಾಲಿಯನ್ನು...

ಸಂಸತ್‌ಗೆ ಟ್ರಾಕ್ಟರ್ ರ್ಯಾಲಿಯನ್ನು ಮುಂದೂಡಿದ ರೈತರು

ಕೃಷಿಕಾಯ್ದೆಗಳ ರದ್ದತಿಗೆ ಸೋಮವಾರ ಸಂಸತ್ತಿನಲ್ಲಿ ಮಸೂದೆ ಮಂಡನೆ

ವಾರ್ತಾಭಾರತಿವಾರ್ತಾಭಾರತಿ27 Nov 2021 2:51 PM IST
share
ಸಂಸತ್‌ಗೆ ಟ್ರಾಕ್ಟರ್ ರ್ಯಾಲಿಯನ್ನು ಮುಂದೂಡಿದ ರೈತರು

ಹೊಸದಿಲ್ಲಿ,ನ.27: ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಂದ ನ.29ರ ಉದ್ದೇಶಿತ ಸಂಸತ್‌ಗೆ ಟ್ರಾಕ್ಟರ್ ರ್ಯಾಲಿಯನ್ನು ಮುಂದೂಡಲಾಗಿದೆ ಎಂದು ರೈತ ನಾಯಕ ದರ್ಶನ ಪಾಲ್ ಅವರು ಶನಿವಾರ ತಿಳಿಸಿದರು. ಸಿಂಘು ಗಡಿಯ ಬಳಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದರು.

ಟ್ರಾಕ್ಟರ್ ರ್ಯಾಲಿಗೆ ಹೊಸ ದಿನಾಂಕವನ್ನು ರೈತರು ಪ್ರಕಟಿಸಿಲ್ಲ ಕೃಷಿ ಕಾಯ್ದೆಗಳನ್ನು ಹಿಂದೆಗೆದುಕೊಳ್ಳುವುದಾಗಿ ಪ್ರಧಾನಿಗಳು ಈಗಾಗಲೇ ಪ್ರಕಟಸಿರುವುದರಿಂದ ಸದ್ಯಕ್ಕೆ ಟ್ರ್ಯಾಕ್ಟರ್ ರ್ಯಾಲಿಯನ್ನು ಮುಂದೂಡಬೇಕು ಎಂದು ಹಲವಾರು ರೈತ ಸಂಘಗಳು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದವು ಎಂದು ಬಲ್ಲ ಮೂಲಗಳು ತಿಳಿಸಿವೆ.

ಚಳಿಗಾಲದ ಅಧಿವೇಶನ ಆರಂಭಗೊಳ್ಳುವ ನ.29ರಂದು ಸಂಸತ್‌ಗೆ ಶಾಂತಿಯುತ ಟ್ರಾಕ್ಟರ್ ರ್ಯಾಲಿಯನ್ನು ನಡೆಸಲು ರೈತರು ಯೋಜಿಸಿದ್ದರು. ಕೃಷಿ ಕಾಯ್ದೆಗಳನ್ನು ಹಿಂದೆಗೆದುಕೊಳ್ಳಲು ಸರಕಾರವು ಒಪ್ಪಿದೆಯಾದರೂ ಅವು ವಿಧ್ಯುಕ್ತವಾಗಿ ರದ್ದಾಗುವವರೆಗೆ ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸುವುದಿಲ್ಲ ಎಂದು ರೈತರು ಹೇಳಿದ್ದಾರೆ. ಕಾನೂನುಬದ್ಧ ಎಂಎಸ್‌ಪಿ ಮತ್ತು ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳ ಹಿಂತೆಗೆತ ಸೇರಿದಂತೆ ಇತರ ಬೇಡಿಕೆಗಳನ್ನೂ ರೈತ ಸಂಘಟನೆಗಳು ಸರಕಾರದ ಮುಂದಿರಿಸಿವೆ.

ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಭವಿಷ್ಯದ ಕ್ರಮಗಳ ಬಗ್ಗೆ ಚರ್ಚಿಸಲು ಶನಿವಾರ ಸಭೆಯನ್ನು ನಡೆಸಿದ್ದು,ಎಂಎಸ್‌ಪಿ ಹಾಗೂ ದಿಲ್ಲಿ ಗಡಿಗಳಲ್ಲಿ ಪ್ರತಿಭಟನೆ ಸಂದರ್ಭ ಮತ್ತು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಸಾವುಗಳ ಕುರಿತು ಸರಕಾರವು ತಮ್ಮೊಂದಿಗೆ ಮಾತುಕತೆಗಳನ್ನು ನಡೆಸುವವರೆಗೆ ಪ್ರತಿಭಟನೆಯನ್ನು ಮುಂದುವರಿಸಲು ರೈತರ ಗುಂಪುಗಳು ನಿರ್ಧರಿಸಿವೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಜವೀರ್ ಸಿಂಗ್ ಜಾದೌನ್ ಅವರು ಸುದ್ದಿಗಾರರಿಗೆ ತಿಳಿಸಿದರು.

ರೈತ ಸಂಘಟನೆಗಳು ಡಿ.4ರಂದು ಮತ್ತೆ ಸಭೆ ಸೇರಲಿವೆ.

ಈ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು,ಕೃಷಿ ಕಾಯ್ದೆಗಳನ್ನು ಹಿಂದೆಗೆದುಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಕಟಣೆಯನ್ನು ಗೌರವಿಸಿ ತಮ್ಮ ಮನೆಗಳಿಗೆ ಮರಳುವಂತೆ ಪ್ರತಿಭಟನಾನಿರತ ರೈತರನ್ನು ಆಗ್ರಹಿಸಿದ್ದಾರೆ. ಪ್ರಕಟಣೆಯ ಬಳಿಕ ಪ್ರತಿಭಟನೆಯನ್ನು ನಡೆಸುವುದು ಸಮರ್ಥನೀಯವಲ್ಲ ಎಂದೂ ಅವರು ಹೇಳಿದರು.

ಅಧಿವೇಶನದ ಮೊದಲ ದಿನವಾದ ಸೋಮವಾರವೇ ಕೃಷಿ ಕಾಯ್ದೆಗಳನು ್ನಹಿಂದೆಗೆದುಕೊಳ್ಳಲು ಮಸೂದೆಯನ್ನು ಸರಕಾರವು ಮಂಡಿಸಲಿದೆ ಎಂದು ತೋಮರ್ ದೃಢಪಡಿಸಿದರು.

ಸಮಿತಿ ರಚನೆ ಪ್ರಕಟಣೆಯೊಂದಿಗೆ ಎಂಎಸ್‌ಪಿ ಕುರಿತು ರೈತರ ಬೇಡಿಕೆ ಈಡೇರಿದಂತಾಗಿದೆ ಎಂದ ಅವರು,ಕೃಷಿ ತ್ಯಾಜ್ಯಗಳನ್ನು ಸುಡುವುದನ್ನು ಅಪರಾಧ ಎಂದು ಪರಿಗಣಿಸಬಾರದು ಎಂಬ ರೈತರ ಬೇಡಿಕೆಯನ್ನು ಸರಕಾರವು ಒಪ್ಪಿಕೊಂಡಿದೆ ಎಂದು ತಿಳಿಸಿದರು.

ಪ್ರತಿಭಟನೆ ಸಂದರ್ಭದಲ್ಲಿ ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂದೆಗೆದುಕೊಳ್ಳಬೇಕು ಎಂಬ ಬೇಡಿಕೆಯ ಕುರಿತಂತೆ ತೋಮರ್,ಪ್ರಕರಣಗಳ ಗಂಭೀರತೆಯನ್ನು ಅವಲಂಬಿಸಿ ರಾಜ್ಯ ಸರಕಾರಗಳು ಈ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಿವೆ. ಪರಿಹಾರ ನೀಡಿಕೆ ವಿಷಯವೂ ರಾಜ್ಯ ಸರಕಾರಗಳ ವ್ಯಾಪ್ತಿಯಡಿ ಬರುತ್ತದೆ ಎಂದರು.

ಕೃಷಿ ಕಾಯ್ದೆಗಳ ಲಾಭಗಳ ಕುರಿತು ಕೆಲವು ರೈತ ಸಂಘಟನೆಗಳಿಗೆ ಮನವರಿಕೆ ಮಾಡಲು ಸಾಧ್ಯವಾಗದಿದ್ದಕ್ಕೆ ಸರಕಾರಕ್ಕೆ ವಿಷಾದವಿದೆ ಎಂದೂ ತೋಮರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X