Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಲಸಿಕೆಯ ಬಗ್ಗೆ ನಾವು...

ಕೋವಿಡ್ ಲಸಿಕೆಯ ಬಗ್ಗೆ ನಾವು ಅನುಮಾನಿಸುವಂತಿಲ್ಲ: ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ27 Nov 2021 3:33 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೋವಿಡ್ ಲಸಿಕೆಯ ಬಗ್ಗೆ ನಾವು ಅನುಮಾನಿಸುವಂತಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ನ.27: ಕೋವಿಡ್ ಲಸಿಕೆಗಳ ಬಗ್ಗೆ ತಾನು ಅನುಮಾನ ತಳೆಯುವಂತಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯವು,ಲಸಿಕೆ ಪಡೆದುಕೊಳ್ಳುವುದರಿಂದ ಭಾರೀ ಪ್ರಯೋಜನಗಳಿವೆ ಎಂದಿದೆ.

ಲಸಿಕೆ ಪಡೆದುಕೊಂಡ 30ದಿನಗಳಲ್ಲಿ ಸಂಭವಿಸಿರುವ ಸಾವುಗಳ ಅನುಸರಣೆ ಮತ್ತು ದಾಖಲೀಕರಣಕ್ಕಾಗಿ ಕೇಂದ್ರಕ್ಕೆ ನಿರ್ದೇಶನ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಸರ್ವೋಚ್ಚ ನ್ಯಾಯಾಲಯವು ಕೈಗೆತ್ತಿಕೊಂಡಿತ್ತು.

ಕೋವಿಡ್ ಲಸಿಕೆ ಪಡೆದುಕೊಂಡ ಬಳಿಕ ಹೆಚ್ಚುತ್ತಿರುವ ಸಾವುಗಳು ಮತ್ತು ಪ್ರತಿಕೂಲ ಪರಿಣಾಮಗಳು ವರದಿಯಾಗಿವೆ ಎಂದು ಅರ್ಜಿದಾರರು ಹೇಳಿದ್ದಾರೆ.

 ಅರ್ಜಿ ಸಲ್ಲಿಸಿದ್ದ ಸಮಯದಲ್ಲಿ ದೇಶಾದ್ಯಂತ ಸುಮಾರು 900 ಸಾವುಗಳು ಲಸಿಕೆಯೊಂದಿಗೆ ತಳುಕು ಹಾಕಿಕೊಂಡಿದ್ದವು ಎಂದು ಅರ್ಜಿದಾರರ ಪರ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಹೇಳಿದರು.

ಆದಾಗ್ಯೂ ಲಸಿಕೆಗಳು ಸಾವುಗಳಿಗೆ ಕಾರಣವಲ್ಲದಿರಬಹುದು ಎಂದು ನ್ಯಾ.ಡಿ.ವೈ.ಚಂದ್ರಚೂಡ ಅವರು ಅಭಿಪ್ರಾಯಿಸಿದರು.

ಈ ಸಾವುಗಳನ್ನು ದಾಖಲಿಸಿಕೊಳ್ಳಲು ಮೇಲ್ವಿಚಾರಣೆ ವ್ಯವಸ್ಥೆಯ ಅಗತ್ಯವಿದೆ. 2015ರಲ್ಲಿ ಕೇಂದ್ರವು ಹೊರಡಿಸಿದ್ದ ಮಾರ್ಗಸೂಚಿಗಳನ್ವಯ ಆರೋಗ್ಯ ಕಾರ್ಯಕರ್ತರು ಲಸಿಕೆ ಶಿಬಿರವನ್ನು ನಡೆಸಲಾದ ಗ್ರಾಮಗಳಲ್ಲಿ ನಿಗಾ ಇರಿಸುವುದು ಅಗತ್ಯವಾಗಿದೆ. 2020ರಲ್ಲಿ ಈ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ ಬಳಿಕ ಅವು ನಿಷ್ಕ್ರಿಯ ಕಣ್ಗಾವಲನ್ನು ಮಾತ್ರ ಒದಗಿಸುತ್ತಿವೆ ಮತ್ತು ಇದಕ್ಕಾಗಿ ಸಂಬಂಧಿತ ಕುಟುಂಬವು ದೂರನ್ನು ಸಲ್ಲಿಸುವುದು ಅಗತ್ಯವಾಗುತ್ತದೆ ಎಂದು ಗೊನ್ಸಾಲ್ವಿಸ್ ತಿಳಿಸಿದರು.

 ಪರಿಷ್ಕೃತ ಮಾರ್ಗಸೂಚಿಗಳು ಗಂಭೀರ ಮತ್ತು ಕಿರು ಪ್ರತಿಕೂಲ ಪರಿಣಾಮಗಳ ಜಾಡು ಹಿಡಿಯಲು ಬೇರೆ ಮಾರ್ಗವನ್ನು ಒದಗಿಸಿವೆ ಮತ್ತು ಮಾಸಿಕ ಪ್ರಗತಿ ವರದಿಗಳನ್ನು ರವಾನಿಸಲು ಬಾಹ್ಯ ಆರೋಗ್ಯ ಸಿಬ್ಬಂದಿಗಳು ಅದಕ್ಕೆ ಅಗತ್ಯವಾಗಿದ್ದಾರೆ ಎಂದು ಹೇಳಿದ ನ್ಯಾ.ಚಂದ್ರಚೂಡ,‘ನಾವು ಲಸಿಕೆಗಳು ನೀಡುವ ಪ್ರತಿಲಾಭಗಳನ್ನು ನೋಡಬೇಕಿದೆ.ಲಸಿಕೆಗಳಲ್ಲಿ ಏನೋ ದೋಷವಿದೆ ಎಂಬ ಸಂದೇಶವನ್ನು ನಾವು ರವಾನಿಸುವಂತಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯು ಲಸಿಕೆಗಳ ಪರವಾಗಿ ಮಾತನಾಡಿದೆ,ವಿಶ್ವಾದ್ಯಂತ ದೇಶಗಳೂ ಅದನ್ನೇ ಮಾಡುತ್ತಿವೆ. ಜನರಿಗೆ ಲಸಿಕೆಯನ್ನು ನೀಡದಿರುವ ಮೂಲಕ ಉದಾಸೀನತೆಯ ಬೆಲೆಯನ್ನು ಭರಿಸಲು ದೇಶಕ್ಕೆ ಸಾಧ್ಯವಿಲ್ಲ ’ ಎಂದರು.

ಅಮೆರಿಕ ಸೇರಿದಂತೆ ಶ್ರೀಮಂತ ರಾಷ್ಟ್ರಗಳು ಹಲವಾರು ಕೋವಿಡ್ ಲಸಿಕೆಗಳನ್ನು ಹೊಂದಿವೆ ಎಂದು ನ್ಯಾಯಾಲಯವು ಬೆಟ್ಟು ಮಾಡಿದಾಗ,ಸಕ್ರಿಯ ಕಣ್ಗಾವಲಿಗಾಗಿ ಈ ದೇಶಗಳು ಕಾರ್ಯವಿಧಾನವನ್ನು ಹೊಂದಿವೆ,ಆದರೆ ಭಾರತದಲ್ಲಿ ಇಲ್ಲ ಎಂದು ಗೊನ್ಸಾಲ್ವಿಸ್ ಹೇಳಿದರು.

ಅರ್ಜಿಯ ಪ್ರತಿಯನ್ನು ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರಿಗೆ ನೀಡುವಂತೆ ಗೊನ್ಸಾಲ್ವಿಸ್‌ರಿಗೆ ಸೂಚಿಸಿದ ನ್ಯಾಯಾಲಯವು ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X