Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುಸ್ತಕ ಸಂಸ್ಕೃತಿ ಮೇಲೆ ಜಿಎಸ್ಟಿ ಹೊರೆ...

ಪುಸ್ತಕ ಸಂಸ್ಕೃತಿ ಮೇಲೆ ಜಿಎಸ್ಟಿ ಹೊರೆ ಸಲ್ಲ: ಸಿಎನ್‍ಆರ್

ವಾರ್ತಾಭಾರತಿವಾರ್ತಾಭಾರತಿ27 Nov 2021 10:02 PM IST
share

ಬೆಂಗಳೂರು, ನ.27: ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಎಂಬ ನೂತನ ತೆರಿಗೆಯೂ ಸಹ ಪುಸ್ತಕ ಸಂಸ್ಕøತಿಯ ಮೇಲೆ ಹೆಚ್ಚು ಹೊರೆ ಹಾಕಿದೆ ಎಂದು ವಿಮರ್ಶಕ ಡಾ.ಸಿ.ಎನ್.ರಾಮಚಂದ್ರನ್ ಬೇಸರ ವ್ಯಕ್ತಪಡಿಸಿದರು.

ಶನಿವಾರ ನಗರದ ಗಾಂಧಿಭವನ ಸಭಾಂಗಣದಲ್ಲಿ ಸಪ್ನ ಬುಕ್ ಹೌಸ್ 66ನೆ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ 66 ಕನ್ನಡ ಪುಸ್ತಕಗಳ ಲೋಕಾರ್ಪಣೆ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.

ಹೊಸ ಹೊಸ ಪುಸ್ತಕಗಳನ್ನು ಪ್ರಕಟಿಸುವ ಪ್ರಕಾಶಕರಿಂದ ಪುಸ್ತಕಗಳನ್ನು ಖರೀದಿಸಿ ರಾಜ್ಯದ ವಿವಿಧ ಗ್ರಂಥಾಲಯಗಳಿಗೆ ನೀಡುವ ಪ್ರಕ್ರಿಯೆಯು ಸುಗಮವಾಗುತ್ತಿಲ್ಲ. ಜತೆಗೆ, ಖರೀದಿಸಿದ ಕೃತಿಗಳಿಗೆ ಇಂದಿಗೂ ಹಣ ಬಿಡುಗಡೆಗೊಂಡಿಲ್ಲ ಎಂದರು.

ಬಿಬಿಎಂಪಿ ವ್ಯಾಪ್ತಿಯ ಗ್ರಂಥಾಲಯಗಳಿಗೆ ಪೂರೈಸಿದ ಪುಸ್ತಕಗಳ ಒಟ್ಟು ಹಣ ಸುಮಾರು 400 ಕೋಟಿ ರೂ.ಗಳಿಗೂ ಮೀರುತ್ತದೆ. ಮತ್ತೊಂದೆಡೆ ಬಿಬಿಎಂಪಿ ಆಡಳಿತದ ವೈಖರಿಯನ್ನು ಪ್ರಕಾಶಕರು ಕೋರ್ಟಿನಲ್ಲಿ ಪ್ರಶ್ನಿಸಿದ್ದಾರೆ. ವಾಸ್ತವ ಹೀಗಿರಬೇಕಾದರೆ, ಕನ್ನಡ ಪುಸ್ತಕಗಳಿಗೆ  ಪ್ರೋತ್ಸಾಹ ಸಿಗುವುದೆಂತು ಜೊತೆಗೆ, ಜಿಎಸ್ಟಿ ಎಂಬ ನೂತನ ತೆರಿಗೆಯೂ ಸಹ ಪುಸ್ತಕ ಸಂಸ್ಕøತಿಯ ಮೇಲೆ ಹೆಚ್ಚು ಹೊರೆ ಹಾಕಿದೆ ಎಂದರು.

ಕನ್ನಡ ಸಾಹಿತ್ಯ ಪುಸ್ತಕಗಳ ಸಂಸ್ಕೃತಿ ಪ್ರಸಾರಕ್ಕೆ ಸರಕಾರದ ಗಮನ ಕೊಡುವುದು ಅಗತ್ಯವಿದೆ ಎಂದು ಒತ್ತಾಯಿಸಿದ ಅವರು, ಪುಸ್ತಕ ಓದುವವರಿದ್ದಾರೆ. ಆದರೆ, ಜಿಲ್ಲಾ ಕೇಂದ್ರದಲ್ಲೂ ಸುಸಜ್ಜಿತ ಗ್ರಂಥಾಲಯಗಳಿಲ್ಲ. ಪುಸ್ತಕ ಮಳಿಗೆಗಳಿಲ್ಲ. ಆದ್ದರಿಂದ, ಪುಸ್ತಕಗಳು ಓದುಗರಿಗೆ ಸುಲಭವಾಗಿ ಸಿಗುತ್ತಿಲ್ಲ ಎಂದು ಹೇಳಿದರು.

ಒಂದು ಕಾಲಕ್ಕೆ ಕಾದಂಬರಿಗಳೇ ಹೆಚ್ಚು ಪ್ರಕಟವಾಗುತ್ತಿದ್ದವು. ಆದರೆ, ಓದುಗರ ವೃಂದದ ಅಪೇಕ್ಷೆ-ನಿರೀಕ್ಷೆಗಳು ಬದಲಾದ ಹಿನ್ನೆಲೆಯಲ್ಲಿ ಕತೆ-ಕಾವ್ಯ ಪ್ರಕಾರದ ಸಾಹಿತ್ಯ ಹೆಚ್ಚು ಸಮೃದ್ಧವಾಗುತ್ತಿದೆ. ಸಪ್ನ ಬುಕ್ ಹೌಸ್ ಪ್ರಕಟಿಸಿದ ಒಟ್ಟು 66 ಕೃತಿಗಳ ಪೈಕಿ 12 ಕಥಾ ಸಂಕಲನ, 10 ವಿಮರ್ಶಾ ಕೃತಿ, 6 ಕವನ ಸಂಕಲನ, 3 ಕಾದಂಬರಿ ಒಳಗೊಂಡಿದ್ದು, ಉತ್ತಮ ಬೆಳವಣಿಗೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೋವಿಡ್ ಸೋಂಕಿನಿಂದ ಜೀವಗಳು ತಲ್ಲಣಿಸಿವೆ. ಇಂತಹ ಸಂದರ್ಭದಲ್ಲಿ ಸಾಹಿತ್ಯ-ಕಲೆಯಿಂದ ಆಗುವ ಸಾರ್ಥಕತೆ ಏನು ಎಂಬ ಪ್ರಶ್ನೆ ಮಾಡುವುದಕ್ಕಿಂತ ಅನುಭವಿಸಿ ನೋಡಬೇಕು. ಮನಸ್ಸಿನ ಅಂತರಂಗದ ಬಡತನ ಕಳೆಯಬೇಕು. ಜತೆಗೆ, ಬಡತನವಿರಲಿ, ಕಾರ್ಪಣ್ಯ ಬೇಡ ಎಂಬ ಮಾತು ನೆನಪಿನಲ್ಲಿಡಬೇಕು.

-ಡಾ.ಎಚ್.ಎಸ್.ವೆಂಕಟೇಶ ಮೂರ್ತಿ, ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X