Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಹ್ಯ ಶಕ್ತಿಗಳಿಂದ ವಿದ್ಯಾರ್ಥಿಗಳ...

ಬಾಹ್ಯ ಶಕ್ತಿಗಳಿಂದ ವಿದ್ಯಾರ್ಥಿಗಳ ಮುಗ್ಧತೆಯ ದುರುಪಯೋಗ: ಕೊಂಬೆಟ್ಟು ಪಪೂ ಕಾಲೇಜಿನ ಪ್ರಾಂಶುಪಾಲ ಸುರೇಶ್ ಆರೋಪ

ವಾರ್ತಾಭಾರತಿವಾರ್ತಾಭಾರತಿ27 Nov 2021 10:14 PM IST
share
ಬಾಹ್ಯ ಶಕ್ತಿಗಳಿಂದ ವಿದ್ಯಾರ್ಥಿಗಳ ಮುಗ್ಧತೆಯ ದುರುಪಯೋಗ: ಕೊಂಬೆಟ್ಟು ಪಪೂ ಕಾಲೇಜಿನ ಪ್ರಾಂಶುಪಾಲ ಸುರೇಶ್ ಆರೋಪ

ಪುತ್ತೂರು, ನ. 27: ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮುಗ್ಧತೆಯನ್ನು ದುರುಪಯೋಗಪಡಿಸಿಕೊಂಡು ಬಾಹ್ಯ ಶಕ್ತಿಗಳು ಪ್ರಚೋದನೆ ನೀಡುವ ಕೆಲಸ ಮಾಡಿದೆ ಎಂದು ಇತ್ತೀಚೆಗೆ ಇಲ್ಲಿನ ವಿದ್ಯಾರ್ಥಿಗಳ ನಡುವಿನ ಹೊಡೆದಾಟಕ್ಕೆ ಸಂಬಂಧಿಸಿ ಕಾಲೇಜಿನ ಪ್ರಾಂಶುಪಾಲ ಸುರೇಶ್ ಎನ್.ಕೆ. ಆರೋಪಿಸಿದ್ದಾರೆ.

ಅವರು ಶನಿವಾರ ಪುತ್ತೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊಂಬೆಟ್ಟು ಪದವಿ ಪೂರ್ವ ಕಾಲೇಜಿಗೆ ಶತಮಾನ ಗಳ ಇತಿಹಾಸವಿದ್ದು, ಇಲ್ಲಿ ಒಟ್ಟು 1,187 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಇಲ್ಲಿ ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಒಟ್ಟಾಗಿ ಶೈಕ್ಷಣಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳಿಗೂ ಭದ್ರತೆ ಹಾಗೂ ಸುರಕ್ಷತೆ ನೀಡಲು ಕಾಲೇಜು ಅಭಿವೃದ್ಧಿ ಸಮಿತಿ ಮತ್ತು ಸಿಬ್ಬಂದಿ ವರ್ಗ ಬದ್ಧವಾಗಿದೆ. ಮೊನ್ನೆ ನಡೆದ ಅಹಿತಕರ ಘಟನೆಯು ಕಾಲೇಜ್ ಕ್ಯಾಂಪನ್‌ನ ಒಳಗೆ ನಡೆದಿಲ್ಲ. ಅಲ್ಲದೆ ಇಲ್ಲಿ ಯಾವುದೇ ವಿದ್ಯಾರ್ಥಿಗಳು ತರಗತಿಯೊಳಗಡೆ ಮಾರಕ ಆಯುಧಗಳನ್ನು ತಂದಿಲ್ಲ ಎಂದರು.

ಅಹಿತಕರ ಘಟನೆಗೆ ಸಂಬಂಧಿಸಿ ಎಲ್ಲಾ ಮಕ್ಕಳ ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಕರೆದು ಮಾತುಕತೆ ನಡೆಸಲಾಗಿದೆ. ಅವರಿಂದ ಯಾವುದೇ ದೂರುಗಳು ಬಂದಿಲ್ಲ. ಓರ್ವ ವಿದ್ಯಾರ್ಥಿಯು ವಿದ್ಯಾರ್ಥಿನಿಗೆ ನೋಟ್ಸ್ ಪುಸ್ತಕ ನೀಡಿದ ವಿಚಾರ ಸಂಘರ್ಷಕ್ಕೆ ಮೂಲವಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯ ಪೋಷಕರನ್ನು ಕರೆದು ಅವರಿಗೆ ಮನವರಿಕೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಪೋಷಕರು ಸಕಾರಾತ್ಮಕವಾಗಿಯೇ ಮಾತನಾಡಿದ್ದಾರೆ. ಅಲ್ಲದೆ ಯಾವುದೆ ದೂರುಗಳನ್ನು ನೀಡಿಲ್ಲ. ಆದರೆ ಬಾಹ್ಯ ಸಂಘಟನೆಗಳ ಪ್ರಚೋದನೆಯಿಂದಾಗಿ ಇದು ಮುಂದುವರಿದಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಲ್ಲಿ ಇಂತಹ ಪ್ರಚೋದನೆಯು ಆತಂಕಕಾರಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಲೇಜು ಬಗ್ಗೆ ಕೆಟ್ಟ ರೀತಿಯಲ್ಲಿ ಪ್ರಚಾರ ನಡೆಸುತ್ತಿದೆ. ಇಂತಹ ಅಪಪ್ರಚಾರಗಳು ಮುಂದುವರಿದಲ್ಲಿ ಅವರ ವಿರುದ್ಧ ಕಾನೂನು ರೀತಿಯಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ತಿಳಿಸಿದರು.

ಕಾಲೇಜ್ ಕ್ಯಾಂಪಸ್ ಒಳಗಡೆ ಯಾವುದೇ ಘಟನೆಗಳು ನಡೆದರೂ ಕೂಡಲೇ ತರಗತಿಯ ಉಪನ್ಯಾಸಕರ ಗಮನಕ್ಕೆ ಅದನ್ನು ತರುವಂತೆ ಕಟ್ಟು ನಿಟ್ಟಾಗಿ ಸೂಚನೆ ನೀಡಲಾಗಿದೆ. ಪ್ರಕರಣದ ಕುರಿತು ಪುತ್ತೂರು ಡಿವೈಎಸ್‌ಪಿಯವರ ನೇತೃತ್ವದಲ್ಲಿ ತನಿಖೆ ಮುಂದುವರಿಯುತ್ತಿದೆ. ತರಗತಿಗಳು ಎಂದಿನಂತೆ ನಡೆಯುತ್ತಿವೆ ಎಂದು ಸುರೇಶ್ ಎನ್.ಕೆ. ಮಾಹಿತಿ ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಪಿ.ಜಿ.ಜಗನ್ನಿವಾಸ್ ರಾವ್ ಮಾತನಾಡಿ, ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸಮಾನವಾಗಿದ್ದು, ಹೆಣ್ಣು ಮಕ್ಕಳ ಕಲಿಕೆ ಜೊತೆಗೆ ಅವರ ಮಾನ, ಪ್ರಾಣ ರಕ್ಷಣೆ ನಮ್ಮ ಹೊಣೆಯಾಗಿದೆ. ಅದರ ಬಗ್ಗೆಯೂ ಕಾಳಜಿ ವಹಿಸಬೇಕಾಗಿದೆ. ಇಂತಹ ಅಹಿತರಕ ಘಟನೆಯಲ್ಲಿ ಅಪ್ರಾಪ್ತ ವಯಸ್ಕರು ಮಾಡಿದ್ದು, ಬಾಹ್ಯ ಪ್ರಚೋದನೆಯಿಂದಾಗಿ ಅದು ಮುಂದುವರಿಯಿತು ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಉಪನ್ಯಾಸಕರಾದ ಈಶ್ವರ್ ಭಟ್ ಬೇರಿಕೆ, ಸುಬ್ರಹ್ಮಣ್ಯ ಎಂ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X