Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಸಂವಿಧಾನ ಬದಲಿಸಿದರೆ ರಕ್ತಕ್ರಾಂತಿಯೇ...

'ಸಂವಿಧಾನ ಬದಲಿಸಿದರೆ ರಕ್ತಕ್ರಾಂತಿಯೇ ಆಗುತ್ತದೆ ಹುಷಾರ್': ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ27 Nov 2021 10:24 PM IST
share
ಸಂವಿಧಾನ ಬದಲಿಸಿದರೆ ರಕ್ತಕ್ರಾಂತಿಯೇ ಆಗುತ್ತದೆ ಹುಷಾರ್: ಸಿದ್ದರಾಮಯ್ಯ

ಮೈಸೂರು,ನ.27: ಸಂವಿಧಾನ ಬದಲಿಸಬೇಕು ಎಂದು ಪ್ರಯತ್ನ ಪಟ್ಟರೆ ಅದು ಎಂದಿಗೂ ಸಾಧ್ಯವಿಲ್ಲ, ಹಾಗೊಂದು ವೇಳೆ ಸಂವಿಧಾನ ಬದಲಿಸಿದರೆ ರಕ್ತಕ್ರಾಂತಿಯೇ ಆಗುತ್ತದೆ ಹುಷಾರ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ಬದಲಾವಣೆ ಮಾಡಬೇಕು ಎನ್ನುವವರಿಗೆ ಎಚ್ಚರಿಕೆ ನೀಡಿದರು.

ಮೈಸೂರು ವಿಶ್ವವಿದ್ಯಾನಿಲಯ ಶ್ರೀ ಎನ್.ರಾಚಯ್ಯ ಅಧ್ಯಯನ ಪೀಠ ಹಾಗೂ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘಟನೆಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಶನಿವಾರ ಮಾನಸಗಂಗೋತ್ರಿಯ ಸೆನೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಜಿ ಮೇಯರ್ ನಾರಾಯಣ್ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ “ಪೌರಬಂಧು” ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯದವರೇ ಆದ ಕೇಂದ್ರ ಮಂತ್ರಿಯೊಬ್ಬರು ಸಂವಿಧಾನ ಬದಲಿಸುತ್ತೇನೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಬಿಜೆಪಿಯ ಯಾವೊಬ್ಬ ನಾಯಕರೂ ವಿರೋಧಿಸಲಿಲ್ಲ. ಆ ಪಕ್ಷದಲ್ಲಿರುವ ದಲಿತ ನಾಯಕರಾದ ರಮೇಶ್ ಜಿಗಜಿಣಗಿ, ಗೋವಿಂದ ಕಾರಜೋಳ, ನಾರಾಯಣಸ್ವಾಮಿ ಸೇರಿದಂತೆ ಯಾರೂ ಆಕ್ಷೇಪ ವ್ಯಕ್ತಪಡಿಸಲಿಲ್ಲ. ಅವರೆಲ್ಲರೂ ಬಿಜೆಪಿ ಸೇರಿರುವುದು ಸ್ವಾರ್ಥಕ್ಕಾಗಿಯೇ ಹೊರತು ದಲಿತರ ಉದ್ಧಾರಕ್ಕಾಗಿ ಅಲ್ಲ. ಇದನ್ನೆ ನಾನು ಸಿಂಧಗಿಯಲ್ಲಿ ಹೇಳಿದ್ದು. ಈ ನನ್ನ ಹೇಳಿಕೆಯನ್ನು ಬಿಜೆಪಿಯವರು ತಿರುಚಿ ವಿವಾದ ಎಬ್ಬಿಸದರು. ಆ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ ಎಂದು ಪುನರುಚ್ಚರಿಸಿದರು.

ಬಿಜೆಪಿಯಲ್ಲಿರುವ ದಲಿತ ನಾಯಕರು ಸ್ವಾರ್ಥಿಗಳು. ಆದರೆ, ಮಾಜಿ ಮೇಯರ್ ನಾರಾಯಣ್ ಎಂದೂ ಸ್ವಾರ್ಥಿಯಾಗಲಿಲ್ಲ. ನಮ್ಮ ಪಕ್ಷದವರಾಗಿದ್ದರೂ ನಮ್ಮದೇ ಸರ್ಕಾರದ ವಿರುದ್ಧ ಹೋರಾಟ ಮಾಡಿ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಲು ಹೋರಾಡಿದರು. ತಾನೊಬ್ಬ ಪೌರಕಾರ್ಮಿಕನಾಗಿದ್ದುಕೊಂಡು ರಾಜಕೀಯ ಪ್ರವೇಶಿಸಿ ಬೆಳೆದರು ಎಂದಿಗೂ ಮೂಲವನ್ನು ಮರೆಯಲಿಲ್ಲ. ಈಗಲೂ ನನ್ನ ಬಳಿ ಬಂದರೆ ಪೌರಕಾರ್ಮಿಕರ ಕೆಲಸಕ್ಕಾಗಿಯೇ ಬರುತ್ತಾರೆ. ಪೌರಕಾರ್ಮಿಕರ ಸಂಬಳ 7ರಿಂದ  17 ಸಾವಿರ ರೂ.ಗೆ ಹೆಚ್ಚಾಗಲು ನಾರಾಯಣ್ ಹೋರಾಟವೇ ಕಾರಣ. ನಮ್ಮ ಸರ್ಕಾರ ಮತ್ತೊಮ್ಮೆ ಬಂದಿದ್ದರೆ 1.20 ಲಕ್ಷ ಮಂದಿ ಪೌರಕಾರ್ಮಿಕರನ್ನು ಕಾಯಂ ಮಾಡುತ್ತಿದ್ದೆ. ಮುಂದಿನ ಸಲ ಬಂದರೆ ಖಂಡಿತಾ ಮಾಡುತ್ತೇನೆ. ಯಾರದೇ ವಿರೋಧ ಬಂದರೂ ಹೆದರುವುದಿಲ್ಲ ಎಂದರು.

ಇದೇ ವೇಳೆ ಮಾಜಿ ಮೇಯರ್ ನಾರಾಯಣ್ ಹಾಗೂ ಪತ್ನಿ ಜಯಮ್ಮ ನಾರಾಯಣ್ ಅವರನ್ನು ಅಭಿನಂದಿಸಲಾಯಿತು. ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್‍ಕುಮಾರ್ ಅಧ್ಯತೆ ವಹಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಶಾಸಕ ಎಲ್.ನಾಗೇಂದ್ರ, ಹಿರಿಯ ಪತ್ರಕರ್ತರಾದ ಕೆ.ಶಿವಕುಮಾರ್, ಶ್ರೀ ಎನ್.ರಾಚಯ್ಯ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕ ಎಚ್.ಬಿ.ಮಲ್ಲಿಕಾರ್ಜುನಸ್ವಾಮಿ, ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೊ. ಮುಜಾಫರ್ ಅಸಾದಿ ಭಾಗವಹಿಸಿದ್ದರು. 

ಪೌರಕಾರ್ಮಿಕನಾಗಿದ್ದುಕೊಂಡು ಮೇಯರ್ ಹಂತಕ್ಕೆ ರಾಜಕೀಯವಾಗಿ ಬೆಳೆದಿರಬಹುದು. ನಾನು ಅಧಿಕಾರಕ್ಕಾಗಲಿ, ವೈಯಕ್ತಿಕ ಹಿತಾಸಕ್ತಿಗಾಗಿ ಯಾವತ್ತೂ ಹೋರಾಟ ಮಾಡಿಲ್ಲ. ನನಗೆ ಅಧಿಕಾರ ಬೇಡ. ನನ್ನ ಜನಗಳಾದ ಪೌರಕಾರ್ಮಿಕರ ವೃತ್ತಿ ಕಾಯಂ ಆದರೆ ಅದೇ ನನಗೆ ಖುಷಿ. 

   -ನಾರಾಯಣ್,  ಮಾಜಿ ಮೇಯರ್.

ನಾರಾಯಣ್ ಅವರು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿದ್ದಾಗ ಪೌರಕಾರ್ಮಿಕರನ್ನು ಸಿಂಗಾಪೂರ್‍ಗೆ ಕಳಿಸಲು ಸಿದ್ದರಾಮಯ್ಯ ಅವರು ನಿರ್ಧರಿಸಿದ್ದರು. ಕೆಲವು ಐಎಎಸ್ ಅಧಿಕಾರಿಗಳು ವಿರೋಧಿಸಿದಾಗ ನೀವು ಮಾತ್ರ ವಿದೇಶಕ್ಕೆ ಹೋಗಬಹುದು, ಪೌರಕಾರ್ಮಿಕರು ಹೋಗಬಾರದೇನ್ರಿ ಅಂದಿದ್ದರು. ಮೈಸೂರಿನ ಕಟ್ಟಕಡೆಯ ವ್ಯಕ್ತಿ ಮೊದಲ ಪ್ರಜೆ(ಮೇಯರ್) ಆಗಲು ಸಿದ್ದರಾಮಯ್ಯ ಅವರೇ ಕಾರಣ.

 ಕೆಪಿಸಿಸಿ ಕಾರ್ಯಾಧ್ಯಕ್ಷ.

ನಗರಪಾಲಿಕೆಯಲ್ಲಿ ಚಿಕ್ಕರಾಮಯ್ಯ, ಈರಮ್ಮ ಕೂಡ ಪೌರಕಾರ್ಮಿಕರಾಗಿ ದುಡಿದಿದ್ದಾರೆ. ಇವರ ಪುತ್ರ ನಾರಾಯಣ್ ಆ ಕಾಲಕ್ಕೆ ಎಸ್ಸೆಸ್ಸೆಲ್ಸಿ ಓದಿ ರೈಲ್ವೆ ಇಲಾಖೆ, ಜಾವಾ ಫ್ಯಾಕ್ಟರಿಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಆರಂಭಿಸಿದರು. ನೋಡುವುದಕ್ಕೆ ಸಮಾಜವಾದ ಸಿದ್ಧಾಂತಿ ತರಹ ಕಂಡರೂ ಅವರೊಬ್ಬ ಪಕ್ಕಾ ಕಮ್ಯುನಿಸ್ಟ್‍ವಾದಿ. ರಾಯಲ್ ಕುಟುಂಬದವರು ತಮ್ಮ ಹಿನ್ನೆಲೆ ಬಗ್ಗೆ ಕಾಫಿ ಟೇಬಲ್ ಮಾಡಿದರೆ ಅದೇ ನಾರಾಯಣ್ ಯಾವಾಗಲೂ ತಮ್ಮವರಾದ ಪೌರಕಾರ್ಮಿಕರ ಬಗ್ಗೆ ಹೋರಾಟ ಮಾಡುತ್ತಾರೆ. 

- ಕೆ.ಶಿವಕುಮಾರ್,   ಹಿರಿಯ ಪತ್ರಕರ್ತ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X