Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟೊಮ್ಯಾಟೊ ಬೆಲೆ ದಿಢೀರ್ ಕುಸಿತ

ಟೊಮ್ಯಾಟೊ ಬೆಲೆ ದಿಢೀರ್ ಕುಸಿತ

ವಾರ್ತಾಭಾರತಿವಾರ್ತಾಭಾರತಿ28 Nov 2021 8:08 AM IST
share
ಟೊಮ್ಯಾಟೊ ಬೆಲೆ ದಿಢೀರ್ ಕುಸಿತ

ಬೆಂಗಳೂರು: ಕಳೆದ ಹದಿನೈದು ದಿನಗಳಿಂದ ಏರುಮುಖಿಯಾಗಿದ್ದ ಟೊಮ್ಯಾಟೊ ಬೆಲೆ ದಿಢೀರನೇ ಕುಸಿದಿರುವುದು ರೈತರನ್ನು ಆತಂಕಕ್ಕೀಡು ಮಾಡಿದೆ.

ದೇಶದ ವಿವಿಧ ಭಾಗಗಳಿಂದ ರಾಜ್ಯಕ್ಕೆ ಟೊಮ್ಯಾಟೊ ಸರಬರಾಜು ಹೆಚ್ಚಿದ್ದು, ಶನಿವಾರ ಬೆಂಗಳೂರಿನಲ್ಲಿ ಟೊಮ್ಯಾಟೊ ಬೆಲೆ ದಿಢೀರ್ ಕುಸಿತ ಕಂಡಿದೆ. ಕೆಲ ದಿನಗಳ ಹಿಂದೆ 15 ಕೆಜಿ ಟೊಮ್ಯಾಟೊ ಬಾಕ್ಸ್‌ನ ಬೆಲೆ 3100 ರೂಪಾಯಿ ಇದ್ದುದು ಇದೀಗ ದಿಢೀರನೇ 400-600 ರೂಪಾಯಿಗೆ ಕುಸಿದಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಲ ದಿನಗಳ ಹಿಂದೆ 110-130 ರೂಪಾಯಿ ಇದ್ದ ಬೆಲೆ ಇದೀಗ 50-70ರ ಆಸುಪಾಸಿನಲ್ಲಿದೆ.

ಇಂಧನ ಬೆಲೆಯಿಂದ ಹೈರಾಣಾಗಿರುವ ಗ್ರಾಹಕರಿಗೆ ಚಿಂತೆ ಹೆಚ್ಚಿಸಿದ್ದ ಟೊಮ್ಯಾಟೊ ಬೆಲೆ, ಇದೀಗ ಇಳಿದಿರುವುದು ಗ್ರಾಹಕರಿಗೆ ಸಂತಸ ತಂದಿದ್ದರೂ, ಟೊಮ್ಯಾಟೊ ಬೆಲೆ ದಿಢೀರ್ ಕುಸಿತ ಕಂಡಿರುವುದು ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ.

"ಬೆಂಗಳೂರು ಸುತ್ತಮುತ್ತಲಿನ ಅಂದರೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ, ತಮಿಳುನಾಡಿನ ಗಡಿ ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಉತ್ಪಾದನೆ ಕಡಿಮೆಯಾಗಿ ಟೊಮ್ಯಾಟೊ ಬೆಲೆ ಗಗನಕ್ಕೇರಿತ್ತು. 15 ಕೆಜಿ ಬಾಕ್ಸ್ ಟೊಮ್ಯಾಟೊ ಬೆಲೆ 1400-1600ಕ್ಕೆ ತಲುಪಿತು. ಪೂರೈಕೆ ಕುಸಿತದಿಂದ ದಿಢೀರನೇ 3000 ರೂಪಾಯಿಗೆ ಅಲ್ಪಾವಧಿಯಲ್ಲೇ ತಲುಪಿತು. ಟೊಮ್ಯಾಟೊ ಹರಾಜಿನ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಉತ್ತರ ಕರ್ನಾಟಕ ಜಿಲ್ಲೆಗಳು ಮತ್ತು ಮಹಾರಾಷ್ಟ್ರ ಹಾಗೂ ಆಂಧ್ರದ ನೆರೆಯ ಜಿಲ್ಲೆಗಳ ಬೆಳೆಗಾರರ ಗಮನ ಸೆಳೆಯಿತು. ಇದರಿಂದಾಗಿ ಈ ಭಾಗದಿಂದ ಪೂರೈಕೆ ಹೆಚ್ಚಿತು. ಇದು ಬೆಲೆ ಕುಸಿಯಲು ಕಾರಣ" ಎಂದು ತರಕಾರಿ ಬೆಲೆಯ ಮೇಲೆ ನಿಗಾ ಇಟ್ಟಿರುವ ತಜ್ಞರು ಹೇಳುತ್ತಾರೆ.

ಏತನ್ಮಧ್ಯೆ ದಕ್ಷಿಣ ಒಳನಾಡಿನಲ್ಲಿ ಮಳೆ ನಿಂತಿದ್ದು, ಸ್ಥಳೀಯವಾಗಿ ಬೆಳೆದ ಟೊಮ್ಯಾಟೊ ಮಾರುಕಟ್ಟೆಗೆ ಬರುತ್ತಿದೆ. ಸದ್ಯಕ್ಕೆ ಬಾಕ್ಸ್ ಟೊಮ್ಯಾಟೊ ಬೆಲೆ 600-800ರ ಆಸುಪಾಸಿನಲ್ಲಿದೆ ಎಂದು ಕೆ.ಆರ್.ಮಾರುಕಟ್ಟೆಯ ಡೀಲರ್ ರಾಜೇಂದ್ರ ಹೇಳುತ್ತಾರೆ. ಮಳೆ ಮುಂದುವರಿಯದಿದ್ದರೆ, ಟೊಮ್ಯಾಟೊ ಬೆಲೆ ಕೆಲವೇ ದಿನಗಳಲ್ಲಿ 20-40 ರೂಪಾಯಿಗೆ ಇಳಿಯಲಿದೆ ಎಂದು ಅವರು ಅಂದಾಜಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X