Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಮಿಕ್ರಾನ್ ಪ್ರಬೇಧ ತೀವ್ರ ಆತಂಕಕಾರಿ:...

ಒಮಿಕ್ರಾನ್ ಪ್ರಬೇಧ ತೀವ್ರ ಆತಂಕಕಾರಿ: ಎಚ್ಚರವಹಿಸಲು ದಕ್ಷಿಣ ಏಶ್ಯಾ ದೇಶಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಕರೆ

ವಾರ್ತಾಭಾರತಿವಾರ್ತಾಭಾರತಿ28 Nov 2021 11:10 AM IST
share
ಒಮಿಕ್ರಾನ್ ಪ್ರಬೇಧ ತೀವ್ರ ಆತಂಕಕಾರಿ: ಎಚ್ಚರವಹಿಸಲು ದಕ್ಷಿಣ ಏಶ್ಯಾ ದೇಶಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಕರೆ

ವಿಶ್ವಸಂಸ್ಥೆ: ಕೊರೋನ ಸೋಂಕಿನ ಮತ್ತೊಂದು ಅಪಾಯಕಾರಿ ಪ್ರಬೇಧ ಒಮಿಕ್ರಾನ್ ಅತ್ಯಂತ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೊರೋನ ಸೋಂಕು ನಿಯಂತ್ರಣದ ಕ್ರಮಗಳನ್ನು ಬಿಗಿಗೊಳಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ದಕ್ಷಿಣ ಏಶ್ಯಾ ದೇಶಗಳನ್ನು ಆಗ್ರಹಿಸಿದೆ.

ಜಾತ್ರೆ, ಹಬ್ಬ, ಸಂಭ್ರಮಾಚರಣೆಗಳನ್ನು ಕೊರೋನ ಸೋಂಕಿನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಡೆಸುವಂತೆ ಹಾಗೂ ಹೆಚ್ಚಿನ ಜನಗಂಗುಳಿ ಸೇರದಂತೆ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದೆ. ‘ಕೊರೋನ ಸೋಂಕಿನ ಪ್ರಕರಣಗಳು ನಮ್ಮ ವಲಯದ ಬಹುತೇಕ ದೇಶಗಳಲ್ಲಿ ಇಳಿಮುಖವಾಗಿದ್ದರೂ, ವಿಶ್ವದ ಬೇರೊಂದು ಕಡೆ ಕೊರೋನ ಸೋಂಕು ಉಲ್ಬಣಗೊಂಡಿರುವ ಅಥವಾ ಹೊಸ ಆತಂಕಕಾರಿ ಪ್ರಬೇಧ ದೃಢಪಟ್ಟಿರುವುದು ಅಪಾಯ ಇನ್ನೂ ಇದೆ ಎಂಬ ಸೂಚನೆಯಾಗಿದೆ.

ಸೋಂಕು ಹರಡದಂತೆ ಮತ್ತು ಸೋಂಕಿನಿಂದ ನಮ್ಮನ್ನು ರಕ್ಷಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿಸೋಣ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಸೋಂಕು ಹರಡದಂತೆ ನಿಗಾ ಹಾಗೂ ಸೋಂಕಿನ ಪ್ರಕರಣಗಳ ಪತ್ತೆ ಪ್ರಕ್ರಿಯೆಗೆ ವೇಗ ನೀಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಶ್ಯಾ ವಲಯದ ಪ್ರಾದೇಶಿಕ ನಿರ್ದೇಶಕಿ ಡಾ. ಪೂನಮ್ ಖೇತ್ರಪಾಲ್ ಸಿಂಗ್ ಎಚ್ಚರಿಸಿದ್ದಾರೆ.

ಹೊಸ ಪ್ರಬೇಧದ ಪ್ರಸರಣ ಸಾಮರ್ಥ್ಯದ ಕುರಿತ ಪರಿಷ್ಕೃತ ಮಾಹಿತಿ ಗಮನಿಸುತ್ತಾ, ಅಂತರಾಷ್ಟ್ರೀಯ ಪ್ರಯಾಣದಿಂದ ಅಪಾಯ ಹೆಚ್ಚುತ್ತದೆಯೇ ಎಂಬುದನ್ನು ಪರಿಶೀಲಿಸಿ ಅದಕ್ಕೆ ತಕ್ಕ ಕ್ರಮ ಕೈಗೊಳ್ಳಬೇಕು. ಸೋಂಕು ಪ್ರಸರಿಸದಂತೆ ಸಮಗ್ರ ಮತ್ತು ಕ್ರಮಬದ್ಧ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಮುಂದುವರಿಸುವ ಅಗತ್ಯವಿದೆ.

ಅತ್ಯಂತ ಪರಿಣಾಮಕಾರಿಯಾದ ನಿರ್ಬಂಧ ಕ್ರಮಗಳ ಅಗತ್ಯವಿದೆ. ಕೊರೋನ ವೈರಸ್ ಹೆಚ್ಚಿನ ಪ್ರಮಾಣದಲ್ಲಿ ಪ್ರಸರಣಗೊಂಡರೆ ವೈರಸ್ ಹೊಸ ಪ್ರಬೇಧದ ರೂಪು ತಳೆಯಲು ಹಾಗೂ ಸೋಂಕು ದೀರ್ಘಾವಧಿಯವರೆಗೆ ಉಳಿದುಕೊಳ್ಳಲು ಅವಕಾಶ ನೀಡಿದಂತಾಗುತ್ತದೆ. ಮೂಗು ಮತ್ತು ಬಾಯಿ ಮುಚ್ಚುವ ರೀತಿಯಲ್ಲಿ ಮುಖದ ಮೇಲೆ ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು, ಜನಸಂದಣಿಯನ್ನು ತಪ್ಪಿಸುವುದು, ಕೈಗಳನ್ನು ಸ್ವಚ್ಛವಾಗಿರಿಸುವುದು, ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಅಡ್ಡಹಿಡಿಯುವುದು, ಲಸಿಕೆ ಪಡೆಯುವುದು- ಈ ಮುನ್ನೆಚ್ಚರಿಕೆ ಕ್ರಮ ಮುಂದುವರಿಯಬೇಕು.

ಇದುವರೆಗೆ, ಈ ವಲಯದ ಜನಸಂಖ್ಯೆಯಲ್ಲಿ 31% ಜನತೆ ಸಂಪೂರ್ಣ ಲಸಿಕೆ, 21% ಆಂಶಿಕ ಲಸಿಕೆ ಹಾಗೂ 48% ಜನತೆ ಲಸಿಕೆಯನ್ನೇ ಪಡೆದಿಲ್ಲ. ಲಸಿಕೆ ಪಡೆಯದವರು ಹೊಸ ಪ್ರಬೇಧದ ಸೋಂಕಿಗೆ ಒಳಗಾಗುವ ಮತ್ತು ಅದನ್ನು ಪ್ರಸರಿಸುವ ಅಪಾಯ ಹೆಚ್ಚಿದೆ . ಲಸಿಕೆ ಪಡೆದವರೂ ಮುನ್ನೆಚ್ಚರಿಕೆ ವಹಿಸಬೇಕು, ಇಲ್ಲದಿದ್ದರೆ ಹೊಸ ಆತಂಕಕಾರಿ ಸೋಂಕು ತಗುಲುವ ಅಪಾಯವಿದೆ ಎಂದವರು ಹೇಳಿದ್ದಾರೆ.

ಕೊರೋನ ಸೋಂಕು ಇನ್ನೂ ತೊಲಗಿಲ್ಲ ಎಂಬುದನ್ನು ಮರೆಯಬಾರದು. ಸೋಂಕಿನ ನಿಯಂತ್ರಣಕ್ಕೆ ಎಲ್ಲಾ ಕ್ಷೇತ್ರಗಳಲ್ಲೂ ಪ್ರಯತ್ನಗಳನ್ನು ಹೆಚ್ಚಿಸಬೇಕಾಗಿದೆ ಎಂದು ಡಾ. ಪೂನಮ್ ಹೇಳಿದ್ದಾರೆ.

ಆತಂಕಕಾರಿ ಸೋಂಕು : ನೂತನವಾಗಿ ಪತ್ತೆಯಾಗಿರುವ ಕೊರೋನ ಸೋಂಕಿನ ಪ್ರಬೇಧವನ್ನು ಆತಂಕಕಾರಿ ಸೋಂಕಿನ ವರ್ಗಕ್ಕೆ ಸೇರಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಸಲಹಾ ಸಮಿತಿ, ಇದಕ್ಕೆ ಒಮಿಕ್ರಾನ್ ಎಂದು ಹೆಸರಿಸಿದೆ. ಈ ಪ್ರಬೇಧದ ಪ್ರಸರಣ ಸಾಮರ್ಥ್ಯ ಮತ್ತು ಪರಿಣಾಮದ ಬಗ್ಗೆ, ಇದು ರೋಗನಿರ್ಣಯ, ಚಿಕಿತ್ಸೆ ಮತ್ತು ಲಸಿಕೆಯ ಮೇಲೆ ಬೀರಬಹುದಾದ ಪರಿಣಾಮದ ಬಗ್ಗೆ ಸಂಶೋಧಕರು ಅಧ್ಯಯನ ಮುಂದುವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X