Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಾಗತಿಕ ಪ್ರಜಾತಾಂತ್ರಿಕ ರಾಷ್ಟ್ರಗಳ...

ಜಾಗತಿಕ ಪ್ರಜಾತಾಂತ್ರಿಕ ರಾಷ್ಟ್ರಗಳ ಸಮಾವೇಶ: ಅಮೆರಿಕದ ನಡೆಗೆ ರಶ್ಯ-ಚೀನಾ ಸಿಡಿಮಿಡಿ

ವಾರ್ತಾಭಾರತಿವಾರ್ತಾಭಾರತಿ28 Nov 2021 11:28 PM IST
share

ವಾಶಿಂಗ್ಟನ್, ನ.28: ಪ್ರಜಾಪ್ರಭುತ್ವವಾದಿ ರಾಷ್ಟ್ರಗಳ ವರ್ಚುವಲ್ ಸಮಾವೇಶವನ್ನು ಆಯೋಜಿಸುವ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರ ನಡೆಯನ್ನು ಚೀನಾ ಹಾಗೂ ರಶ್ಯವು ಕಟುವಾಗಿ ಟೀಕಿಸಿವೆ. ಈ ಸಮಾವೇಶದಲ್ಲಿ ತಮ್ಮನ್ನು ಹೊರಗಿಟ್ಟಿರುವುದು ರಶ್ಯ ಹಾಗೂ ಚೀನಾದ ಕೆಂಗಣ್ಣಿಗೆ ಕಾರಣವಾಗಿದೆ.

ಅಮೆರಿಕದಲ್ಲಿನ ಚೀನಾ ಹಾಗೂ ರಶ್ಯದ ರಾಯಭಾರಿಗಳು ಶನಿವಾರ ತೀರಾ ಅಪರೂಪವೆಂಬಂತೆ ಜಂಟಿಯಾಗಿ ಪ್ರಕಟಿಸಿದ ಲೇಖನವೊಂದರಲ್ಲಿ ‘‘ಪ್ರಜಾತಾಂತ್ರಿಕ ರಾಷ್ಟ್ರಗಳ ಸಮಾವೇಶವನ್ನು ನಡೆಸುವ ಅಮೆರಿಕದ ಯೋಜನೆಯು ಅದರ ಶೀತಲ ಸಮರದ ಮನಸ್ಥಿತಿಯ ಉತ್ಪನ್ನವೆಂಬುದು ಸ್ಪಷ್ಟವಾಗುತ್ತದೆ’’ ಎಂದು ರಶ್ಯದ ರಾಯಭಾರಿ ಆನಾತೊಲಿ ಆ್ಯಂಟೊನೊವ್ ಹಾಗೂ ಚೀನಾದ ರಾಯಭಾರಿ ಕ್ವಿನ್ ಗಾಂಗ್ ತಿಳಿಸಿದ್ದಾರೆ. ಡಿಸೆಂಬರ್ 9 ಹಾಗೂ 10ರಂದು ನಡೆಯಲಿರುವ ಈ ಸಭೆಯು ‘‘ ಸೈದ್ಧಾಂತಿಕ ಸಂಘರ್ಷಗಳನ್ನು ಬಡಿದೆಬ್ಬಿಸಲಿದೆ ಹಾಗೂ ವಿಭಜನೆಯ ಹೊಸ ರೇಖೆಗಳನ್ನು ಸೃಷ್ಟಿಸುವ ಮೂಲಕ ಜಗತ್ತಿನಲ್ಲಿ ಒಡಕನ್ನು ಮೂಡಿಸಲಿದೆ’’ ಎಂದು ನ್ಯಾಶನಲ್ ಜರ್ನಲ್ ಪತ್ರಿಕೆಯ ವೆಬ್‌ಸೈಟ್ ಆವೃತ್ತಿಗೆ ಬರೆದ ಲೇಖನದಲ್ಲಿ ಟೀಕಿಸಿದ್ದಾರೆ.

ಜಗತ್ತಿನ ವಿವಿಧೆಡೆ ಸರ್ವಾಧಿಕಾರಿ ಸರಕಾರಗಳು ತಲೆಯೆತ್ತುತ್ತಿರುವ ಈ ಕಾಲಘಟ್ಟದಲ್ಲಿ ಜಾಗತಿಕ ಪ್ರಜಾಸತ್ತೆಯ ಧ್ಯೇಯವನ್ನು ಮುನ್ನಡೆಸುವ ಕುರಿತಾದ ತನ್ನ ಚುನಾವಣಾ ಭರವಸೆಯನ್ನು ಈಡೇರಿಸುವ ಯತ್ನದ ಭಾಗವಾಗಿ ಬೈಡೆನ್ ಈ ಸಮಾವೇಶವನ್ನು ಆಯೋಜಿಸಿದ್ದಾರೆ.

ಭಾರತ, ಪಾಕಿಸ್ತಾನ ಸೇರಿದಂತೆ ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಲಾಗಿರುವ 110 ರಾಷ್ಟ್ರಗಳ ಪಟ್ಟಿಯನ್ನು ಅಮೆರಿಕ ಮಂಗಳವಾರ ಪ್ರಕಟಿಸಿತ್ತು. ತೈವಾನ್‌ಗೂ ಆಹ್ವಾನ ನೀಡಿರುವುದು ಚೀನಾದ ಇರಿಸುಮುರಿಸಿಗೆ ಕಾರಣವಾಗಿದೆ. ತೈವಾನ್ ತನ್ನ ಭೂಪ್ರದೇಶವೆಂದು ಚೀನಾವು ಪ್ರತಿಪಾದಿಸುತ್ತಲೇ ಬಂದಿದೆ.

‘‘ಜಗತ್ತಿನ ವಿಶಾಲ ಹಾಗೂ ವೈವಿಧ್ಯಮಯ ರಾಜಕೀಯ ‘ಭೂದೃಶ್ಯ’ವನ್ನು ಒಂದೇ ಮಾನದಂಡದಿಂದ ಅಳೆಯುವ ಹಕ್ಕು ಯಾವುದೇ ದೇಶಕ್ಕೂ ಇಲ್ಲ’’ ಎಂದು ಉಭಯದೇಶಗಳ ರಾಯಭಾರಿಗಳು ಹೇಳಿದ್ದಾರೆ. ಚೀನಾದಲ್ಲಿ ಪ್ರಜಾತಂತ್ರದ ಸಮಗ್ರ ಪ್ರಕ್ರಿಯೆಯು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಸಾಬೀತಾಗಿದೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X