Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು; ಅಪ್ರಾಪ್ತ ವಿದ್ಯಾರ್ಥಿನಿಯ...

ಮಂಗಳೂರು; ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣ-ಅತ್ಯಾಚಾರ ಪ್ರಕರಣ: ಆರೋಪಿಗೆ 7 ವರ್ಷಗಳ ಕಠಿಣ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ29 Nov 2021 6:44 PM IST
share
ಮಂಗಳೂರು; ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣ-ಅತ್ಯಾಚಾರ ಪ್ರಕರಣ: ಆರೋಪಿಗೆ 7 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು, ನ.29: ಸುಮಾರು 7 ವರ್ಷಗಳ ಹಿಂದೆ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ- 1 ನ್ಯಾಯಾಲಯದ ನ್ಯಾಯಾಧೀಶರು 7 ವರ್ಷಗಳ ಕಠಿಣ ಸಜೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.

ಮಂಗಳೂರು ತಾಲೂಕಿನ ಕೋಟೆಕಾರು ಗ್ರಾಮದ ದೇರಳಕಟ್ಟೆ ಸಮೀಪದ ಇರ್ಫಾನ್ (28) ಶಿಕ್ಷಿಗೊಳಗಾದ ಯುವಕ. 2014ರಲ್ಲಿ ಈತ ವಿದ್ಯಾರ್ಥಿನಿಯನ್ನು ಅಪಹರಿಸಿ ಲಾಡ್ಜ್‌ನಲ್ಲಿ ಅಕ್ರಮವಾಗಿ ಕೂಡಿ ಹಾಕಿ ಅತ್ಯಾಚಾರವೆಸಗಿದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇರ್ಫಾನ್ ಸಂತ್ರಸ್ತೆಯ ಪರಿಚಯ ಮಾಡಿಕೊಂಡು ಪ್ರೀತಿ-ಪ್ರೇಮದ ಹೆಸರಿನಲ್ಲಿ ಫೋನ್‌ನಲ್ಲಿ ಮಾತನಾಡುತ್ತಿದ್ದ. ಅಲ್ಲದೆ ಮದುವೆಯಾಗಬೇಕು ಎಂದು ಒತ್ತಾಯಿಸುತ್ತಿದ್ದ ಎನ್ನಲಾಗಿದೆ. 2014ರ ಆಗಸ್ಟ್‌ನಲ್ಲಿ ಪರೀಕ್ಷೆ ಬರೆಯಲೆಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ದೇರಳಕಟ್ಟೆ ಸಮೀಪದ ನಾಟೆಕಲ್‌ನಲ್ಲಿ ತಡೆದು ನಿಲ್ಲಿಸಿ ಕಾರಿನಲ್ಲಿ ಅಪಹರಿಸಿ ಚಿಕ್ಕಮಗಳೂರಿನ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ವಿದ್ಯಾರ್ಥಿನಿ ನಾಪತ್ತೆಯಾಗಿದ್ದ ಬಗ್ಗೆ ಆಕೆಯ ಹೆತ್ತವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆಗಿನ ಉಳ್ಳಾಲ ಇನ್‌ಸ್ಪೆಕ್ಟರ್ ಸವಿತ್ರ ತೇಜ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ವಿಚಾರಣೆ ನಡೆಸಿ ಪೂರಕ ಸಾಕ್ಷಿಗಳನ್ನು ಪರಿಗಣಿಸಿ ಆರೋಪಿಯ ಅಪರಾಧ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ.

ಅಪಹರಣ ಕೃತ್ಯಕ್ಕೆ ಐಪಿಸಿ ಕಲಂ 366(ಎ)ನಡಿ 3 ವರ್ಷ ಕಠಿಣ ಸಜೆ ಮತ್ತು 5,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 15 ದಿನ ಹೆಚ್ಚುವರಿ ಕಠಿಣ ಸಜೆ, ತಡೆದು ನಿಲ್ಲಿಸಿದ ಕೃತ್ಯಕ್ಕೆ ಐಪಿಸಿ 342 ಕಲಂನಡಿ 5 ತಿಂಗಳು ಕಠಿಣ ಸಜೆ ಮತ್ತು 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಮತ್ತೆ 15 ದಿನ ಕಠಿಣ ಸಜೆ, ಕೊಲೆ ಬೆದರಿಕೆಯೊಡ್ಡಿರುವುದಕ್ಕೆ ಐಪಿಸಿ 506ರಡಿ 1 ವರ್ಷ ಕಠಿಣ ಸಜೆ ಮತ್ತು 2,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 2 ತಿಂಗಳು ಕಠಿಣ ಸಜೆ, ಅಪ್ರಾಪ್ತೆಯ ಮೇಲಿನ ಅತ್ಯಾಚಾರಕ್ಕೆ ಪೊಕ್ಸೊ ಕಾಯ್ದೆ ಕಲಂ 4ರ ಅಡಿ ಹಾಗೂ ಐಪಿಸಿ ಕಲಂ 376ರಡಿ 7 ವರ್ಷ ಕಠಿಣ ಸಜೆ ಮತ್ತು 15,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 2 ತಿಂಗಳ ಕಠಿಣ ಸಜೆ ವಿಧಿಸಿದ್ದಾರೆ.

ಸಂತ್ರಸ್ತೆ ಮತ್ತು ಆಕೆಯ ಮನೆಯವರು ನ್ಯಾಯಾಲಯದಲ್ಲಿ ಪ್ರತಿಕೂಲ ಸಾಕ್ಷಿ ನುಡಿದಿದ್ದರು. ಆದರೆ ನ್ಯಾಯಾಲಯವು ತನಿಖಾಧಿಕಾರಿಗಳು, ಸಾಂದರ್ಭಿಕ ಸಾಕ್ಷಿದಾರರು ಮತ್ತು ವೈದ್ಯಾಧಿಕಾರಿಗಳ ಸಾಕ್ಷವನ್ನು ಪರಿಗಣಿಸಿದ ಹಿನ್ನೆಲೆಯಲ್ಲಿ ಅಪರಾಧ ಸಾಬೀತಾಗಿದೆ. 15 ಮಂದಿ ಸಾಕ್ಷಿದಾರರ ಸಾಕ್ಷ್ಯ ಮತ್ತು 22 ದಾಖಲೆಗಳ ಸಾಕ್ಷ್ಯವನ್ನು ದಾಖಲು ಮಾಡಲಾಗಿತ್ತು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X