Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ...

ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ ವಿದ್ಯಾರ್ಥಿನಿಗೆ 15,000 ರೂ. ಸಹಾಯವಾಗಿ ನೀಡಿದ ನ್ಯಾಯಾಧೀಶ

ವಾರ್ತಾಭಾರತಿವಾರ್ತಾಭಾರತಿ30 Nov 2021 11:41 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ ವಿದ್ಯಾರ್ಥಿನಿಗೆ 15,000 ರೂ. ಸಹಾಯವಾಗಿ ನೀಡಿದ ನ್ಯಾಯಾಧೀಶ

ಲಕ್ನೊ: ಅಲಹಾಬಾದ್‌ ಹೈಕೋರ್ಟ್‌ನ ಲಕ್ನೋ ಪೀಠದ ನ್ಯಾಯಾಧೀಶರು ಸೋಮವಾರ ಐಐಟಿ, ಬಿಎಚ್‌ಯುನಲ್ಲಿ ಸೀಟು ಹಂಚಿಕೆಗಾಗಿ ಶುಲ್ಕವನ್ನು ಠೇವಣಿ ಇಡಲು ಸಾಧ್ಯವಾಗದ ಬಡ ದಲಿತ ವಿದ್ಯಾರ್ಥಿನಿಯೊಬ್ಬರಿಗೆ 15,000 ರೂ. ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ವಿದ್ಯಾರ್ಥಿನಿಯನ್ನು ಗಣಿತ ಮತ್ತು ಕಂಪ್ಯೂಟಿಂಗ್‌ನಲ್ಲಿ (ಐದು ವರ್ಷ, ಪದವಿ ಮತ್ತು ಮಾಸ್ಟರ್ ಆಫ್ ಟೆಕ್ನಾಲಜಿ, ಡ್ಯುಯಲ್ ಡಿಗ್ರಿ ಕೋರ್ಸ್) ಸೇರಿಸಲು ನ್ಯಾಯಮೂರ್ತಿ ದಿನೇಶ್ ಕುಮಾರ್ ಸಿಂಗ್ ಅವರ ಪೀಠವು ಜಂಟಿ ಸೀಟು ಹಂಚಿಕೆ ಪ್ರಾಧಿಕಾರ ಹಾಗೂ  ಐಐಟಿ, ಬಿಎಚ್‌ಯು ನಿರ್ದೇಶಿಸಿದೆ.

ಯಾವುದೇ ಸೀಟು ಖಾಲಿ ಇಲ್ಲದಿದ್ದರೆ ದಲಿತ ವಿದ್ಯಾರ್ಥಿನಿಗೆ ಸೂಪರ್‌ನ್ಯೂಮರರಿ ಸೀಟು ರಚಿಸುವಂತೆ ಪೀಠವು ಬಿಎಚ್‌ಯುಗೆ ನಿರ್ದೇಶನ ನೀಡಿದೆ. ಪ್ರವೇಶಕ್ಕಾಗಿ ಅಗತ್ಯ ದಾಖಲೆಗಳೊಂದಿಗೆ ಮೂರು ದಿನಗಳಲ್ಲಿ ಬಿಎಚ್ ಯುಗೆ ತೆರಳಲು ಪೀಠವು ವಿದ್ಯಾರ್ಥಿನಿಗೆ ತಿಳಿಸಿದೆ.

ವಿದ್ಯಾರ್ಥಿನಿ ಸಂಸ್ಕೃತಿ ರಂಜನ್ ಅವರು ವೈಯಕ್ತಿಕವಾಗಿ ಸಲ್ಲಿಸಿದ ಅರ್ಜಿಯ ಮೇರೆಗೆ ಪೀಠವು ಮೇಲಿನ ಆದೇಶವನ್ನು ನೀಡಿದೆ. 15,000 ರೂ. ಶುಲ್ಕವನ್ನು ಠೇವಣಿ ಮಾಡಲು ಸಮಯವನ್ನು ನೀಡುವಂತೆ ಜಂಟಿ ಸೀಟು ಹಂಚಿಕೆ ಪ್ರಾಧಿಕಾರ ಮತ್ತು ಐಐಟಿ (ಬಿಎಚ್‌ಯು) ಗೆ ನಿರ್ದೇಶನ ನೀಡಬಹುದೇ ಎಂದು ಅವರು ಪೀಠವನ್ನು ಕೋರಿದ್ದರು.  ತಾನು ಪರಿಶಿಷ್ಟ ಜಾತಿಗೆ ಸೇರಿದವಳು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ವಿದ್ಯಾರ್ಥಿನಿ ಪ್ರೌಢಶಾಲೆಯಲ್ಲಿ 95.6 ಶೇ. ಹಾಗೂ ಇಂಟರ್ ಮೀಡಿಯಟ್ ನಲ್ಲಿ  94 ಶೇ. ಅಂಕಗಳನ್ನು ಪಡೆದಿದ್ದರು. ಈಕೆ ಐಐಟಿಗಳಲ್ಲಿ ಆಯ್ಕೆಗಾಗಿ ಜೆಇಇ ಪರೀಕ್ಷೆಯಲ್ಲಿ ಹಾಜರಾಗಿದ್ದರು. ಪರೀಕ್ಷೆಯಲ್ಲಿ ತೇರ್ಗಡೆಯಾಗುವಲ್ಲಿ ಯಶಸ್ವಿಯಾಗಿದ್ದರು. ಅವರು ಜೆಇಇ ಮುಖ್ಯ ಪರೀಕ್ಷೆಯಲ್ಲಿ 92.77 ಶೇ. ಅಂಕಗಳನ್ನು ಗಳಿಸಿದರು ಹಾಗೂ ಎಸ್‌ಸಿ ವರ್ಗದ ಅಭ್ಯರ್ಥಿಯಾಗಿ 2062 ಶ್ರೇಣಿಯನ್ನು ಪಡೆದರು. ಅದರ ನಂತರ, ಅರ್ಜಿದಾರರು ಜೆಇಇ ಅಡ್ವಾನ್ಸ್ ಗೆ ಸೆಪ್ಟೆಂಬರ್ 16, 2021 ರಂದು ಅರ್ಜಿ ಸಲ್ಲಿಸಿದ್ದರು ಮತ್ತು ಅದನ್ನು ಅಕ್ಟೋಬರ್ 15, 2021 ರಂದು ಪರಿಶಿಷ್ಟ ಜಾತಿ ವರ್ಗದಲ್ಲಿ 1,469 ರ್ಯಾಂಕ್ ನೊಂದಿಗೆ  ತೇರ್ಗಡೆಯಾಗಿದ್ದರು.

“ಅರ್ಜಿದಾರರಿಗೆ ಕೌನ್ಸೆಲಿಂಗ್‌ನಲ್ಲಿ ಗಣಿತ ಮತ್ತು ಕಂಪ್ಯೂಟಿಂಗ್ (ಐದು ವರ್ಷ, ಪದವಿ ಮತ್ತು ಮಾಸ್ಟರ್ ಆಫ್ ಟೆಕ್ನಾಲಜಿ ಡ್ಯುಯಲ್ ಪದವಿ) ಐಐಟಿ (ಬಿಎಚ್‌ಯು) ವಾರಣಾಸಿಯಲ್ಲಿ ಸೀಟು ನೀಡಲಾಗಿದೆ. ಆದಾಗ್ಯೂ, ನಿಗದಿತ ದಿನಾಂಕಕ್ಕಿಂತ ಮೊದಲು ಶುಲ್ಕ ಪಾವತಿಸಲು 15,000 ರೂ.ಗಳನ್ನು ವ್ಯವಸ್ಥೆ ಮಾಡಲು ಆಕೆಗೆ ಸಾಧ್ಯವಾಗಲಿಲ್ಲ”ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ವಿಷಯದ ವಿಚಿತ್ರ ಸನ್ನಿವೇಶಗಳನ್ನು ಪರಿಗಣಿಸಿ ನ್ಯಾಯಾಧೀಶರು ನ್ಯಾಯಾಲಯದ ಸಮಯದ ನಂತರ ವಿದ್ಯಾರ್ಥಿನಿಗೆ  ಸ್ವಯಂ ಪ್ರೇರಿತರಾಗಿ 15,000 ರೂ.ಗಳನ್ನು ಹಸ್ತಾಂತರಿಸಿದರು ಹಾಗೂ ಮುಂದಿನ ಮೂರು ದಿನಗಳಲ್ಲಿ ಆಕೆಗೆ ಐಐಟಿ (ಬಿಎಚ್ ಯು) ನಲ್ಲಿ ಪ್ರವೇಶವನ್ನು ನೀಡಲಾಗುವುದು ಎಂದು ತಮ್ಮ ಆದೇಶದಲ್ಲಿ ಖಚಿತಪಡಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X