ಉಡುಪಿ; ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ಆರೋಪ : ಸಿಪಿಎಂ ಮುಖಂಡರ ವಿರುದ್ಧ ಪ್ರಕರಣ ದಾಖಲು
![ಉಡುಪಿ; ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ಆರೋಪ : ಸಿಪಿಎಂ ಮುಖಂಡರ ವಿರುದ್ಧ ಪ್ರಕರಣ ದಾಖಲು ಉಡುಪಿ; ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ಆರೋಪ : ಸಿಪಿಎಂ ಮುಖಂಡರ ವಿರುದ್ಧ ಪ್ರಕರಣ ದಾಖಲು](https://www.varthabharati.in/sites/default/files/images/articles/2021/11/30/315853-1638289980.jpg)
ಫೈಲ್ ಫೋಟೊ
ಉಡುಪಿ, ನ.30: ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಆರೋಪದಲ್ಲಿ ಸಿಪಿಎಂ ಮುಖಂಡರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.28ರಂದು ಸಿಪಿಐ(ಎಂ) ಪಕ್ಷದ 7ನೇ ಜಿಲ್ಲಾ ಸಮ್ಮೇಳನ ಪ್ರಯುಕ್ತ ಯಾವುದೇ ಪೂರ್ವಾನುಮತಿ ಇಲ್ಲದೆ ಸಿಪಿಎಂ ಮುಖಂಡರು ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿ ಉಡುಪಿ ಬೋರ್ಡ್ ಹೈಸ್ಕೂಲಿನಿಂದ ಬ್ರಹ್ಮಗಿರಿ ವೃತ್ತದ ತನಕ ಮೆರವಣಿಗೆ ನಡೆಸಿದ್ದು, ಇದರಲ್ಲಿ ಕೆಲವರು ಮಾಸ್ಕ್ ಮತ್ತು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳದೆ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಇರುವ ಆದೇಶವನ್ನು ಉಲ್ಲಂಘನೆ ಮಾಡಿರುವುದಾಗಿ ಪೌರಾಯುಕ್ತ ಡಾ.ಉದಯ ಕುಮಾರ್ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ.
Next Story