Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆಬಿಸಿಯ 'ಮಿಡ್ ಬ್ರೈನ್ ಆ್ಯಕ್ಟಿವೇಶನ್‌'...

ಕೆಬಿಸಿಯ 'ಮಿಡ್ ಬ್ರೈನ್ ಆ್ಯಕ್ಟಿವೇಶನ್‌' ಕಾರ್ಯಕ್ರಮದ ಕೆಲವು ಅಂಶಗಳನ್ನು ಕೈ ಬಿಟ್ಟ ಸೋನಿ ಟಿವಿ

ವಿಚಾರವಾದಿಗಳ ಸಂಘದ ರಾಷ್ಟ್ರೀಯ ಅಧ್ಯಕ್ಷ ನರೇಂದ್ರ ನಾಯಕ್ ಪತ್ರದ ಹಿನ್ನಲೆ

ವಾರ್ತಾಭಾರತಿವಾರ್ತಾಭಾರತಿ30 Nov 2021 10:14 PM IST
share
ಕೆಬಿಸಿಯ ಮಿಡ್ ಬ್ರೈನ್ ಆ್ಯಕ್ಟಿವೇಶನ್‌ ಕಾರ್ಯಕ್ರಮದ ಕೆಲವು ಅಂಶಗಳನ್ನು ಕೈ ಬಿಟ್ಟ ಸೋನಿ ಟಿವಿ

ಹೊಸದಿಲ್ಲಿ, ನ. 30: 'ಮಿಡ್ ಬ್ರೈನ್ ಆ್ಯಕ್ಟಿವೇಶನ್‌' ಅವೈಜ್ಞಾನಿಕ ಅಭ್ಯಾಸವನ್ನು ಪ್ರದರ್ಶಿಸಿದ ಅಮಿತಾಭ್ ಬಚ್ಚನ್ ನಡೆಸಿ ಕೊಡುವ 'ಕೌನ್ ಬನೇಗಾ ಕರೋಡ್ಪತಿ-13'ರ ಇತ್ತೀಚೆಗಿನ ಕಾರ್ಯಕ್ರಮದ ಕೆಲವು ಅಂಶಗಳನ್ನು ಸೋನಿ ಟಿವಿ ಕೈಬಿಟ್ಟಿದೆ ಎಂದು ‘thenewsminute.com’ ವರದಿ ಮಾಡಿದೆ.

ವಿಚಾರವಾದಿ ನರೇಂದ್ರ ನಾಯಕ್ ಅವರು ಸೋನಿ ಎಂಟರ್ಟೈನ್ಮೆಂಟ್ ಟೆಲಿವಿಷನ್ ಇಂಡಿಯಾಕ್ಕೆ ದೂರು ನೀಡಿದ ಬಳಿಕ ಯುಟ್ಯೂಬ್ ಹಾಗೂ ಇತರ ವೇದಿಕೆಗಳಿಂದ ಕೂಡ ಈ ಕಾರ್ಯಕ್ರಮದ ವೀಡಿಯೊದ ಭಾಗವನ್ನು ತೆಗೆದು ಹಾಕಲಾಗಿದೆ. ಕಣ್ಣು ಮುಚ್ಚಿ, ವಾಸನೆ ಮೂಲಕ ಪುಸ್ತಕ ಓದಬಲ್ಲೆ ಎಂಬುದನ್ನು ಹದಿಹರೆಯದ ಬಾಲಕಿಯೋರ್ವಳು ಪ್ರದರ್ಶಿಸಿದ್ದಾಳೆ ಎಂದು ವರದಿಯಾದ ವೀಡಿಯೋದ ಭಾಗವನ್ನು ಸೋನಿ ಎಂಟರ್ಟೈನ್ಮೆಂಟ್ ಟೆಲಿವಿಷನ್ ಇಂಡಿಯಾ ತೆಗೆದು ಹಾಕಿದೆ.

ಫೆಡರೇಶನ್ ಆಫ್ ಇಂಡಿಯನ್ ರ್ಯಾಶನಲಿಸ್ಟ್ ಅಸೋಸಿಯೇಸನ್ ನ ಅಧ್ಯಕ್ಷ ನರೇಂದ್ರ ನಾಯಕ್, ‘‘ಮಧ್ಯ ಮೆದುಳನ್ನು ಕ್ರಿಯಾಶೀಲಗೊಳಿಸುವ ಮೂಲಕ ಮಕ್ಕಳ ಮೆದುಳಿನ ಶಕ್ತಿಯನ್ನು ಹೆಚ್ಚಿಸುತ್ತೇವೆ ಎಂದು ಪ್ರತಿಪಾದಿಸಿ ಹಲವು ಸಂಸ್ಥೆಗಳು ಈ ಹಿಂದೆ ಹೆತ್ತವರನ್ನು ಮೂರ್ಖರನ್ನಾಗಿಸಿದೆ’’ ಎಂದಿದ್ದಾರೆ. ‘‘ಇಂತಹ ಪ್ರತಿಪಾದನೆಗಳಿಗೆ ಪ್ರಚಾರ ನೀಡುವ ಮೂಲಕ ನೀವು ನಮ್ಮ ದೇಶದ ಗೌರವಕ್ಕೆ ಧಕ್ಕೆ ತರುತ್ತಿದ್ದೀರಿ. ವಸ್ತುವಿನಿಂದ ಬೆಳಕು ತಮ್ಮ ಅಕ್ಷಿಪಟಲದ ಮೇಲೆ ಬೀಳದ ಹೊರತಾಗಿಯೂ ಮಕ್ಕಳು ಕಾಣಬಹುದು ಎಂದು ಹೇಳುತ್ತಿರುವುದನ್ನು ಕೇಳಿ ಜಗತ್ತು ನಗಬಹುದು’’ ಎಂದು ನರೇಂದ್ರ ನಾಯಕ್ ಅವರು ಪತ್ರದಲ್ಲಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸೋನಿ, ‘‘ಮುಂದಿನ ಸಂಚಿಕೆಗಳಲ್ಲಿ ಇಂತಹ ಪ್ರಮಾದವನ್ನು ತಪ್ಪಿಸಲು ಹಾಗೂ ಹೆಚ್ಚು ಎಚ್ಚರಿಕೆಯಿಂದ ಇರಲು ತಂಡವನ್ನು ಸಂವೇದನಾಶೀಲಗೊಳಿಸಿದ್ದೇವೆ’’ ಎಂದಿದೆ.

ಈ ಬಗ್ಗೆ 'ವಾರ್ತಾಭಾರತಿ'ಗೆ ಪ್ರತಿಕ್ರಿಯೆ ನೀಡಿರುವ ಪ್ರೊ. ನರೇಂದ್ರ ನಾಯಕ್, "ಕೆಲವು ದಿನಗಳ ಹಿಂದೆ ನಾನು ಸಂಬಂಧಪಟ್ಟ ಸಂಸ್ಥೆಗೆ ಪತ್ರ ಬರೆದಿದ್ದೆ. ಅಲ್ಲದೆ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಂಡು ಅಮಿತಾ ಬಚ್ಚನ್‌ರ ಗಮನವನ್ನೂ ಸೆಳೆದಿದ್ದೆ. ನಾನು ಬರೆದ ಪತ್ರಕ್ಕೆ ಸೋನಿ ಟಿವಿ ಸ್ಪಂದಿಸಿದೆ. ಹಲವು ವರ್ಷಗಳಿಂದ ಮೌಢ್ಯ ಬಿತ್ತುವುದರ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದೇನೆ. ಮುಂದೆಯೂ ಹೋರಾಟ ಮುಂದುವರಿಯಲಿದೆ" ಎಂದು ತಿಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X