Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ:...

ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ: ವಾಸ್ತವಕ್ಕೆ ಮುಖಾಮುಖಿ

ವಾರ್ತಾಭಾರತಿವಾರ್ತಾಭಾರತಿ1 Dec 2021 11:11 AM IST
share
ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ: ವಾಸ್ತವಕ್ಕೆ ಮುಖಾಮುಖಿ

ಡಾ. ಮುಜಾಫರ್ ಅಸಾದಿ ಅವರ ‘ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ’ ಕೃತಿ ಭಾರತೀಯ ಮುಸ್ಲಿಮರ ಕುರಿತಂತೆ ಕೆಲವರಲ್ಲಿರುವ ಜಡ್ಜ್‌ಮೆಂಟಲ್ ಮನಸ್ಥಿತಿಯನ್ನು ಮುಖಕ್ಕೆ ಒಡೆದಂತೆ ಪ್ರಶ್ನಿಸುತ್ತದೆ. ಮುಸ್ಲಿಮರ ಕುರಿತಂತೆ ಮುಸ್ಲಿಮರಿಗೆ ಅರಿವಿಲ್ಲದ ಹಲವು ವಾಸ್ತವಗಳನ್ನು ಈ ಕೃತಿ ತೆರೆದಿಡುತ್ತದೆ. ‘ಅಲ್ಪಸಂಖ್ಯಾತರ ತುಷ್ಟೀಕರಣ’ ಎನ್ನುವ ಹುಸಿಯ ನಡುವೆ ಮುಸ್ಲಿಮ್ ಸಮುದಾಯ ಹೇಗೆ ಇನ್ನೂ ತನಗೇ ತಿಳಿಯದಂತೆ ಜಾತಿ ವ್ಯವಸ್ಥೆಯ ಒಳಸುಳಿಗೆ ಸಿಲುಕಿ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ ಎನ್ನುವ ಅಂಶವನ್ನು ಕೃತಿ ಬಹಿರಂಗಪಡಿಸುತ್ತದೆ.

‘‘ಈ ಕೃತಿಯು ಅಲ್ಪಸಂಖ್ಯಾತರ ಒಳ ಪ್ರಭೇದಗಳ ಕುರಿತಾದ ಚರ್ಚೆಯನ್ನು ತನ್ನ ಕೇಂದ್ರದಲ್ಲಿ ಇರಿಸಿಕೊಂಡರೂ ಅಲ್ಲಿಯೇ ನಿಲ್ಲದೆ, ಅದಕ್ಕೆ ಅಂಟಿಕೊಂಡ ಇತರ ಅನೇಕ ವಿಷಯಗಳನ್ನು ಮೊದಲ ಬಾರಿಗೆ ಓದುಗರ ಮುಂದಿಡುತ್ತಿದೆ. ಅದು ನಮ್ಮ ನಡುವೆ ಬಹುಕಾಲದಿಂದ ಪ್ರಚಲಿತದಲ್ಲಿರುವ ಅನೇಕ ಮಿಥ್ಯೆಗಳನ್ನು ಒಡೆಯುತ್ತದೆ. ವಸಾಹತು ಕಾಲಘಟ್ಟದಲ್ಲಿ ಪ್ರಭುತ್ವವು ಕಟ್ಟಿಕೊಟ್ಟ ಚರಿತ್ರೆ ಮತ್ತು ವಾಸ್ತವಗಳನ್ನು ಪ್ರಸ್ತುತ ಪುಸ್ತಕವು ದಿಟ್ಟವಾಗಿ ಆಧಾರ ಸಮೇತ ಪರೀಕ್ಷಿಸುತ್ತದೆ. ಧರ್ಮ, ಜಾತಿ, ಜನಗಣತಿ, ಮೀಸಲಾತಿ, ರಾಜಕಾರಣ, ಸಂಶೋಧನೆ ಮತ್ತು ಕೆಲವು ದಾಖಲೆಗಳು ಹೇಗೆ ನಮ್ಮ ವರ್ತಮಾನವನ್ನು ಹಾಳುಗೆಡವಿದೆ ಎಂಬುದನ್ನು ಅರ್ಥಮಾಡಿಕೊಳ್ಳುವವರು ಅಸಾದಿಯವರ ಈ ಪುಸ್ತಕವನ್ನು ಧ್ಯಾನಿಸಿ ಓದಬೇಕು. ಇದರಲ್ಲಿ ಅನೇಕ ವಿಷಯಗಳನ್ನು ಆಧರಿಸಿಕೊಂಡು ನಮ್ಮ ಸಂಶೋಧನೆಗಳನ್ನು ಇನ್ನಷ್ಟು ವಿಸ್ತರಿಸಿಕೊಳ್ಳಲು ಸಾಧ್ಯವಿದೆ’ ಇದು ಕೃತಿಯ ಕುರಿತಂತೆ ಹಿರಿಯ ಚಿಂತಕ ಪುರುಷೋತ್ತಮ ಬಿಳಿಮಲೆಯವರ ಅನಿಸಿಕೆ.

ಈ ಕೃತಿಯು ಭಾರತದಲ್ಲಿರುವ ಸುಮಾರು 20 ಕೋಟಿ ಮುಸಲ್ಮಾನರನ್ನು ಅರ್ಥ ಮಾಡಿಕೊಳ್ಳಲು ಅಗತ್ಯವಾಗಿರುವ ಒಂದು ಚೌಕಟ್ಟನ್ನು ಒದಗಿಸಿಕೊಡುತ್ತದೆ. ಮುಖ್ಯವಾಗಿ ರಾಜಕೀಯವಾಗಿ ಪ್ರಜ್ಞಾವಂತರಾಗಬೇಕಾದರೆ, ಜಾಗೃತರಾಗಬೇಕಾದರೆ ಮೇಲ್‌ಸ್ತರದಲ್ಲಿರುವ ಮುಸ್ಲಿಮರು ಮೊದಲು ತಮ್ಮಿಳಗಿರುವ ವಾಸ್ತವವನ್ನು ಗುರುತಿಸಿಕೊಂಡು ಅದನ್ನು ಒಪ್ಪಿಕೊಳ್ಳಬೇಕಾಗಿದೆ. ಆದುದರಿಂದ ಮುಸ್ಲಿಮರ ಕುರಿತಂತೆ ಅರಿವಿಲ್ಲ ಇತರರಿಗೆ ಮಾತ್ರವಲ್ಲ, ಸಾಮಾಜಿಕ ಮತ್ತು ರಾಜಕೀಯವಾಗಿ ಜಾಗೃತರಾಗಬೇಕಾದ ಮುಸ್ಲಿಮರಿಗೂ ಈ ಕೃತಿ ಮಾರ್ಗದರ್ಶನವಾಗಿದೆ.

‘‘ಇದೊಂದು ಸಂಶೋಧನಾ ಗ್ರಂಥವೆಂದು ಹೇಳಿಕೊಳ್ಳುವುದರಲ್ಲಿ ನನಗೆ ಸಂಕೋಚವಿಲ್ಲ. ಈ ಸಂಶೋಧನೆಯ ಹಿಂದೆ ಬಾಲ್ಯದ ನೆನಪುಗಳಿವೆ. ವೈಯಕ್ತಿಕವಾಗಿ ಮತ್ತು ಸಮಷ್ಟಿಯಾಗಿ ಎದುರಿಸಿದ ಸಮಸ್ಯೆಗಳಿವೆ. ಇತಿಹಾಸದ ಭಾರವಿದೆ. ಅದಕ್ಕಾಗಿಯೇ ಪ್ರತಿ ವಾದಕ್ಕೆ, ಕಥನಕ್ಕೆ ಐತಿಹಾಸಿಕ ಪುರಾವೆಗಳನ್ನು ನೀಡಲು ಯತ್ನಿಸಿದ್ದೇನೆ. ವಿವಿಧ ಬೌದ್ಧಿಕ ಚರ್ಚೆಗಳನ್ನು ಮುಂದಿಟ್ಟು ವಾದಿಸಿದ್ದೇನೆ. ಆದರೂ ಸಾಕಷ್ಟು ವಿಷಯಗಳು ಮತ್ತು ಜಾತಿಗಳು ಈ ಅಧ್ಯಯನದಿಂದ ಹೊರಗಿವೆ. ಆದ ಕಾರಣ ಇದನ್ನು ಪರಿಪೂರ್ಣವಾದ ಸಂಶೋಧನಾ ಗ್ರಂಥವೆಂದು ಕರೆಯಲು ನಾನು ಬಯುಸುವುದಿಲ್ಲ’’ ಇದು ಕೃತಿಯ ಲೇಖಕ ಅಸಾದಿಯವರ ಮಾತು. ಬಹುರೂಪಿ, ಬೆಂಗಳೂರು ಹೊರತಂದಿರುವ ಈ ಕೃತಿಗಾಗಿ ಆಸಕ್ತರು 70191 82729 ದೂರವಾಣಿಯನ್ನು ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X