Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.4ರಂದು ರಾಷ್ಟ್ರಭಕ್ತ ನಾಗರಿಕ...

ಡಿ.4ರಂದು ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ ‘ಏಕ್ ಶಾಮ್ ದೇಶ್ ಕೆ ನಾಮ್’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Dec 2021 3:56 PM IST
share
ಡಿ.4ರಂದು ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ ‘ಏಕ್ ಶಾಮ್ ದೇಶ್ ಕೆ ನಾಮ್’ ಕಾರ್ಯಕ್ರಮ

ಮಂಗಳೂರು, ಡಿ.1: ನೂತನ ಬಾಂಗ್ಲಾದೇಶದ ನಿರ್ಮಾಣಕ್ಕೆ ನಾಂದಿ ಹಾಡಿದ 1971ನೇ ಬಾಂಗ್ಲಾ ವಿಮೋಚನಾ ಯುದ್ಧದ ‘ಸ್ವರ್ಣ ಜಯಂತಿ'ಯ ಪ್ರಯುಕ್ತ ರಾಷ್ಟ್ರ ಭಕ್ತ ನಾಗರಿಕ ವೇದಿಕೆ ಮಂಗಳೂರು ಇದರ ವತಿಯಿಂದ ‘ಏಕ್ ಶಾಮ್ ದೇಶ್ ಕೆ ನಾಮ್’ ಕಾರ್ಯಕ್ರಮವನ್ನು ಡಿ.4ರಂದು ಸಂಜೆ 5 ಗಂಟೆಗೆ ನಗರದ ಕೊಡಿಯಾಲ್‌ ಬೈಲ್‌ನಲ್ಲಿರುವ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ವಿವರ ನೀಡಿದ ರಾಷ್ಟ್ರಭಕ್ತ ನಾಗರಿಕ ವೇದಿಕೆ ಮಂಗಳೂರು ಇದರ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಕಾರ್ಯಕ್ರಮವನ್ನು ನಿವೃತ್ತ ವಾಯುಸೇನಾ ಅಧಿಕಾರಿ ಏರ್‌ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಉದ್ಘಾಟಿಸುವರು.

ನಿವೃತ್ತ ಹಿರಿಯ ಭೂ ಸೇನಾ ಅಧಿಕಾರಿ ಮೇಜರ್ ಜನರಲ್ ಎಂ.ವಿ.ಭಟ್ ಅಧ್ಯಕ್ಷತೆ ವಹಿಸುವರು. ಬಾಂಗ್ಲಾ ವಿಮೋಚನಾ ಯುದ್ಧ ಯೋಧರು ಮತ್ತು ಸೇನಾ ಮೆಡಲ್ ಪುರಸ್ಕೃತ ಕರ್ನಲ್ ಮೋಹಿಂದರ್ ಸಿಂಗ್ ಖೈರಾ ಎಸ್.ಎಂ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

1971ರ ಬಾಂಗ್ಲಾ ವಿಮೋಚನೆಯ ಯುದ್ಧವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಈ ಯುದ್ಧದಲ್ಲಿ ಸೇನೆಯಲ್ಲಿದ್ದ ದ.ಕ. ಜಿಲ್ಲೆಯ 55ಕ್ಕೂ ಅಕ ಮಂದಿ ಭಾಗವಹಿಸಿದ್ದಾರೆ. ಬಹುತೇಕ ಮಂದಿ ಈಗ ಇಲ್ಲ. ಇರುವ ಕೆಲವರು ಮತ್ತು ಅವರ ಮನೆಯವರನ್ನು ಒಳಗೊಂಡಂತೆ ಸೇನೆಯಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ ಸುಮಾರು 45 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.

ಸಭಾ ಕಾರ್ಯಮದ ಬಳಿಕ ದೇಶಾದ್ಯಂತ 3000ಕ್ಕಿಂತ ಅಧಿಕ ಪ್ರದರ್ಶನ, ಅಮೆರಿಕಾದಲ್ಲಿ 28 ಪ್ರದರ್ಶನ, 2 ರಾಷ್ಟ್ರ ಪ್ರಶಸ್ತಿ, 2 ಮಹಾರಾಷ್ಟ್ರ ರಾಜ್ಯ ಪ್ರಶಸ್ತಿ ವಿಜೇತ ತಂಡವಾದ ಜಾಗೋ ಹಿಂದೂಸ್ಥಾನಿ ತಂಡದಿಂದ ದೇಶಭಕ್ತಿ ಗೀತೆಗಳ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಮೈನವಿರೇಳಿಸುವ ಕಥೆಗಳ ಸಂಯೋಜನೆಯ ಅದ್ಭುತ ಕಾರ್ಯಕ್ರಮ ನಡೆಯಲಿದೆ.

ಸೇನೆಯ ಬಗ್ಗೆ ನಮ್ಮ ವಿದ್ಯಾರ್ಥಿಗಳೂ ತಿಳಿದುಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ ಮಂಗಳೂರಿನ ವಿವಿಧ ಹೈಸ್ಕೂಲ್ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದೆ. ನಮ್ಮ ದೇಶದ ಸೇನೆ, ಸೈನ್ಯದಲ್ಲಿರುವ ಯೋಧರ ಜೀವನ ಈ ಎಲ್ಲಾ ವಿಚಾರವನ್ನಿಟ್ಟುಕ್ಕೊಂಡು ಈಗಗಾಲೇ ಕೆಲವು ಶಾಲೆಗಳಲ್ಲಿ ಕಾರ್ಯಕ್ರಮ ಆರಂಭವಾಗಿದೆ. ಸುಮಾರು 45ರಿಂದ 50 ಶಾಲೆಗಳಲ್ಲಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಸತ್ಯಜಿತ್ ಸುರತ್ಕಲ್ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಷ್ಟ್ರಭಕ್ತ ವೇದಿಕೆಯ ಉಪಾಧ್ಯಕ್ಷರಾದ ಪ್ರಸನ್ನ ರವಿ, ಗುರುಚಂದ್ರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಸಂದೀಪ್ ಮತ್ತು ಸಂಚಾಲಕ ಸಂದೀಪ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X