Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಂಡಾಡಿ ಕೊರಗರ ಮನೆ ನಿವೇಶನದ ತಡೆಗೋಡೆ...

ಕೊಂಡಾಡಿ ಕೊರಗರ ಮನೆ ನಿವೇಶನದ ತಡೆಗೋಡೆ ಕುಸಿತ; ತನಿಖೆಗೆ ಮಾನವಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ1 Dec 2021 7:19 PM IST
share
ಕೊಂಡಾಡಿ ಕೊರಗರ ಮನೆ ನಿವೇಶನದ ತಡೆಗೋಡೆ ಕುಸಿತ; ತನಿಖೆಗೆ ಮಾನವಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಒತ್ತಾಯ

ಉಡುಪಿ, ಡಿ.1: ಬೊಮ್ಮಾರಬೆಟ್ಟು ಗ್ರಾಮದ ಕೊಂಡಾಡಿಯ ಕೊರಗರ ಮನೆ ನಿವೇಶನವನ್ನು ಸಮತಟ್ಟುಗೊಳಿಸಿ ಸುಮಾರು 50ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ತಡೆಗೋಡೆಯು ಕಳಪೆ ಕಾಮಗಾರಿಯಿಂದ ಈ ವರ್ಷದ ಮೊದಲ ಮಳೆಗೆ ಕುಸಿದು ಬಿದ್ದಿದೆ. ಈ ಅಸುರಕ್ಷಿತ ನಿವೇಶನದಲ್ಲಿ ಮನೆ ನಿರ್ಮಿಸಲು ನಿರಾಕರಿಸುತ್ತಿರುವ ಕೊರಗ ಮಹಿಳೆಯರಿಗೆ ಬದಲಿ ನಿವೇಶನ ನೀಡುವಂತೆ ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನವು ಉಡುಪಿ ಜಿಲ್ಲಾ ನ್ಯಾಯಾಧೀಶರಿಗೆ ದೂರು ನೀಡಿದೆ.

ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಬುಧವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ರವೀಂದ್ರನಾಥ್ ಶ್ಯಾನುಭಾಗ್ ಈ ಬಗ್ಗೆ ಮಾಹಿತಿ ನೀಡಿದರು.

ಸರಕಾರ ಮಂಜೂರು ಮಾಡಿದ ಕೊಂಡಾಡಿಯ ಮನೆ ನಿವೇಶನ ನೀಡುವಂತೆ 2011ರಿಂದ 11 ವರ್ಷಗಳ ಕಾಲ ಕೊರಗ ಮಹಿಳೆಯರು ನಡೆಸಿದ ಹೋರಾಟ ಪರಿಣಾಮವಾಗಿ, ಇಲ್ಲಿನ 2.61 ಎಕರೆ ಜಾಗದಲ್ಲಿ ಒಟ್ಟು 23 ಕೊರಗ ಕುಟುಂಬ ಗಳಿಗೆ ತಲಾ 8 ಸೆಂಟ್ಸ್‌ಗಳಂತೆ ನಿವೇಶನಗಳನ್ನು ನೀಡಲಾಯಿತು. ನಿವೇಶನ ದಾರರು ಮಾನವ ಹಕ್ಕುಗಳ ಆಯೋಗ, ಲೋಕಾಯುಕ್ತಕ್ಕೆ ನೀಡಿದ ಅರ್ಜಿಗಳಿಗೆ ಉತ್ತರಿಸುವ ಅವಸರದಿಂದ ಗಿರಿಜನ ಯೋಜನಾ ಸಮನ್ವಯ ಅಧಿಕಾರಿಗಳು, ಸುಮಾರು 50 ಲಕ್ಷ ರೂ. ವ್ಯಯಿಸಿ ಅವೈಜ್ಞಾನಿಕವಾಗಿ ಗುಡ್ಡ ಕೊರೆದು ಸಮತಟ್ಟು ಮಾಡಿ, 18 ಅಡಿ ಎತ್ತರದ ತಡೆಗೋಡೆಯನ್ನು ನಿರ್ಮಿಸಿದರು.

ತೀರಾ ಕಳಪೆ ಕಾಮಗಾರಿಯಿಂದಾಗಿ ಮಳೆಗಾಲದ ಮೊದಲ ವಾರದಲ್ಲೇ ಇಲ್ಲಿನ ಗುಡ್ಡ ಜರಿದು, ತಡೆಗೋಡೆ ನೆಲಸಮವಾಗಿದೆ. ಒಂದು ವೇಳೆ ಗಿರಿಜನ ಯೋಜನಾಧಿಕಾರಿಗಳ ಸೂಚನೆಯಂತೆ ಕೊರಗರು ಇಲ್ಲಿ ಮನೆ ನಿರ್ಮಿಸುತ್ತಿದ್ದರೆ ಈ ಮಳೆಗಾಲದಲ್ಲಿ ಭಾರೀ ಅನಾಹುತ ಎದುರಿಸಬೇಕಾದೀತು. ಈ ಅಪಾಯ ಕಾರಿ ನಿವೇಶನಗಳಲ್ಲಿ ಮನೆ ನಿರ್ಮಿಸಲು ಕೊರಗ ಕುಟುಂಬಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ರವೀಂದ್ರನಾಥ್ ಶಾನುಭಾಗ್ ತಿಳಿಸಿದರು.

ಆದುದರಿಂದ ಈ ಹಗರಣದ ಬಗ್ಗೆ ನ್ಯಾಯಾಂಗ ತನಿಖೆ ಮಾಡುವಂತೆ ಜಿಲ್ಲಾ ನ್ಯಾಯಾಧೀಶರಿಗೆ ದೂರು ನೀಡಲಾಗಿದೆ. ನ್ಯಾಯಾಧೀಶರು ಈ ಬಗ್ಗೆ ಪರಿ ಶೀಲನೆ ನಡೆಸಲಿದ್ದಾರೆ. ಅದೇ ರೀತಿ ಈಗ ನೀಡಿರುವ ನಿವೇಶನದ ಬದಲು ಬೇರೆಯೇ ಜಮೀನಿನಲ್ಲಿ ನಿವೇಶನಗಳನ್ನು ನೀಡಬೇಕೆಂದು ನಿವೇಶನದಾರರ ಒತ್ತಾಯವಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಿವೇಶನದಾರರಾದ ವಿಜಯಲಕ್ಷ್ಮೀ, ಸಮೀರಾ, ಸುಬೇದಾ ಉಪಸ್ಥಿತರಿದ್ದರು.

''ಸಾಕಷ್ಟು ಹೋರಾಟ ಮಾಡಿ ಈ ನಿವೇಶನವನ್ನು ಪಡೆದುಕೊಂಡಿದ್ದೇವು. ಕಲ್ಲು ಬಂಡೆಯಿಂದ ಕೂಡಿದ ಈ ಜಾಗವನ್ನು ಸಮತಟ್ಟುಗೊಳಿಸಿ ಅವೈಜ್ಞಾನಿಕವಾಗಿ ತಡೆಗೋಡೆಗಳನ್ನು ನಿರ್ಮಿಸಲಾಗಿತ್ತು. ಅಧಿಕಾರಿಗಳು ಮನೆ ನಿರ್ಮಿಸುವಂತೆ ಒತ್ತಾಯಿಸಿದರೂ ನಮಗೆ ಧೈರ್ಯ ಬರಲಿಲ್ಲ. ಇದೀಗ ಜೂನ್‌ನಲ್ಲಿ ಸುರಿದ ಮಳೆಗೆ ಈ ತಡೆಗೋಡೆ ಕುಸಿದು ಬಿದ್ದಿದೆ. ಇದನ್ನು ಮುಚ್ಚಿ ಹಾಕುವ ಪ್ರಯತ್ನ ಕೂಡ ಅಧಿಕಾರಿಗಳು ನಡೆಸಿದ್ದರು. ಸ್ಥಳೀಯರು ನಮಗೆ ಮಾಹಿತಿ ನೀಡಿರುವುದರಿಂದ ಈ ವಿಚಾರ ತಿಳಿಯಿತು. ನಮಗೆ ಇನ್ನು ಇಲ್ಲಿ ನಿವೇಶನ ಬೇಡ. ಬೇರೆ ಜಮೀನಿನಲ್ಲಿ ನಿವೇಶನ ನೀಡಬೇಕು''.
-ವಿಜಯಲಕ್ಷ್ಮೀ, ನಿವೇಶನದಾರರು,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X