Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಸ್ರೋ ಖಾಸಗೀಕರಣ ಮಾಡುವ ಹುನ್ನಾರ...

ಇಸ್ರೋ ಖಾಸಗೀಕರಣ ಮಾಡುವ ಹುನ್ನಾರ ನಡೆಯುತ್ತಿದೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ1 Dec 2021 10:08 PM IST
share
ಇಸ್ರೋ ಖಾಸಗೀಕರಣ ಮಾಡುವ ಹುನ್ನಾರ ನಡೆಯುತ್ತಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ.1: ಇಸ್ರೋ ನಮ್ಮ ರಾಜ್ಯದ ಹೆಮ್ಮೆ ಮತ್ತು ಗೌರವದ ವಿಚಾರ. ಅದನ್ನು ಖಾಸಗೀಕರಣ ಮಾಡುವ ಹುನ್ನಾರ ನಡೆಯುತ್ತಿದೆ. ಮಾನವಸಹಿತ ಗಗನಯಾನ ಯೋಜನೆಯನ್ನು ಗುಜರಾತಿಗೆ ಸ್ಥಳಾಂತರ ಮಾಡಬಾರದು. ಅದು ಬೆಂಗಳೂರಿನಲ್ಲೇ ನಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಬುಧವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನನ್ನ ಅಥವಾ ಕಾಂಗ್ರೆಸ್ ಪಕ್ಷದ ವಿಚಾರವಲ್ಲ. ಇಡೀ ರಾಜ್ಯದ ವಿಚಾರ. ಇದರ ವಿರುದ್ಧ ಬೇರೆ ಪಕ್ಷಗಳು, ಸಂಘ ಸಂಸ್ಥೆಗಳು, ಕನ್ನಡ ಸಂಘಟನೆಗಳು ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

ಕರ್ನಾಟಕ ಕೇವಲ ಐಟಿ ಹಬ್ ಅಲ್ಲ, ಇದು ತಂತ್ರಜ್ಞಾನ, ಜ್ಞಾನದ ಹಬ್. ಹಿರಿಯರು ಬೆಂಗಳೂರಿನಲ್ಲಿ ಇಸ್ರೋ ಸ್ಥಾಪಿಸಿದ್ದಾರೆ. ಮಾನವಸಹಿತ ಗಗನಯಾನ ಯೋಜನೆಗೆ ಕಾರ್ಯ ಮುಂದುವರಿಸಲು ತಡೆಯಾಜ್ಞೆ ನೀಡಲಾಗಿದೆ. ಇದನ್ನು ಗುಜರಾತಿಗೆ ಸ್ಥಳಾಂತರ ಮಾಡಲು ಹೊರಟಿದ್ದಾರೆ ಎಂದು ಅವರು ಆರೋಪಿಸಿದರು.

ನಾವು ಇದರ ವಿರುದ್ಧ ಧ್ವನಿ ಎತ್ತಿದ ಮೇಲೆ ನಿನ್ನೆ ಕೆ.ಶಿವನ್ ಅವರು ಸರಕಾರದ ಪರವಾಗಿ ಮಾತನಾಡಿದ್ದಾರೆ. ಭಾರತದಲ್ಲಿ ಎಲ್ಲಿ ಕೆಲಸ ಮಾಡಿದರೂ ಒಂದೇ ಎಂದು ಹೇಳಿದ್ದಾರೆ. ಅವರು ಸರಕಾರದ ನಿರ್ದೇಶನದಂತೆ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ 15 ಸಾವಿರ ವಿಜ್ಞಾನಿಗಳು ಇದ್ದಾರೆ. ಈ ಯೋಜನೆ ವಿಚಾರವಾಗಿ ನನಗೆ ಆಂತರಿಕವಾಗಿ ಮಾಹಿತಿ ಸಿಕ್ಕಿದೆ. ಈ ಯೋಜನೆ ಬೆಂಗಳೂರಿನಲ್ಲಿ ನಡೆಯಬೇಕು. ಅವರು ತಮ್ಮ ಹೇಳಿಕೆ ವಾಪಸ್ ಪಡೆಯಬೇಕು ಎಂದು ಪ್ರಧಾನಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ ಎಂದು ಶಿವಕುಮಾರ್ ಹೇಳಿದರು.

ರಾಜ್ಯದಿಂದ ಆಯ್ಕೆಯಾದ 25 ಸಂಸದರಿದ್ದಾರೆ. 12 ರಾಜ್ಯಸಭಾ ಸದಸ್ಯರಿದ್ದಾರೆ. ಎಲ್ಲರನ್ನೂ ಕರೆದುಕೊಂಡು ಹೋಗಿ ಪ್ರಧಾನಿ ಅವರನ್ನು ಭೇಟಿ ಮಾಡಿ ಈ ಯೋಜನೆ ಸ್ಥಳಾಂತರ ಮಾಡಲು ಅವಕಾಶ ನೀಡಬೇಡಿ. ಇದಕ್ಕೆ ಅವಕಾಶ ಕೊಟ್ಟರೆ ನೀವೇ ನಮ್ಮ ರಾಜ್ಯದ ಮಾನ ಹರಾಜು ಹಾಕಿದಂತೆ. ಹೀಗಾಗಿ ಎಚ್ಚರಿಕೆಯಿಂದ ನಡೆದುಕೊಳ್ಳಿ. ಇದು ನಮ್ಮ ಮಕ್ಕಳ ಭವಿಷ್ಯ ಎಂದು ಹೇಳಲಿ ಎಂದು ಶಿವಕುಮಾರ್ ತಿಳಿಸಿದರು.

ಇಸ್ರೋ ಸಂಸ್ಥೆ ಬಳಿ ಎನ್‍ಎಸ್‍ಯುಐ ಪ್ರತಿಭಟನೆ: ಎತ್ತಿನಗಾಡಿ, ಸೈಕಲ್ ಮೇಲೆ ರಾಕೆಟ್ ಹೊತ್ತುಕೊಂಡು ಹೋಗಿ ಈ ಸಂಸ್ಥೆ ಕಟ್ಟಿ ಬೆಳೆಸಲಾಗಿದೆ. ನಮ್ಮ ವಿಜ್ಞಾನಿಗಳು ಹಗಲು-ರಾತ್ರಿ ಶ್ರಮಿಸಿ ಇಸ್ರೋ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಇಸ್ರೋ ಯೋಜನೆ ಸ್ಥಳಾಂತರ ವಿರುದ್ಧ ರಾಜ್ಯದ ವಿದ್ಯಾರ್ಥಿ ಘಟಕ ಇಂದು ಸಾಂಕೇತಿಕವಾಗಿ ಪ್ರತಿಭಟನೆಗೆ ಮಾಡುತ್ತಿದೆ. ಈ ಯೋಜನೆ ಸ್ಥಳಾಂತರ ಪ್ರಯತ್ನ ಮುಂದುವರಿಸಿದರೆ ರಾಜ್ಯದೆಲ್ಲೆಡೆ ಈ ಹೋರಾಟ ನಡೆಯಲಿದೆ. ನಮ್ಮ ರಾಜ್ಯದ ನೆಲ, ವಿಜ್ಞಾನಿಗಳ ಗೌರವ ರಕ್ಷಿಸಲು ನಮ್ಮ ಹೋರಾಟ ಮುಂದುವರಿಯಲಿದೆ. ನಾನು ಈ ಹೋರಾಟದಲ್ಲಿ ಇವರ ಬೆಂಬಲಕ್ಕೆ ನಿಲ್ಲಲು ನಾನೇ ಇಲ್ಲಿಗೆ ಬಂದಿದ್ದೇನೆ ಎಂದು ಶಿವಕುಮಾರ್ ಹೇಳಿದರು.

ಈ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಧಮಕಿ ಹಾಕುತ್ತಿದ್ದಾರೆ. ನಾವು ದೇಶ ಹಾಗೂ ರಾಜ್ಯದ ಹಿತಕ್ಕಾಗಿ ಬಂಧನಕ್ಕೆಲ್ಲ ಜಗ್ಗುವುದಿಲ್ಲ. ರಾಜ್ಯದ ಹಿರಿಮೆ, ಸ್ವಾಭಿಮಾನ ನಮಗೆ ಮುಖ್ಯ. ಈ ಯೋಜನೆ ಸ್ಥಳಾಂತರದ ಹುನ್ನಾರವನ್ನು ಮಾಧ್ಯಮಗಳು ಬಯಲು ಮಾಡಬೇಕು. ಬೇಕಾದರೆ ಅದಕ್ಕೆ ಸಂಬಂಧಿಸಿದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಅವರು ಹೇಳಿದರು.

ರಾಮನಗರ ಜಿಲ್ಲೆಯಲ್ಲಿ ಸರಕಾರಿ ಅಧಿಕಾರಿ ಮತ ಕೇಳುತ್ತಿರುವ ವಿಚಾರವಾಗಿ ಕಾಂಗ್ರೆಸ್ ಅಭ್ಯರ್ಥಿ ಎಸ್.ರವಿ ದೂರು ನೀಡಿರುವ ಹಿನ್ನೆಲೆಯಲ್ಲಿ, ಈ ಬಗ್ಗೆ ಅವರನ್ನೇ ಪ್ರಶ್ನೆ ಕೇಳಬೇಕು. ಈ ರೀತಿ ಬೆಳಗಾವಿ ಹಾಗೂ ಇತರೆ ಭಾಗಗಳಲ್ಲಿ ನಡೆಯುತ್ತಿದ್ದು, ಆಡಳಿತ ಪಕ್ಷ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ವಿರುದ್ಧ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ನೀಡಿರುವ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಬಿಜೆಪಿಯವರು ಯಾರನ್ನು ಜತೆಯಲ್ಲಿ ಇಟ್ಟುಕೊಂಡಿದ್ದಾರೆ. ಅವರ ಜೊತೆ ಇರುವವರ ವಿರುದ್ಧ ಎಂತಹ ಆರೋಪಗಳಿವೆ. ಮೊದಲು ಅವರ ತಟ್ಟೆ ಸ್ವಚ್ಛ ಮಾಡಿಕೊಳ್ಳಲಿ' ಎಂದು ಖಾರವಾಗಿ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X