Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫಲವಂತಿಕೆ ಕ್ಲಿನಿಕ್‌ಗಳ ನಿಯಂತ್ರಣಕ್ಕೆ...

ಫಲವಂತಿಕೆ ಕ್ಲಿನಿಕ್‌ಗಳ ನಿಯಂತ್ರಣಕ್ಕೆ ಲೋಕಸಭೆಯಲ್ಲಿ ವಿಧೇಯಕ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ2 Dec 2021 11:13 PM IST
share
ಫಲವಂತಿಕೆ ಕ್ಲಿನಿಕ್‌ಗಳ ನಿಯಂತ್ರಣಕ್ಕೆ ಲೋಕಸಭೆಯಲ್ಲಿ ವಿಧೇಯಕ ಅಂಗೀಕಾರ

ಹೊಸದಿಲ್ಲಿ, ಡಿ. 2: ದೇಶದಲ್ಲಿ ಸಂತಾನೋತ್ಪತ್ತಿ ನೆರವು ತಂತ್ರಜ್ಞಾನ ಕ್ಲಿನಿಕ್‌ಗಳ ನಿಯಂತ್ರಣ ಹಾಗೂ ಮೇಲ್ವಿಚಾರಣೆ ವಿಧೇಯಕವನ್ನು ಲೋಕಸಭೆ ಬುಧವಾರ ಅಂಗೀಕರಿಸಿದೆ. ಇದು ಐವಿಎಫ್ ಕೇಂದ್ರಗಳನ್ನು ಹಾಗೂ ಅಂಡಾಣು ಅಥವಾ ವೀರ್ಯ ಬ್ಯಾಂಕ್‌ಗಳನ್ನು ಕೂಡ ಒಳಗೊಂಡಿದೆ. ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಕ್ಲಿನಿಕ್‌ಗಳು ಹಾಗೂ ವೃತ್ತಿಪರರ ರಾಷ್ಟ್ರೀಯ ನೋಂದಣಿಯನ್ನು ರೂಪಿಸುವ ಪ್ರಸ್ತಾವನೆಯನ್ನು ಸಂತಾನೋತ್ಪತ್ತಿ ನೆರವು ತಂತ್ರಜ್ಞಾನ (ನಿಯಂತ್ರಣ) ವಿಧೇಯಕ-2020 ಹೊಂದಿದೆ. ಮಾನವ ಭ್ರೂಣಗಳ ಮಾರಾಟ ಹಾಗೂ ಲಿಂಗ ಆಯ್ಕೆಯಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆಯನ್ನು ಈ ವಿಧೇಯಕ ಶಿಫಾರಸು ಮಾಡಿದೆ. ಇಂತಹ ಅಪರಾಧಗಳಿಗೆ 12 ವರ್ಷಗಳ ವರೆಗೆ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಯಿಂದ 20 ಲಕ್ಷದ ರೂಪಾಯಿ ವರೆಗೆ ದಂಡ ವಿಧಿಸಬಹುದು. ಲಿಂಗ ಆಯ್ಕೆ ಸೇವೆಗಳನ್ನು ನೀಡುವ ಆಸ್ಪತ್ರೆ ಹಾಗೂ ಅಂಡಾಣು ಅಥವಾ ವೀರ್ಯ ಬ್ಯಾಂಕ್‌ಗಳಿಗೆ 25 ಲಕ್ಷದ ವರೆಗೆ ದಂಡ ವಿಧಿಸಬಹುದು. ಭಾರತದಲ್ಲಿ ಹಲವು ಸಂತಾನೋತ್ಪತ್ತಿ ನೆರವಿನ ತಂತ್ರಜ್ಞಾನ ಕ್ಲಿನಿಕ್‌ಗಳು ಅನಿಯಂತ್ರಿತವಾಗಿ ಕಾರ್ಯಾಚರಿಸುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನುಸುಖ್ ಮಾಂಡವಿಯಾ ಅವರು ಲೋಕಸಭೆಗೆ ತಿಳಿಸಿದ್ದಾರೆ.

ಸಂತಾನೋತ್ಪತ್ತಿ ನೆರವಿನ ಕಾರ್ಯ ಕೈಗೊಳ್ಳುವವರ ಆರೋಗ್ಯದ ಮೇಲೆ ಪರಿಣಾಮಗಳು ಉಂಟಾಗುವುದರಿಂದ ಅಂತಹ ಕ್ಲಿನಿಕ್‌ಗಳನ್ನು ನಿಯಂತ್ರಿಸುವ ಅಗತ್ಯತೆ ಇದೆ. ಒಂದು ವೇಳೆ ನಿಯಂತ್ರಣ ಇಲ್ಲದೇ ಇದ್ದರೆ, ಅನೈತಿಕ ಅಭ್ಯಾಸಗಳು ಹೆಚ್ಚಲಿವೆ ಎಂದು ಮಾಂಡವಿಯ ಹೇಳಿದರು. ಈ ನಡುವೆ ಪ್ರತಿಪಕ್ಷಗಳ ಸಂಸದರು ದೇಶದಲ್ಲಿರುವ ಪುರುಷ ಸಲಿಂಗಿ, ಸ್ತ್ರೀ ಸಲಿಂಗಿ, ಲಿಂಗಾಂತರಿ ವ್ಯಕ್ತಿಗಳನ್ನು ಈ ವಿಧೇಯಕದ ವ್ಯಾಪ್ತಿಯಿಂದ ಹೊರಗಿರಿಸಲಾಗಿದೆ ಎಂದು ಗುರುತಿಸಿದ್ದಾರೆ. ‘‘ಈ ವಿಧೇಯಕ ಸಂತನಾತ್ಪೋತ್ತಿ ನೆರವಿನ ತಂತ್ರಜ್ಞಾನವನ್ನು ಕೇವಲ ಭಿನ್ನ ಲಿಂಗಿ ವಿವಾಹಿತ ಜೋಡಿಗೆ ಹಾಗೂ ವಿವಾಹ ಪ್ರಾಯ ಮೀರಿದ ಮಹಿಳೆಯರಿಗೆ ಮಾತ್ರ ಬಳಸಲು ಅವಕಾಶ ನೀಡಲಿದೆ. ಒಂಟಿ ಪುರುಷ, ಸಲಿಂಗಕಾಮಿ ಜೋಡಿ, ಎಲ್‌ಜಿಬಿಟಿ ಕ್ಯೂ ವ್ಯಕ್ತಿಗಳನ್ನು ಈ ವಿಧೇಯಕದಿಂದ ಹೊರತುಪಡಿಸಲಾಗಿದೆ’’ ಎಂದು ಬಹುಜನ ಸಮಾಜ ಪಕ್ಷದ ಸಂಸದೆ ಸಂಗೀತಾ ಅಝಾದ್ ಅವರು ಹೇಳಿದರು. ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ಈ ವಿಧೇಯಕ ವಿಕ್ಟೋರಿಯ ಹಾಗೂ ವಶಾಹತುಶಾಹಿ ಕಾಲದ ಮನಸ್ಥಿತಿಯಿಂದ ರೂಪಿಸಲಾಗಿದೆ. ಈ ವಿಧೇಯಕ ಸೇರಿಸುವುದಕ್ಕಿಂತ ಹೆಚ್ಚು ಜನರನ್ನು ಕೈಬಿಟ್ಟಿದೆ ಎಂದಿದ್ದಾರೆ. ಈ ವಿಧೇಯಕ ‘ಪಿತೃಪ್ರಧಾನ’ವಾದುದು ಎಂದು ವಿವರಿಸಿದ ಕಾರ್ತಿ ಚಿದಂಬರಂ, ಅಂಡಕ ದಾನ ಮಾಡುವ ಸಾಮರ್ಥ್ಯ ಇರುವ ಮಹಿಳೆ ವಿವಾಹಿತೆಯಾಗಿರಬೇಕು ಹಾಗೂ ಆಕೆಗೆ ಕನಿಷ್ಠ 3 ವರ್ಷದ ಮಗುವಿರಬೇಕು. ಅನಂತರ ಮಾತ್ರವೇ ಆಕೆ ದಾನಿಯಾಗಲು ಸಾಧ್ಯ. ಆದರೆ, ಒಂಟಿ ಮಹಿಳೆ ಅಂಡಕ ದಾನಿಯಾಗಲು ಸಾಧ್ಯವಿಲ್ಲ. ಇದು ಪಿತೃಪ್ರಭುತ್ವದ ಚಿಂತನೆ ಎಂದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X