Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 35 ವರ್ಷಗಳ ಪ್ರೇಮ ಫಲಿಸಿತು!: 65ನೇ...

35 ವರ್ಷಗಳ ಪ್ರೇಮ ಫಲಿಸಿತು!: 65ನೇ ವಯಸ್ಸಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ

ವಾರ್ತಾಭಾರತಿವಾರ್ತಾಭಾರತಿ3 Dec 2021 10:20 AM IST
share
35 ವರ್ಷಗಳ ಪ್ರೇಮ ಫಲಿಸಿತು!: 65ನೇ ವಯಸ್ಸಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ

ಮಂಡ್ಯ: ಪ್ರೀತಿಗೆ ಹಣ, ಅಂತಸ್ತು, ವಯಸ್ಸು ಇದ್ಯಾವುದೂ ಅಡ್ಡಿಯಾಗದು ಎನ್ನುತ್ತಾರೆ. ಅದಕ್ಕೆ ಸ್ಪಷ್ಟ ನಿದರ್ಶನದಂತಿತ್ತು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ನಡೆದ ಈ ಅಪರೂಪದ ವಿವಾಹ!.

ಮೂಲತಃ ಹಾಸನ ಜಿಲ್ಲೆಯ ಹೊಳೆನರಸೀಪುರದ ಹೆಬ್ಬಾಳದ ಚಿಕ್ಕಣ್ಣ ಮತ್ತು ಅವರ ಅತ್ತೆ ಮಗಳಾದ ಮೈಸೂರಿನ ಜಯಮ್ಮ ಅವರ ವಿವಾಹವು ಗುರುವಾರ ಮೇಲುಕೋಟೆಯ ಚಲುವರಾಯಸ್ವಾಮಿ ದೇವಾಲಯದ ಮುಂಭಾಗದಲ್ಲಿರುವ ಶ್ರೀನಿವಾಸ್ ಗುರೂಜಿ ಅವರ ಆಶ್ರಮದಲ್ಲಿ ನೆರವೇರಿತು. ಇದರಲ್ಲೇನು ವಿಶೇಷ ಅಂತೀರಾ? ಇವರು ಪ್ರೇಮಿಗಳು... ಅದು 35 ವರ್ಷಗಳ ಸುದೀರ್ಘವಾದ ಪ್ರೇಮಕಥೆ..!. ಆದರೆ ಇವರು ಮದುವೆಯಾಗಿದ್ದು ತಮ್ಮ 65ನೇ ವಯಸ್ಸಿನಲ್ಲಿ!

ಚಿಕ್ಕಣ್ಣ ಹಿಂದೆ ಮೈಸೂರಿನಲ್ಲಿ ಕೂಲಿಕೆಲಸ ಮಾಡುತ್ತಿದ್ದ ವೇಳೆ ಅತ್ತೆ ಮಗಳಾದ ಮೈಸೂರಿನ ಜಯಮ್ಮರನ್ನು ಪ್ರೇಮಿಸುತ್ತಿದ್ದರು. ಆದರೆ ವಿವಾಹ ಪ್ರಸ್ತಾಪವನ್ನು ಒಪ್ಪದ ಜಯಮ್ಮ ಮನೆಯವರು ಅವರಿಗೆ ಬೇರೆ ವಿವಾಹ ಮಾಡಿದ್ದರು. ಅತ್ತ ಜಯಮ್ಮ ಸಿಗದೆ ನೊಂದಿದ್ದ ಚಿಕ್ಕಣ್ಣ ಮದುವೆ ಆಗಿರಲಿಲ್ಲ. ಜಯಮ್ಮ ದೂರವಾದರೂ ಅವರ ನೆನಪಲ್ಲೇ 35 ವರ್ಷಗಳನ್ನು ಕಳೆದಿದ್ದರು.

ಬಳಿಕದ ಬೆಳವಣಿಗೆಯಲ್ಲಿ ಜಯಮ್ಮರನ್ನು ಅವರ ಪತಿ ತೊರೆದು ಹೋಗಿದ್ದರು. ಜಯಮ್ಮರಿಗೆ ಮಕ್ಕಳಿರಲಿಲ್ಲ. ಈ ನಡುವೆ ಜಯಮ್ಮ ಮತ್ತು ಚಿಕ್ಕಣ್ಣ ಭೇಟಿಯಾಗಿದ್ದರು. ಇಬ್ಬರೂ ಪರಸ್ಪರ ಒಪ್ಪಿ ವಿವಾಹವಾಗಲು ನಿರ್ಧರಿಸಿದರು. ಅದರಂತೆ ಗುರುವಾರ ಡಿಸೆಂಬರ್ 2ರಂದು ಈ ಜೋಡಿ ಮೇಲುಕೋಟೆಯ ಚಲುವರಾಯಸ್ವಾಮಿ ದೇವಾಲಯದ ಮುಂಭಾಗದಲ್ಲಿ ಇರುವ ಶ್ರೀನಿವಾಸ್ ಗುರೂಜಿ ಆಶ್ರಮದಲ್ಲಿ ಸತಿಪತಿಗಳಾದರು. ಆ ಮೂಲಕ 35 ವರ್ಷಗಳ ಬಳಿಕ ಈ ಸುದೀರ್ಘ ಕಾಲದ ಪ್ರೇಮಿಗಳು ಒಂದಾಗಿದ್ದಾರೆ. 

65 ವರ್ಷ ವಯಸ್ಸಿನ ಚಿಕ್ಕಣ್ಣ ಮತ್ತು ಜಯಮ್ಮ, ನವ ವಧು-ವರರಂತೆ ಹೊಸ ಬಟ್ಟೆ ಧರಿಸಿ ಹಣೆಗೆ ಬಾಸಿಂಗ ಧರಿಸಿ ಕಂಗೊಳಿಸಿದರು. ಮೈಸೂರು ಪೇಟ ತೊಟ್ಟ ಜಯಣ್ಣ, ತಮ್ಮ ಬಹುಕಾಲದ ಪ್ರೇಯಸಿ ಜಯಮ್ಮರಿಗೆ ಶಾಸ್ತ್ರೋಕ್ತವಾಗಿ ಮಾಂಗಲ್ಯ ಧಾರಣೆ ಮಾಡಿದರು.
ಈ ಮೂಲಕ 30 ವರ್ಷಗಳ ಬಳಿಕ ಪ್ರೇಮಿಗಳು ವಿವಾಹ ಬಂಧನದಲ್ಲಿ ಒಂದಾದರು. ಈ ವಿವಾಹಕ್ಕೆ ವಧು-ವರರ ಆಪ್ತರು, ಗೆಳೆಯರು ಸಾಕ್ಷಿಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X