'ಒಮೈಕ್ರಾನ್: ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚಿಸಲು ಸಿಎಂ ನೇತೃತ್ವದಲ್ಲಿ ಸಭೆ
ಬೆಂಗಳೂರು, ಡಿ.3: ಕೋವಿಡ್-19, ರೂಪಾಂತರಿತ ಹೊಸ ಪ್ರಭೇದ 'ಒಮೈಕ್ರಾನ್' ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಸಭೆ ನಡೆಯಿತು.
ಮಧ್ಯಾಹ್ನ 1 ಗಂಟೆಗೆ ಆರಂಭಗೊಂಡ ಸಭೆ ಸುದೀರ್ಘ ಅವಧಿಗೆ ಮುಂದುವರಿದಿದೆ.
ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಡಾ. ಸುಧಾಕರ್, ಡಾ. ಅಶ್ವತ್ಥ ನಾರಾಯಣ, ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ, ತಜ್ಞ ವೈದ್ಯರಾದ ಡಾ. ಸುಧಾಕರ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.
Next Story