Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಪಚುನಾವಣೆ ಸೋಲಿನಿಂದ ಎಚ್ಚೆತ್ತು...

ಉಪಚುನಾವಣೆ ಸೋಲಿನಿಂದ ಎಚ್ಚೆತ್ತು ಬಿಜೆಪಿಯಿಂದ ರಾತ್ರೋ‌ರಾತ್ರಿ ಕೃಷಿ‌ ಕಾಯಿದೆ ವಾಪಸ್: ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ3 Dec 2021 9:44 PM IST
share
ಉಪಚುನಾವಣೆ ಸೋಲಿನಿಂದ ಎಚ್ಚೆತ್ತು ಬಿಜೆಪಿಯಿಂದ ರಾತ್ರೋ‌ರಾತ್ರಿ ಕೃಷಿ‌ ಕಾಯಿದೆ ವಾಪಸ್: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಕಾಂಗ್ರೆಸ್ ಪಕ್ಷ‌ ಹಣವಂತರಿಗೆ ಮಣೆ ಹಾಕದೆ ಸಾಮಾನ್ಯ ಕಾರ್ಯಕರ್ತನನ್ನು ಚುನಾವಣೆಗೆ ನಿಲ್ಲಿಸಿದೆ. ನೀವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಿದರೆ, ಎಂತಹ ದುಡ್ಡಿದ್ದವನು ಕೂಡಾ ಧೂಳಿಪಟವಾಗುತ್ತಾನೆ‌ ಎಂದು ರಾಜ್ಯ ಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಗರದ ಜೈ ಭವಾನಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಕಲಬುರಗಿ ಯಾದಗಿರಿ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ‌ ಅವರು ಮಾತನಾಡುತ್ತಿದ್ದರು.

ಮೂರು ಕೃಷಿ‌ ಕಾಯಿದೆಗಳ ವಿರುದ್ಧ ನಾವು ಮಾತನಾಡಿದಾಗ ನಮ್ಮ ಮಾತನ್ನು ಮೋದಿ ಒಪ್ಪಲಿಲ್ಲ. ಈಗೇನಾಗಿದೆ, ಉಪ ಚುನಾವಣೆ ಸೋಲಿನ ಪರಿಣಾಮ ಹಾಗೂ ಮುಂಬರುವ ಯುಪಿ, ಪಂಜಾಬ್ ಹಾಗೂ ಬೇರೆ ರಾಜ್ಯಗಳಲ್ಲಿ‌ ಸೋಲಾಗುವುದನ್ನು ಮನಗಂಡು ಯಾವುದೇ ಚರ್ಚೆ ನಡೆಸದೆ ಕಳ್ಳರತರ ರಾತ್ರೋ‌ರಾತ್ರಿ ಕೃಷಿ‌ ಕಾಯಿದೆಗಳನ್ನು ವಾಪಸ್ ಪಡೆದರು ಎಂದು ಟೀಕಿಸಿದರು.

'ಆರ್ಟಿಕಲ್ 371ಜೆ' ಜಾರಿಯಾಗಲೂ ಯಾರು ಕಾರಣಕರ್ತರು ಎನ್ನುವ ಬಗ್ಗೆ ಬೇರೆ ಬೇರೆ ಮಾತನಾಡುತ್ತಾರೆ. ಆದರೆ, ಸಂಸತ್ತಿನಲ್ಲಿ ಎಲ್ಲ‌ ವಿವರವನ್ನು ದಾಖಲಿಸಿದ್ದರೆ ಅಲ್ಲಿ ಎಲ್ಲರ ಹಣೆಬರಹ ತಿಳಿಯಲಿದೆ ಎಂದರು. ವಿಶೇಷ ಸ್ಥಾನಮಾನ ಸಿಕ್ಕ‌ ನಂತರ ಈ ಭಾಗದ ಬಡ ಮಕ್ಕಳು ಡಾಕ್ಟರ್ ಇಂಜೀನಿಯರ್ ಆಗಿದ್ದಾರೆ. ಇದಕ್ಕೆ ಕಾರಣ ಯಾರು? ನಾವು ಹೋರಾಟ ಮಾಡಿದ್ದರಿಂದಲೇ ಸಾಧ್ಯವಾಗಿದೆ ಎಂದರು.

ಇಡೀ‌ ದೇಶದಲ್ಲಿಯೇ ಕರ್ನಾಟಕ ಹೊರತುಪಡಿಸಿ ಬೇರೆ ಯಾವ ರಾಜ್ಯದಲ್ಲಿಯೂ ಕೂಡಾ ಗ್ರಾಮಪಂಚಾಯತಿ ಸದಸ್ಯರಿಗೆ ವಿಧಾನಪರಿಷತ್ ಅಭ್ಯರ್ಥಿಗೆ ಮತದಾನದ ಹಕ್ಕು ನೀಡಿಲ್ಲ. ಆದರೆ ಕಾಂಗ್ರೆಸ್ ಪಕ್ಷದವರು ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಗ್ರಾಮಪಂಚಾಯತಿ ಸದಸ್ಯರಿಗೆ ಮತದಾನದ ಹಕ್ಕು ಕೊಡಿಸಿದ್ದೇವೆ ಇದು ಇತಿಹಾಸವಾಗಿ ಉಳಿದಿದೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ ಪಾಟೀಲರ ಅನುಭವವನ್ನು‌ ಕೊಂಡಾಡಿದ ಖರ್ಗೆ ಅವರು ಈ ಹಿಂದಿನ‌ ಇತಿಹಾಸ ತೆಗೆದು‌‌ ನೋಡಿದರೆ ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮಾನ್ಯ ಕಾರ್ಯಕರ್ತರಿಗೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿದೆ. ಆಗಲೂ ಕೂಡಾ ಹಣವಂತರೆ ನಮ್ಮ ವಿರುದ್ದ ಸ್ಪರ್ಧಿಸಿದ್ದರು. ಆದರೆ ಪಕ್ಷ ಒಂದಾಗಿ ಸಂಘಟನೆಯೊಂದಿಗೆ ಕೆಲಸ ಮಾಡಿ ಗೆದ್ದಿದ್ದೇವೆ ಈಗಲೂ ಕೂಡಾ‌ ಶಿವಾನಂದ ಪಾಟೀಲನಂತ ಸಮಾನ್ಯ ಕಾರ್ಯಕರ್ತ ಅಭಿವೃದ್ದಿ ತುಡಿತ ಇರುವ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ತನ್ನ ಅಧಿಕಾರಲ್ಲಿರುವಷ್ಟು ವರ್ಷ ನೀರಾವರಿ‌ ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಒತ್ತು ನೀಡಿದೆ. ನರೇಗಾ, ಆಹಾರ ಭದ್ರತೆ, ಉಚಿತ ಶಿಕ್ಷಣದಂತ ಗಮನಾರ್ಹ‌ ಯೋಜನೆಗಳನ್ನು ಕಾಂಗ್ರೆಸ್ ಜಾರಿಗೊಳಿದೆ. ಆದರೆ, ಬಿಜೆಪಿ ಅಧಿಕಾರಕ್ಕೆ ಅಭಿವೃದ್ದಿ ಕಾರ್ಯಗಳಿಗೆ ತೀಲಾಂಜಲಿ‌ ನೀಡಿದೆ ಎಂದು ಟೀಕಿಸಿದರು.

ಪ್ರತ್ಯೇಕ ರೇಲ್ವೆ ವಲಯ, ಜವಳಿ ಪಾರ್ಕ್, ಮುಂತಾದ ಯೋಜನೆಗಳನ್ನು ಮಂಜೂರು ಮಾಡಿದ್ದರೂ ಕೂಡಾ ನನ್ನ ವಿರುದ್ದ ಮಸಲತ್ತು ನಡೆಸಿದ ಮೋದಿ ಶಾ ಸೋಲಿಸಿದರು. ನೀವೆಲ್ಲ ನನ್ನ ಅಂದಿನ ಸೋಲಿಗೆ ಸೇಡಿಗೆ ಇಂದು ಶಿವಾನಂದ ಪಾಟೀಲ್ ರನ್ನು ಗೆಲ್ಲಿಸುವ ಮೂಲಕ ಅಭಿವೃದ್ದಿಗೆ ಸಹಕರಿಸಿ ಎಂದು ಮನವಿ ಮಾಡಿದರು.

ಬಿಜೆಪಿ ಏನು ಸಾಧನೆ ಮಾಡಿ‌ದೆ ಎಂದು ಓಟು‌ ಕೊಡಬೇಕು? ಅಡುಗೆ ಅನಿಲ, ಡಿಸೇಲ್ ಪೆಟ್ರೋಲ್‌ಬೆಲೆ ಏರಿಸಿದ್ದಕ್ಕೆ ಓಟು ಕೊಡಬೇಕಾ? ದಿನಬಳಕೆ ವಸ್ತುಗಳ ಬೆಲೆ ಏರಿಸಿದ್ದಕ್ಕೆ ಓಟು‌‌ ಕೊಡಬೇಕಾ? ಕೇಂದ್ರದ‌ ಸುಳ್ಳಿನ ಸರದಾರನ‌ ಆಡಳಿತದಿಂದ ಜನರು ಸಂಕಷ್ಟದಲ್ಲಿದ್ದಾರೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.‌

ಶಾಸಕರಾದ ಕನೀಝ್ ಫಾತಿಮಾ ಹಾಗೂ ವಿಜಯಕುಮಾರ್ ರಾಮಕೃಷ್ಣ ಮಾತನಾಡಿದರು. ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಶಾಸಕರಾದ ಅಜಯಸಿಂಗ್, ಮಾಜಿ‌ ಸಚಿವರಾದ ಶರಣಪ್ರಕಾಶ ಪಾಟೀಲ್, ಬಾಬುರಾವ ಚವ್ಹಾಣ, ಮಾಜಿ ಎಂ ಎಲ್‌ಸಿ ಅಲ್ಲಮಪ್ರಭು ಪಾಟೀಲ್, ಮಾಜಿ ಶಾಸಕರಾದ‌ ಬಿ ಆರ್ ಪಾಟೀಲ್, ವಿಜಯಕುಮಾರ್ ರಾಮಕೃಷ್ಣ, ಸುಭಾಷ್ ರಾಠೋಡ, ಭೀಮರೆಡ್ಡಿ ಪಾಟೀಲ್‌ ಕುರಕುಂದಾ, ಸೈಯದ್ ಅಹಮದ್, ಲತಾ ರಾಠೋಡ, ನೀಲಕಂಠರಾವ್ ಮುಲಗೆ, ಪ್ರವೀಣ ಹರವಾಳ, ಬಾಬಾಖಾನ್, ಕಿರಣ್ ದೇಶಮಖ್, ಮಜರ್ ಹುಸೇನ್, ಫಾರೂಕ್ ಸೇಠ್, ರಾಜೀವ್ ಜಾನೆ ಹಾಗೂ ಮತ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X