Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಅಂಬೇಡ್ಕರ್ ಪ್ರತಿಮೆ ತೆರವಿಗೆ...

ಮೈಸೂರು: ಅಂಬೇಡ್ಕರ್ ಪ್ರತಿಮೆ ತೆರವಿಗೆ ವಿರೋಧ; ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ವಾರ್ತಾಭಾರತಿವಾರ್ತಾಭಾರತಿ4 Dec 2021 12:11 PM IST
share
ಮೈಸೂರು: ಅಂಬೇಡ್ಕರ್ ಪ್ರತಿಮೆ ತೆರವಿಗೆ ವಿರೋಧ; ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮೈಸೂರು: ನಗರದ ಪಡುವಾರಹಳ್ಳಿಯ ಮಾತೃಮಂಡಳಿ ವೃತ್ತದಲ್ಲಿ ರಾತ್ರೋ ರಾತ್ರಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಿದ್ದನ್ನು ನಗರಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ ಹಿನ್ನಲೆಯಲ್ಲಿ ಅಭಿಮಾನಿ ಯುವಕನೊಬ್ಬ ಕತ್ತು ಕುಯ್ದುಕೊಂಡು  ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ ದಲಿತ ಸಂಘಟನೆಗಳು ಸೇರಿದಂತೆ ಪಡುವಾರಹಳ್ಳಿ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪಡುವಾರಹಳ್ಳಿಯ ಅಂಬೇಡ್ಕರ್ ಯುವಕರ ಸಂಘ ಹಾಗೂ ವಿನಾಯಕ ಗರಳೆಯರ ಬಳಗದ ಸದಸ್ಯರುಗಳು ಡಿ.6 ರಂದು ಅಂಬೇಡ್ಕರ್ ಪರಿನಿಬ್ಬಾಣ  ದಿನದ ಅಂಗವಾಗಿ ಮಾತೃಮಂಡಳಿ ವೃತ್ತದಲ್ಲಿ  ಶುಕ್ರವಾರ ತಡರಾತ್ರಿ ಕಂಚಿನ ಎಂಟು ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪನೆ ಮಾಡಿದ್ದರು. ವಿಷಯ ತಿಳಿದ ನಗರಪಾಲಿಕೆ ಅಧಿಕಾರಿಗಳು ಪೊಲೀಸರೊಂದಿಗೆ ಆಗಮಿಸಿ ಅನುಮತಿ ಪಡೆಯದೆ ಹೀಗೆ ಏಕಾ ಏಕಿ ಪ್ರತಿಮೆ ನಿರ್ಮಾಣ ಮಾಡುವುದು ಸರಿಯಲ್ಲ ಎಂದು ಪ್ರತಿಮೆಯನ್ನು ತೆರವುಗೊಳಿಸಿದರು. ಈ ವೇಳೆ ವಿರೋಧ ವ್ಯಕ್ತಪಡಿಸಿದ ರಾಜೇಶ್ ಎಂಬ ಯುವಕ ಬ್ಲೇಡ್ ನಿಂದ ತನ್ನ ಕತ್ತನ್ನು ಕುಯ್ದುಕೊಂಡು ಆತ್ಮಹತ್ಯೆಗೆ  ಯತ್ನಿಸಿದ್ದಾನೆ.‌ ತಕ್ಷಣ ಯುವಕನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಇದರಿಂದ ರೊಚ್ಚಿಗೆದ್ದ ಯವಕರುಗಳು ಮತ್ತು ಗ್ರಾಮಸ್ಥರು ನಗರಪಾಲಿಕೆ ಅಧಿಕಾರಿಗಳ ಕ್ರಮವನ್ನು ಖಂಡಿಸಿ ವಿವಿಧ ದಲಿತ ಸಂಘಟನೆಗಳೊಡಗೂಡಿ ಪ್ರತಿಭಟನೆ ಕುಳಿತಿದ್ದಾರೆ. 

ಇದೇ ವೇಳೆ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ಮಾತೃಮಂಡಳಿ ಬಳಿ ಇರುವ ಈ ವೃತ್ತವನ್ನು ಕಳೆದ 12 ವರ್ಷಗಳಿಂದಕೂ ಅಂಬೇಡ್ಕರ್ ವೃತ್ತ ಮಾಡಬೇಕೆಂದು ಇಲ್ಲಿನ ಯವಕರು ಸಂಬಂಧಪಟ್ಟವರಿಗೆ ಮನವಿ ಮಾಡುತ್ತಿದ್ದಾರೆ. ಆದರೆ ಯಾರೂ ಇದರ ಬಗ್ಗೆ ಗಮನಹರಿಸಲಿಲ್ಲ, ಹಾಗಾಗಿ ಡಿ.6 ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ ಬರುತ್ತಿರುವುದರಿಂದ ಇಲ್ಲಿನ ಯುವಕರು ಮತ್ತು ಗ್ರಾಮಸ್ಥರು ಅವರ ಸ್ವಂತ ಹಣದಿಂದ ಎಂಟು ಅಡಿ ಕಂಚಿನಿಂದ ಮಾಡಿಸಲಾದ ಪ್ರತುಮೆಯನ್ನು ನಿಲ್ಲಿಸಿದ್ದಾರೆ. ಇದು ಮಹಾಪರಾಧ ಎನ್ನುವಂತೆ ಪಾಲಿಕೆ ಅಧಿಕಾರಿಗಳು ಏಕಾ ಏಕಿ ಅಂಬೇಡ್ಕರ್ ಪ್ರತಿಮೆಯನ್ನು ತೆರವುಗೊಳಿಸಿರುವುದು ಅತ್ಯಂತ ಖಂಡನೀಯ ಎಂದರು.

ಅನುಮತಿ ಪಡೆದಿಲ್ಲ ಎಂದು ಅಂಬೇಡ್ಕರ್ ಪ್ರತಿಮೆ ತೆರವುಗೊಳಿಸುವುದಾದರೆ ಮೈಸೂರಿನಲಲ್ಲಿ ನಿರ್ಮಾಣ ಮಾಡಲಾಗಿರುವ ಎಲ್ಲಾ ಪ್ರತಿಮೆಗಳಿಗೂ ಅನುಮತಿ ಪಡೆಯಲಾಗಿದಿಯೇ? ಇದೇ ಪಡುವಾರಹಳ್ಳಿ ಸೇರಿದಂತೆ ಮೈಸೂರಿನ ಅನೇಕ ಕಡೆಗಳಲ್ಲಿ ಇತ್ತೀಚೆಗೆ ಹಾಕಲಾಗಿರುವ ನಾಲ್ಕು ಪ್ರತಿಮೆಗಳಿಗೆ ಅನುಮತಿಯೇ ಪಡೆದಿಲ್ಲ, ಹಾಗಿದ್ದ ಮೇಲೆ ಅವುಗಳನ್ನು ಏಕೆ ತೆರವುಗೊಳಿಸಲಿಲ್ಲ ಎಂದು ಪ್ರಶ್ನಿಸಿದರು.

ದಲಿತರು ಎಂದರೆ ಒಂದುತರಹ ಇತರೆ ವರ್ಗ ಎಂದರೆ ಮತ್ತೊಂದು ತರಹ, ಇಂತಹ ತಾರತಮ್ಯದಿಂದಲೇ ನಮ್ಮ ಹಕ್ಕನ್ನು ಚಕಾಯಿಸಲು ಇಲ್ಲಿನ ಯುವಕರು ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಿದ್ದರು ಎಂದು ಹೇಳಿದರು.

ನಮಗೆ ಈ ಕೂಡಲೇ ಅಂಬೇಡ್ಕರ್ ಪ್ರತಿಮೆಯನ್ನು ವಾಪಸ್ ತಂದುಕೊಡಬೇಕು ಎಂದು ಪಟ್ಟು ಹಿಡಿದು ಪ್ರತಿಮೆ ನಿರ್ಮಾಣ ಮಾಡಿದ ಸ್ಥಳದಲ್ಲೇ ಧರಣಿ ಕುಳಿತರು.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಳ್ಳುತ್ತಿರುವುದನ್ನು ಅರಿತ ಪೊಲೀಸರು ಹೆಚ್ಚಿನ ಸಿಬ್ಬಂಧಿಗಳನ್ನು ಸ್ಥಳಕ್ಕೆ ನಿಯೋಜಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಶಾಸಕ ಎಲ್.ನಾಗೇಂದ್ರ ಪ್ರತಿಭಟನಾಕಾರರ ಮನವೊಲಿಸುವ  ಪ್ರಯತ್ನ ಮಾಡಿದರು. ನೀವು ಪ್ರತಿಮೆ ನಿರ್ಮಾಣ ಮಾಡಿರುವ ಜಾಗದಲ್ಲೇ ಪ್ರತಿಮೆ ನಿರ್ಮಾಣ ಮಾಡಿಸುತ್ತೇನೆ.‌ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಅನುಮತಿ ಪಡೆದು ನಂತರ ನಾನೇ ನಿಮ್ಮೊಂದಿಗೆ ಸೇರಿಕೊಂಡು ಪ್ರತಿಮೆ ನಿರ್ಮಾಣ ಮಾಡಿಸುತ್ತೇನೆ ಎಂಬ ಭರವಸೆ ಮೇರೆಗೆ ಪ್ರತಿಭಟನಾಕಾರರು ಒಪ್ಪಿಗೆ ಸೂಚಿಸಿದರು.

ತಕ್ಷಣ ಪಾಲಿಕೆ ಅಧಿಕಾರಿಗಳಿಗರ ದೂರವಾಣಿ ಕರೆ ಮಾಡಿ ಅಂಬೇಡ್ಕರ್ ಪ್ರತಿಮೆಯನ್ನು ವಾಪಾಸ್ ತಂದುಕೊಡುವಂತೆ ಆದೇಶಿದ ನಂತರ ಪಾಲಿಕೆ ಅಧಿಕಾರಿಗಳು ಪ್ರತಿಮೆಯನ್ನು ತಂದುಕೊಟ್ಟಿದ್ದಾರೆ.

ಇದೀಗ ಪ್ರತಿಭಟನಾಕಾರರು ಸ್ಥಳದಿಂದ ನಿರ್ಗಮಿಸಿದ್ದು, ಪ್ರತಿಮೆ ನಿರ್ಮಾಣದ ಕುರಿತು ಅಂಬೇಡ್ಕರ್ ಭವನದಲ್ಲಿ ಸಭೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ದಲಿತ ಮುಖಂಡರುಗಳಾದ ಸಿದ್ದರಾಜು ಸೋಸಲೆ, ದಸಂಸ ಮುಖಂಡ ಚೋರನಹಳ್ಳಿ ಶಿವಣ್ಣ ಮಹದೇವು ಸೇರಿದಂತೆ ನೂರಾರು ಮಂದಿ ಭಾಗವಹಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X