Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ: ಎರಡು ದಿನಗಳಿಂದ...

ಉತ್ತರ ಪ್ರದೇಶ: ಎರಡು ದಿನಗಳಿಂದ ಕಾಣೆಯಾಗಿದ್ದ ಬಾಲಕಿಯ ಮೃತದೇಹ ನೆರೆಮನೆಯಲ್ಲಿ ಟ್ರಂಕ್‌ನಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ4 Dec 2021 9:15 PM IST
share
ಉತ್ತರ ಪ್ರದೇಶ: ಎರಡು ದಿನಗಳಿಂದ ಕಾಣೆಯಾಗಿದ್ದ ಬಾಲಕಿಯ ಮೃತದೇಹ ನೆರೆಮನೆಯಲ್ಲಿ ಟ್ರಂಕ್‌ನಲ್ಲಿ ಪತ್ತೆ

ಲಕ್ನೋ, ಡಿ.4: ಪಶ್ಚಿಮ ಉತ್ತರ ಪ್ರದೇಶದ ಹಾಪುರ್ ಪಟ್ಟಣದ ತನ್ನ ಮನೆಯಿಂದ ಗುರುವಾರ ಸಂಜೆ ನಾಪತ್ತೆಯಾಗಿದ್ದ ಆರರ ಹರೆಯದ ಬಾಲಕಿಯ ಶವವು ಶನಿವಾರ ಬೆಳಿಗ್ಗೆ ನೆರೆಮನೆಯಲ್ಲಿ ಟ್ರಂಕೊಂದರಲ್ಲಿ ಪತ್ತೆಯಾಗಿದೆ.

ಇದು ಅತ್ಯಾಚಾರ ಪ್ರಕರಣವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಹಾಪುರ್ ಎಸ್‌ಪಿ ಸರ್ವೇಶ ಕುಮಾರ ಮಿಶ್ರಾ ಅವರು,ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು,ವರದಿ ಬಂದ ಬಳಿಕವೇ ಅತ್ಯಾಚಾರ ನಡೆದಿದೆಯೇ ಎನ್ನುವುದು ದೃಢಪಡಬೇಕಿದೆ ಎಂದು ಉತ್ತರಿಸಿದರು.

‘ಬಾಲಕಿ ನಾಪತ್ತೆಯಾದ ಬಗ್ಗೆ ಶುಕ್ರವಾರ ದೂರು ದಾಖಲಾಗಿತ್ತು. ಇಂದು ಬೆಳಿಗ್ಗೆ ನೆರೆಮನೆಯಿಂದ ದುರ್ನಾತ ಬರುತ್ತಿದೆ ಎಂಬ ಮಾಹಿತಿ ನಮಗೆ ಲಭಿಸಿತ್ತು. ಪೊಲೀಸರ ತಂಡವು ಅಲ್ಲಿಗೆ ತೆರಳಿದಾಗ ಮನೆಗೆ ಬೀಗ ಹಾಕಲಾಗಿತ್ತು. ಬೀಗ ಮುರಿದು ಒಳಪ್ರವೇಶಿಸಿದಾಗ ಟ್ರಂಕೊಂದರಲ್ಲಿ ಕೆಲವು ಬಟ್ಟೆಗಳೊಂದಿಗೆ ಬಾಲಕಿಯ ಶವವು ಪತ್ತೆಯಾಗಿತ್ತು. ನಾವು ಎಲ್ಲ ಕೋನಗಳಿಂದಲೂ ತನಿಖೆಯನ್ನು ನಡೆಸುತ್ತಿದ್ದೇವೆ’ ಎಂದರು.

ಮೃತದೇಹ ಪತ್ತೆಯಾಗಿದ್ದ ಮನೆಯ ಮಾಲಿಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪೊಲೀಸರು ಆತನನ್ನು ಕರೆದೊಯ್ಯುತ್ತಿರುವಾಗ ಉದ್ರಿಕ್ತ ಗುಂಪೊಂದು ಆತನ ಮೇಲೆ ದಾಳಿ ನಡೆಸಿತ್ತು. ಗುಂಪು ಆತನನ್ನು ಕೊಲ್ಲುವ ಮೊದಲೇ ಆತನ ಸುತ್ತ ಭದ್ರತಾ ಕವಚವನ್ನು ರಚಿಸಿದ ಪೊಲೀಸರು ಆತನನ್ನು ಸುರಕ್ಷಿತವಾಗಿ ಕರೆದೊಯ್ದ ದೃಶ್ಯಗಳು ವೀಡಿಯೊಗಳಲ್ಲಿ ದಾಖಲಾಗಿವೆ.

ಗುರುವಾರ ಸಂಜೆ 5:30ರ ಸುಮಾರಿಗೆ ಮಗಳು ತನ್ನಿಂದ ಐದು ರೂ.ಪಡೆದುಕೊಂಡು ತಾನು ಏನನ್ನೋ ಖರೀದಿಸಬೇಕು ಎಂದು ಹೇಳಿ ಮನೆಯಿಂದ ಹೊರಬಿದ್ದವಳು ವಾಪಸ್ ಬಂದಿರಲಿಲ್ಲ. ರಾತ್ರಿಯಿಡೀ ಹುಡುಕಾಡಿದ ಬಳಿಕ ಶುಕ್ರವಾರ ಬೆಳಿಗ್ಗೆ ಪೊಲೀಸ್ ದೂರು ದಾಖಲಿಸಿದ್ದೆವು ಮತ್ತು ಇಡೀ ದಿನ ಹುಡುಕಾಟ ಮುಂದುವರಿಸಿದ್ದೆವು ಎಂದು ತಿಳಿಸಿದ ಬಾಲಕಿಯ ತಂದೆ,ಪ್ರದೇಶದಲ್ಲಿಯ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ನೆರೆಮನೆಯಾತ ಬೈಕ್‌ನಲ್ಲಿ ತನ್ನ ಮಗಳನ್ನು ಕರೆದೊಯ್ದಿದ್ದು ಮತ್ತು ನಂತರ ಆಕೆಯನ್ನು ತನ್ನ ಮನೆಯೊಳಗೆ ಒಯ್ದಿದ್ದು ಕಂಡು ಬಂದಿತ್ತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X