Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಮೈಕ್ರಾನ್‌ನಿಂದ ಸಾವು ಸಂಭವಿಸಿದ ಯಾವುದೇ...

ಒಮೈಕ್ರಾನ್‌ನಿಂದ ಸಾವು ಸಂಭವಿಸಿದ ಯಾವುದೇ ಪ್ರಕರಣ ವರದಿಯಾಗಿಲ್ಲ: ವಿಶ್ವ ಆರೋಗ್ಯ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ4 Dec 2021 11:42 PM IST
share
ಒಮೈಕ್ರಾನ್‌ನಿಂದ ಸಾವು ಸಂಭವಿಸಿದ ಯಾವುದೇ ಪ್ರಕರಣ ವರದಿಯಾಗಿಲ್ಲ: ವಿಶ್ವ ಆರೋಗ್ಯ ಸಂಸ್ಥೆ

ನ್ಯೂಯಾರ್ಕ್, ಡಿ.4: ಒಮೈಕ್ರಾನ್ ಪ್ರಭೇದದ ಕೋವಿಡ್19 ವೈರಸ್ ಜಗತ್ತಿನಾದ್ಯಂತ ಈವರೆಗೆ ಕನಿಷ್ಠ 38 ದೇಶಗಳಲ್ಲಿ ಪತ್ತೆಯಾಗಿದೆ. ಆದರೆ, ಈವರೆಗೆ ಈ ವೈರಸ್ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲವೆಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಆದಾಗ್ಯೂ ಒಮೈಕ್ರಾನ್ ವೈರಸ್ ಜಾಗತಿಕ ಆರ್ಥಿಕತೆಗೆ ಭಾರೀ ಹಾನಿಯುಂಟು ಮಾಡಬಹುಂದು ಅದು ಎಚ್ಚರಿಕೆ ನೀಡಿದೆ.

ಅಮೆರಿಕ ಹಾಗೂ ಆಸ್ಟ್ರೇಲಿಯ ದೇಶದಲ್ಲೂ ಒಮೈಕ್ರಾನ್ ವೈರಸ್ ಸೋಂಕು ಹರಡುತ್ತಿರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕದಲ್ಲಿ ಸೋಂಕು ಪೀಡಿತರ ಸಂಖ್ಯೆ 30 ಲಕ್ಷವನ್ನು ದಾಟಿದೆ. ಒಮೈಕ್ರಾನ್ ಸೋಂಕಿತರಲ್ಲಿ ತೀವ್ರ ಅನಾರೋಗ್ಯವನ್ನು ಉಂಟು ಮಾಡುವುದೇ ಅಥವಾ ಈ ಇರುವ ಲಸಿಕೆಗಳು ಸೋಂಕಿನ ವಿರುದ್ಧ ಪರಿಣಾಮಕಾರಿಯೇ ಎಂಬುದನ್ನು ನಿರ್ಧರಿಸಲು ಕೆಲವೇ ವಾರಗಳು ಬೇಕಾಗಬಹುದೆಂದು ಡಬ್ಲು ಎಚ್‌ಓ ಎಚ್ಚರಿಕೆ ನೀಡಿದೆ.

ಒಮೈಕ್ರಾನ್‌ಗೆ ಸಂಬಂಧಿಸಿದ ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿರುವುದು ತನ್ನ ಗಮನಕ್ಕೆ ಬಂದಿಲ್ಲವೆಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ತಿಳಿಸಿದೆ. ಆದರೆ ವೈರಸ್ ಹರಡುವಿಕೆಯ ವೇಗವನ್ನು ಗಮನಿಸಿದಾಗ ಮುಂದಿನ ಕೆಲವು ತಿಂಗಳುಗಳಲ್ಲಿ ಯುರೋಪ್‌ನ ಅರ್ಧದಷ್ಟು ಕೋವಿಡ್ ಪ್ರಕರಣಗಳಿಗೆ ಒಮೈಕ್ರಾನ್ ಕಾರಣವಾಗಲಿದೆ ಎಂದು ಡಬ್ಲುಎಚ್‌ಓ ತಿಳಿಸಿದೆ.ಡೆಲ್ಟಾ ಹಾಗೂ ಬೇಟಾ ಪ್ರಭೇದದ ಕೊರೋನಾ ವೈರಸ್‌ಗೆ ಹೋಲಿಸಿದರೆ ಒಮೈಕ್ರಾನ್‌ನಿಂದ ಸೋಂಕು ಸಂಭವಿಸುವ ಸಾಧ್ಯತೆ ಮೂರು ಪಟ್ಟು ಅಧಿಕವಾಗಿದೆ ಎಂದು ದಕ್ಷಿಣ ಆಫ್ರಿಕದ ವಿಜ್ಞಾನಿಗಳು ನಡೆಸಿದ ಪ್ರಾಥಮಿಕ ಅಧ್ಯಯನ ವರದಿ ತಿಳಿಸಿದೆ.

ಈ ಮಧ್ಯೆ ಕೆನಡದಲ್ಲಿಯೂ ಒಮೈಕ್ರಾನ್ ಪ್ರಭೇದದ ಒಟ್ಟು 15 ಪ್ರಕರಣಗಳು ವರದಿಯಾಗಿವೆ. ಸೋಂಕಿತರೆಲ್ಲರೂ ಇತ್ತೀಚೆಗೆ ವಿದೇಶಕ್ಕೆ ಪ್ರಯಾಣಿಸಿದವರಾಗಿದ್ದಾರೆಂದು ಕೆನಡಾದ ಮುಖ್ಯ ಸಾರ್ವಜನಿಕ ಆರೋಗ್ಯ ಅಧಿಕಾರಿ ಥೆರೆಸಾ ಟ್ಯಾಮ್ ತಿಳಿಸಿದ್ದಾರೆ. ಈ ಮಧ್ಯೆ ಕೆನಡದ ಯಾರ್ಕ್ ನಗರದ 12 ವರ್ಷದ ಮಗುವಿಗೆ ಒಮೈಕ್ರಾನ್ ಸೋಂಕು ತಗಲಿರುವುದು ವರದಿಯಾಗಿದೆ.

ಈ ಮಗುವು ಇತ್ತೀಚೆಗೆ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣಿಸಿತ್ತು. ಟೊರೋಂಟೊದಲ್ಲಿ ಒಮೈಕ್ರಾನ್‌ನ ಮೂರು ಪ್ರಕರಣಗಳು ಶುಕ್ರವಾರ ವರದಿಯಾಗಿವೆ. ಸೋಂಕಿತರಲ್ಲಿ ಇಬ್ಬರು ಇತ್ತೀಚೆಗೆ ನೈಜೀರಿಯದಿಂದ ವಾಪಸಾದವರಾಗಿದ್ದಾರೆ. ಇನ್ನೋರ್ವವ್ಯಕ್ತಿ ಸ್ವಿಟ್ಜರ್‌ಲ್ಯಾಂಡ್‌ನಿಂದ ವಾಪಾಸಾಗಿದ್ದಾರೆ.

ಯುರೋಪ್‌ನಲ್ಲಿ ಡೆಲ್ಟಾ ಸೋಂಕಿತರ ಸಂಖ್ಯೆ ಹೆಚ್ಚಳ:

ಮಲೇಶ್ಯದಲ್ಲಿ ದಕ್ಷಿಣ ಆಫ್ರಿಕದಿಂದ ನವೆಂಬರ್ 19ರಂದು ಆಗಮಿಸಿದ ವಿದೇಶಿ ವಿದ್ಯಾರ್ಥಿಯೊಬ್ಬನಲ್ಲಿ ಒಮಿಕ್ರಾನ್ ವೈರಸ್ ಪತ್ತೆಯಾಗಿದೆ. ಈ ಮಧ್ಯೆ ಯುರೋಪ್‌ನಲ್ಲಿ ಡೆಲ್ಟಾ ಸೋಂಕಿನ ಪ್ರಕರಣಗಳಲ್ಲಿ ಭಾರೀ ಹೆಚ್ಚಳವಾಗಿದ್ದು ಯುರೋಪ್ ಒಕ್ಕೂಟದ ಸರಕಾರಗಳು ಮಾಸ್ಕ್ ಧಾರಣೆ, ಸುರಕ್ಷಿತ ಅಂತರ ಪಾಲನೆ, ಲಾಕ್‌ಡೌನ್ ಅಥವಾ ಕರ್ಫ್ಯೂ ಹೇರಿಕೆಗೆ ಮುಂದಾಗಿವೆ ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X