Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ಮೇಲೆ ಆಕ್ರಮಣಕ್ಕೆ ರಶ್ಯ ಸಂಚು:...

ಉಕ್ರೇನ್ ಮೇಲೆ ಆಕ್ರಮಣಕ್ಕೆ ರಶ್ಯ ಸಂಚು: ವಾಶಿಂಗ್ಟನ್ ಪೋಸ್ಟ್ ವರದಿ

ಗಡಿಯಲ್ಲಿ 1.75 ಲಕ್ಷ ರಶ್ಯನ್ ಸೈನಿಕರ ನಿಯೋಜನೆ; ಫಿರಂಗಿದಳ, ಯುದ್ಧಟ್ಯಾಂಕ್‌ಗಳ ಜಮಾವಣೆ

ವಾರ್ತಾಭಾರತಿವಾರ್ತಾಭಾರತಿ5 Dec 2021 12:40 AM IST
share

ವಾಶಿಂಗ್ಟನ್, ಡಿ.4: ರಶ್ಯವು ಮುಂದಿನ ವರ್ಷ ತನ್ನ ನೆರೆಯ ರಾಷ್ಟ್ರವಾದ ಉಕ್ರೇನ್ ವಿರುದ್ಧ 1.75 ಲಕ್ಷ ಸೈನಿಕರನ್ನು ಒಳಗೊಂಡ ಬಹುಮುಂಚೂಣಿಯ ಆಕ್ರಣಮಣವನ್ನು ನಡೆಸುವ ಸಂಚನ್ನು ಹೂಡಿದೆಯೆಂದು ‘ದಿ ವಾಶಿಂಗ್ಟನ್ ಪೋಸ್ಟ್’ ಪತ್ರಿಕೆ ಶುಕ್ರವಾರ ವರದಿ ಮಾಡಿದೆ. ಮುಂದಿನ ತಿಂಗಳು ತನ್ನ ವಿರುದ್ಧ ಬೃಹತ್ ಪ್ರಮಾಣದ ಆಕ್ರಮಣ ನಡೆಸಲು ರಶ್ಯವು ಯೋಜಯೊಂದನ್ನು ಹಮ್ಮಿಕೊಂಡಿದೆಯೆಂದು ಉಕ್ರೇನ್ ಕೂಡಾ ವಿಶ್ವಸಮುದಾಯವನ್ನು ಎಚ್ಚರಿಸಿದೆ.

1.75 ಲಕ್ಷಕ್ಕೂ ಅಧಿಕ ಸಿಬ್ಬಂದಿಯನ್ನು ಒಳಗೊಂಡ 100 ಬೆಟಾಲಿಯನ್ ವ್ಯೂಹಾತ್ಮಕ ಸೇನಾತಂಡಗಳನ್ನು ಒಳಗೊಂಡಂದತೆ, ಶಸ್ತ್ರಾಸ್ತ್ರ, ಕವಚಾವೃತ ವಾಹನ ಹಾಗೂ ಅತ್ಯಾಧುನಿಕ ಉಪಕರಣಗಳಿಂದ ಜೊತೆ ಬೃಹತ್ ಸೇನಾ ಸಂಚಲನವನ್ನು ನಡೆಸುವ ಯೋಜನೆಯನ್ನು ರಶ್ಯ ಹಮ್ಮಿಕೊಂಡಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಮೆರಿಕ ಆಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವರದಿಗಳ ಬಗ್ಗೆ ಎಎಫ್‌ಪಿ ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಪೆಂಟಾಗನ್ ವಕ್ತಾರರು ತಾನು ಬೇಹುಗಾರಿಕಾ ವಿಷಯಗಳ ಬಗ್ಗೆ ಬಹಿರಂಗವಾಗಿ ಪ್ರತಿಕ್ರಿಯಿಸುವುದಿಲ್ಲವೆಂದು ತಿಳಿಸಿದರು. ಆದರೆ ರಶ್ಯವು ಉಕ್ರೇನ್ ವಿರುದ್ಧ ಕಾರ್ಯಾಚರಣೆ ನಡೆಸಲು ಯೋಜನೆಯನ್ನು ಹಮ್ಮಿಕೊಂಡಿರುವುದಕ್ಕೆ ಪುರಾವೆಗಳು ದೊರೆತಿದ್ದು, ಇದು ಆತಂಕಕಾರಿಯಾಗಿದೆ ಎಂದು ಪೆಂಟಾಗನ್‌ವಕ್ತಾರ ಲೆಫ್ಟಿನೆಂಟ್ ಕರ್ನಲ್ ಟೋನಿ ಸೆಮೆಲ್‌ರೋಥ್ ತಿಳಿಸಿದ್ದಾರೆ.

ಪ್ರಸಕ್ತ ಉಕ್ರೇನ್ ಗಡಿಯಲ್ಲಿ ರಶ್ಯದ ಪಡೆಗಳು ನಾಲ್ಕು ಗಡಿಬಿಂದುಗಳಲ್ಲಿ ಜಮಾವಣೆಗೊಂಡಜಿವೆ. ಟ್ಯಾಂಕುಗಳು ಹಾಗೂ ಫಿರಂಗಿದಳದ ಜೊತೆಗೆ 50 ಸಮರತಂತ್ರಗಾರಿಕೆಯ ಸೈನಿಕ ತಂಡಗಳನ್ನು ನಿಯೋಜಿಸಿದೆ ಎಂದು ವಾಶಿಂಗ್ಟನ್ ಪೋಸ್ಟ್ ಅಮೆರಿಕದ ಬೇಹುಗಾರಿಕಾ ದಾಖಲೆಪತ್ರವೊಂದನ್ನು ಉಲ್ಲೇಖಿಸಿ ವರದಿ ಮಾಡಿದೆ.

2014ರಲ್ಲಿ ರಶ್ಯವು ಉಕ್ರೇನ್‌ನಿಂದ ಕ್ರಿಮಿಯಾವನ್ನು ವಶಪಡಿಸಿಕೊಂಡಿತ್ತು ಹಾಗೂ ಆವಾಗಿನಿಂದ ಅದು ಉಕ್ರೇನ್‌ನ ಪೂರ್ವ ಭಾಗದಲ್ಲಿ ಸಕ್ರಿಯವಾಗಿರುವ ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುತ್ತಾ ಬಂದಿದೆ. ಉಕ್ರೇನ್ ಹಾಗೂ ಪ್ರತ್ಯೇಕತಾವಾದಿಳ ನಡುವಿನ ಈ ಸಂಘರ್ಷದಲ್ಲಿ 13 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X