Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವ ಸಾಹಿತಿ ಮುದ್ದು ತಿರ್ಥಹಳ್ಳಿಗೆ...

ಯುವ ಸಾಹಿತಿ ಮುದ್ದು ತಿರ್ಥಹಳ್ಳಿಗೆ ಸಾಹಿತ್ಯ ಪುರಸ್ಕಾರ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ5 Dec 2021 7:35 PM IST
share
ಯುವ ಸಾಹಿತಿ ಮುದ್ದು ತಿರ್ಥಹಳ್ಳಿಗೆ ಸಾಹಿತ್ಯ ಪುರಸ್ಕಾರ ಪ್ರದಾನ

ಉಡುಪಿ, ಡಿ.5: ಕಥೊಲಿಕ್ ಸಭಾ ಉಡುಪಿ ಪ್ರದೇಶ, ಆಮ್ಚ ಸಂದೇಶ್ ಕೊಂಕಣಿ ಮಾಸಿಕ ಮತ್ತು ಕೊಂಕಣಿ ಸಂಘಟನೆ ಉಡುಪಿ ಇವುಗಳ ಜಂಟಿ ಆಶ್ರಯದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ರವಿವಾರ ಆಯೋಜಿಸಲಾದ ಆಮ್ಚೊಂ ಸಂದೇಶ್ ಪ್ರತಿನಿಧಿಗಳ ಮತ್ತು ಬರಹಗಾರರ ಸಮ್ಮೇಳನದಲ್ಲಿ ಯುವ ಸಾಹಿತಿಗಳಿಗೆ ನೀಡುವ ದಿ.ಜೋಸೆಫ್ ಮತ್ತು ಮೇರಿ ಪಿಂಟೊ ನಿಡ್ಡೋಡಿ ಸ್ಮಾರಕ ಸಾಹಿತ್ಯ ಪುರಸ್ಕಾರವನ್ನು ವಿತಾಶಾ ರಿಯಾ ರೊಡ್ರಿಗಸ್ (ಮುದ್ದು ತೀರ್ಥಹಳ್ಳಿ) ಅವರಿಗೆ ಪ್ರದಾನ ಮಾಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ ಮಾತನಾಡಿ, ಉತ್ತಮ ಬರಹಗಾರನಾಗ ಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು. ಇದರಿಂದ ನಮ್ಮಲ್ಲಿ ಜ್ಞಾನದ ವೃದ್ದಿಯಾಗುತ್ತದೆ ಮತ್ತು ಬರೆಯುವ ಕಲೆ ನಮ್ಮಲ್ಲಿ ಹುಟ್ಟಿಕೊಂಡು ಮುಂದೆ ಸಮಾಜದಲ್ಲಿ ಉತ್ತಮ ಬರಹಗಾರ, ಸಾಹಿತಿಯಾಗಲು ಸಾಧ್ಯವಾಗುತ್ತದೆ ಎಂದರು.

ದೈಜಿ ವಲ್ಡ್ ಮಂಗಳೂರು ಬ್ಯೂರೊ ಮುಖ್ಯಸ್ಥ ಸ್ಟ್ಯಾನಿ ಬೇಳಾ ಪ್ರಚಲಿತ ಲೇಖನಗಳನ್ನು ಬರೆಯುವ ಕುರಿತು, ಆಮ್ಚೊ ಸಂದೇಶ್ ಪತ್ರಿಕೆಯ ವಿಲ್ಫ್ರೇಡ್ ಲೋಬೊ ಸಂಪಾದಕರಿಗೆ ಪತ್ರ ಬರೆಯುವ ಕುರಿತು, ಉಡುಪಿ ಧರ್ಮ ಪ್ರಾಂತ್ಯದ ಮಾಧ್ಯಮ ಸಂಯೋಜಕ ಮೈಕಲ್ ರೊಡ್ರಿಗಸ್ ವರದಿಗಾರಿಕೆಯ ಕುರಿತು ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಮೇರಿ ಡಿಸೋಜ ವಹಿಸಿದ್ದರು. ಕಲ್ಯಾಣಪುರ ಸಂತೆಕಟ್ಟೆ ದಿವ್ಯದೀಪ ಪ್ರಕಾಶನದ ವತಿ ಯಿಂದ ಮರುಮುದ್ರಣಗೊಂಡ ರಾಕ್ಣೋ ವಾರಪತ್ರಿಕೆಯ ಮಾಜಿ ಸಂಪಾದಕ ವಂಮಾರ್ಕ್ ವಾಲ್ಡರ್ ಅವರ ಆತ್ಮಚರಿತ್ರೆ ಲೊಕಾಚೊ ಯಾಜಕ್ ಪುಸ್ತಕವನ್ನು ಅನಾವರಣಗೊಳಿಸಲಾಯಿತು.

ಕಥೊಲಿಕ್ ಸಭಾ ಉಡುಪಿ ಪ್ರದೇಶ ಪ್ರಧಾನ ಕಾರ್ಯದರ್ಶಿ ಗ್ರೆಗೋರಿ ಪಿಕೆ ಡಿಸೋಜ, ಮಾಜಿ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್, ಆಮ್ಚಾ ಸಂದೇಶ್ ಸಂಚಾಲಕ ಎಲ್ರೋಯ್ ಕಿರಣ್ ಕ್ರಾಸ್ಟೊ, ಕಥೊಲಿಕ್ ಸಭಾ ಮಂಗಳೂರು ಪ್ರದೇಶ ಕೋಶಾಧಿಕಾರಿ ಮೆಲ್ರಿಡಾ ರೊಡ್ರಿಗಸ್, ದಿ.ಜೋಸೆಪ್ ಮೇರಿ ಪಿಂಟೊ ನಿಡ್ಡೋಡಿ ಕುಟುಂಬಿಕರಾದ ವಾಲ್ಟರ್ ಸಿರಿಲ್ ಪಿಂಟೊ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಚಾಲಕ ಡಾ.ಜೆರಾಲ್ಡ್ ಪಿಂಟೊ ಸ್ವಾಗತಿಸಿದರು. ಎಡ್ವರ್ಡ್ ಲಾರ್ಸನ್ ಡಿಸೋಜ ಪೇತ್ರಿ ಅತಿಥಿಗಳ ಪರಿಚಯ ಮಾಡಿದರು. ಕಲ್ಯಾಣಪುರ ವಲಯ ಅಧ್ಯಕ್ಷ ರೋಜಿ ಬಾರೆಟ್ಟೊ ವಂದಿಸಿದರು. ಡಾ ಫ್ಲಾವಿಯಾ ಕ್ಯಾಸ್ತಲಿನೊ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X