Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್:‌ ಆಂಗ್‌ ಸಾನ್‌ ಸೂಕಿಗೆ 4...

ಮ್ಯಾನ್ಮಾರ್:‌ ಆಂಗ್‌ ಸಾನ್‌ ಸೂಕಿಗೆ 4 ವರ್ಷಗಳ ಜೈಲುಶಿಕ್ಷೆ ವಿಧಿಸಿದ ಸೇನಾಡಳಿತ

ವಾರ್ತಾಭಾರತಿವಾರ್ತಾಭಾರತಿ6 Dec 2021 12:17 PM IST
share
ಮ್ಯಾನ್ಮಾರ್:‌ ಆಂಗ್‌ ಸಾನ್‌ ಸೂಕಿಗೆ 4 ವರ್ಷಗಳ ಜೈಲುಶಿಕ್ಷೆ ವಿಧಿಸಿದ ಸೇನಾಡಳಿತ

ಯಾಂಗಾನ್, ಡಿ.6: ಸೇನೆಯ ವಿರುದ್ಧ ದಂಗೆಗೆ ಪ್ರಚೋದನೆ ನೀಡಿದ ಮತ್ತು ಕೊರೋನ ನಿಯಮವನ್ನು ಉಲ್ಲಂಘಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮ್ಯಾನ್ಮಾರ್‌ನ ಪದಚ್ಯುತ ನಾಯಕಿ ಆಂಗ್ ಸಾನ್ ಸೂಕಿಗೆ ವಿಶೇಷ ನ್ಯಾಯಾಲಯ 4 ವರ್ಷದ ಜೈಲುಶಿಕ್ಷೆ ವಿಧಿಸಿರುವುದಾಗಿ ವರದಿಯಾಗಿದೆ. ‌

76 ವರ್ಷದ ಸೂಕಿ ವಿರುದ್ಧ ದಾಖಲಾಗಿರುವ ಸರಣಿ ಪ್ರಕರಣಗಳಲ್ಲಿ ಇನ್ನೂ ಕೆಲವು ಪ್ರಕರಣಗಳ ಕುರಿತ ತೀರ್ಪು ಬರಬೇಕಿದೆ. ಫೆ.1ರಂದು ಸೂಕಿ ನೇತೃತ್ವದ ಸರಕಾರವನ್ನು ಪದಚ್ಯುತಗೊಳಿಸಿದ್ದ ಸೇನೆ ಅಧಿಕಾರ ವಶಪಡಿಸಿಕೊಂಡಂದಿನಿಂದ ಸೂಕಿ ಬಂಧನದಲ್ಲಿದ್ದಾರೆ. ಸರಕಾರದ ರಹಸ್ಯ ಉಲ್ಲಂಘನೆ, ಭ್ರಷ್ಟಾಚಾರ, ಚುನಾವಣೆಯಲ್ಲಿ ಅಕ್ರಮ ಎಸಗಿರುವುದು ಸೇರಿದಂತೆ ಹಲವು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದು ಅಪರಾಧಿಯೆಂದು ಸಾಬೀತಾದರೆ ಸುಮಾರು 100 ವರ್ಷ ಜೈಲುಶಿಕ್ಷೆಗೆ ಗುರಿಯಾಗಲಿದ್ದಾರೆ. 

ಸೇನೆಯ ವಿರುದ್ಧ ದಂಗೆಗೆ ಪ್ರಚೋದನೆ ನೀಡಿದ್ದಕ್ಕೆ 2 ವರ್ಷ, ಕೊರೋನ ಸೋಂಕಿಗೆ ಸಂಬಂಧಿಸಿದ ಪ್ರಾಕೃತಿಕ ದುರಂತ ಕಾಯ್ದೆಯ ಉಲ್ಲಂಘನೆಗೆ ಮತ್ತೂ 2 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ ಎಂದು ಸೇನಾಡಳಿತದ ವಕ್ತಾರ ಝಾವೊ ಮಿನ್ಟುನ್ ಹೇಳಿಕೆಯನ್ನು ಉಲ್ಲೇಖಿಸಿ ಎಎಫ್ಪಿ ಸುದ್ಧಿಸಂಸ್ಥೆ ವರದಿ ಮಾಡಿದೆ. ಇದೇ ಅಪರಾಧದಡಿ ಮಾಜಿ ಅಧ್ಯಕ್ಷ ವಿನ್ ಮಿಂಟ್ ಅವರಿಗೂ 4 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ಆದರೆ ಇಬ್ಬರು ಮುಖಂಡರನ್ನು ಇನ್ನೂ ಜೈಲಿನಲ್ಲಿ ಇರಿಸಲಾಗಿಲ್ಲ. ಅವರು ಈಗ ಬಂಧನದಲ್ಲಿರುವ ಸ್ಥಳದಲ್ಲೇ ಉಳಿದ ಪ್ರಕರಣಗಳ ವಿಚಾರಣೆ ಮುಗಿದ ಬಳಿಕ ಅವರನ್ನು ಜೈಲಿಗೆ ಹಾಕಲಾಗುವುದು ಎಂದವರು ಹೇಳಿದ್ದಾರೆ. 

1989ರಿಂದ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗಾಗಿ ಹೋರಾಟ ನಡೆಸುತ್ತಿರುವ ಸೂಕಿ, ಇದುವರೆಗೆ 15 ವರ್ಷ ಜೈಲಿನಲ್ಲಿ ಕಳೆದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸೂಕಿ ಸ್ಪರ್ಧಿಸದಂತೆ ನೋಡಿಕೊಳ್ಳುವುದು ಸೇನಾಡಳಿತದ ಉದ್ದೇಶವಾಗಿದೆ. ಮ್ಯಾನ್ಮಾರ್ ಕಾನೂನಿನ ಪ್ರಕಾರ, ಕ್ರಿಮಿನಲ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದವರು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಸೇನಾ ಕ್ರಾಂತಿಯನ್ನು ಖಂಡಿಸಿ ಸೂಕಿ ಅವರ ಪಕ್ಷ ‘ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ’ ಫೇಸ್‌ಬುಕ್‌ನಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿ ಪ್ರಥಮ ಪ್ರಕರಣ ದಾಖಲಾಗಿದ್ದರೆ, ಕೊರೋನ ಸೋಂಕು ನಿಯಮ ಉಲ್ಲಂಘನೆ ಪ್ರಕರಣ ಕಳೆದ ವರ್ಷ ನಡೆದ ಚುನಾವಣೆಗೆ ಸಂಬಂಧಿಸಿದ್ದಾಗಿದೆ( ಚುನಾವಣೆಯಲ್ಲಿ ಸೂಕಿ ಅವರ ಪಕ್ಷ ಭರ್ಜರಿ ಬಹುಮತದಿಂದ ಗೆಲುವು ಸಾಧಿಸಿತ್ತು). 

ಚುನಾವಣೆಯಲ್ಲಿ ಸೇನೆ ಬೆಂಬಲಿತ ಪಕ್ಷ ಪರಾಜಯಗೊಂಡಿದ್ದು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಸೇನೆ ಆರೋಪಿಸಿತ್ತು. ಆದರೆ ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಚುನಾವಣೆಯ ಉಸ್ತುವಾರಿ ವಹಿಸಿದ್ದ ಸ್ವತಂತ್ರ ವೀಕ್ಷಕರ ತಂಡ ಹೇಳಿತ್ತು. ನೇಪಿಡಾವ್ನಲ್ಲಿ ಸೋಮವಾರ ನಡೆದ ವಿಶೇಷ ನ್ಯಾಯಾಲಯದ ಕಾರ್ಯಕಲಾಪಕ್ಕೆ ಹಾಜರಾಗಲು ಪತ್ರಕರ್ತರಿಗೆ ಅವಕಾಶ ನಿರಾಕರಿಸಲಾಗಿತ್ತು. ಸೂಕಿ ಅವರ ವಕೀಲರು ಮಾಧ್ಯಮದವರೊಂದಿಗೆ ಮಾತನಾನಾಡುವುದನ್ನೂ ನಿಷೇಧಿಸಲಾಗಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಸೂಕಿ ಅವರ ವಕೀಲರು ಹೇಳಿದ್ದಾರೆ.

ಈ ಮಧ್ಯೆ, ಸೂಕಿ ಹಾಗೂ ವಿನ್ ಮಿಂಟ್ ವಿರುದ್ಧ ಕಳೆದ ವಾರ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ನ್ಯಾಷನಲ್ ಲೀಗ್ ಪಕ್ಷದ ಹಲವು ಮುಖಂಡರಿಗೆ ದೀರ್ಘಾವಧಿ ಜೈಲುಶಿಕ್ಷೆ ಪ್ರಕಟಿಸಲಾಗಿದೆ. ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿಯೊಬ್ಬರಿಗೆ 75 ವರ್ಷದ ಜೈಲುಶಿಕ್ಷೆ, ಸೂಕಿಯ ನಿಕಟವರ್ತಿ ಮುಖಂಡನಿಗೆ 20 ವರ್ಷದ ಜೈಲುಶಿಕ್ಷೆಯಾಗಿದೆ. 

ಆ್ಯಮ್ನೆಸ್ಟಿ ಖಂಡನೆ: ಸೂಕಿ ವಿರುದ್ಧದ ತೀರ್ಪಿಗೆ ಆ್ಯಮ್ನೆಸ್ಟಿ ಇಂಟರ್ನ್ಯಾಷನಲ್ ಖಂಡನೆ ಸೂಚಿಸಿದೆ. ಎಲ್ಲಾ ವಿಪಕ್ಷದವರನ್ನೂ ನಿವಾರಿಸಿ, ಸ್ವಾತಂತ್ರ್ಯ ಮತ್ತು ಹಕ್ಕುಗಳನ್ನು ಹತ್ತಿಕ್ಕುವ ಸೇನಾಡಳಿತದ ಉದ್ದೇಶಕ್ಕೆ ಬೋಗಸ್ ಆರೋಪದಡಿ ಸೂಕಿಗೆ ಶಿಕ್ಷೆ ವಿಧಿಸಿರುವುದು ಮತ್ತೊಂದು ಉದಾಹರಣೆಯಾಗಿದೆ ಎಂದು ಆ್ಯಮ್ನೆಸ್ಟಿ ಇಂಟರ್ನ್ಯಾಷನಲ್ ನ ಉಪ ಪ್ರಾದೇಶಿಕ ನಿರ್ದೇಶಕ ಮಿಂಗ್ ಯು ಹಾ ಖಂಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X